AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇದಿಕೆ ಮೇಲೇ ನಟಿಯನ್ನು ತಳ್ಳಿದ ಬಾಲಯ್ಯ; ಶಾಕಿಂಗ್ ವಿಡಿಯೋ ವೈರಲ್

ಅಂಜಲಿ, ನೇಹಾ ಶೆಟ್ಟಿ ಮೊದಲಾದವರು ವೇದಿಕೆ ಮೇಲೆ ನಿಂತಿದ್ದರು. ಬಾಲಯ್ಯ ಅವರು ಅಂಜಲಿಗೆ ಏನನ್ನೋ ಹೇಳುವ ಪ್ರಯುತ್ನ ಮಾಡಿದ್ದಾರೆ. ಆದರೆ, ಅವರಿಗೆ ಇದು ಕೇಳಿಲ್ಲ. ಇದರಿಂದ ಸಿಟ್ಟಾದ ಬಾಲಯ್ಯ ಅವರು ಅಂಜಲಿಯನ್ನು ತಳ್ಳಿದ್ದಾರೆ.

ವೇದಿಕೆ ಮೇಲೇ ನಟಿಯನ್ನು ತಳ್ಳಿದ ಬಾಲಯ್ಯ; ಶಾಕಿಂಗ್ ವಿಡಿಯೋ ವೈರಲ್
ಅಂಜಲಿ
ರಾಜೇಶ್ ದುಗ್ಗುಮನೆ
|

Updated on: May 30, 2024 | 10:34 AM

Share

ನಂದಮೂರಿ ಬಾಲಕೃಷ್ಣ (Nandamuri Balakrishna) ಅವರು ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಅವರಿಗೆ ಮುಂಗೋಪ ಜಾಸ್ತಿ. ಅವರು ಸಹ ನಟರ ಮೇಲೆ, ಫ್ಯಾನ್ಸ್ ಮೇಲೆ ರೇಗಾಡಿದ ಸಾಕಷ್ಟು ಉದಾಹರಣೆ ಇದೆ. ಈಗ ಅವರು ನಟಿ ಅಂಜಲಿ ಅವರನ್ನು ತಳ್ಳಿದ ವಿಡಿಯೋ ವೈರಲ್ ಆಗಿದೆ. ಬಾಲಯ್ಯ ಅವರು ಅಂಜಲಿ ನಟನೆಯ ‘ಗ್ಯಾಂಗ್ ಆಫ್ ಗೋದಾವರಿ’ ಚಿತ್ರದ ಈವೆಂಟ್​ಗೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ಚಿತ್ರದಲ್ಲಿ ವಿಶ್ವಕ್ ಸೇನ್ ಹಾಗೂ ನೇಹಾ ಶೆಟ್ಟಿ (Neha Shetty) ಕೂಡ ನಟಿಸಿದ್ದಾರೆ. ಈ ಸಿನಿಮಾದ ಕಾರ್ಯಕ್ರಮದ ವೇದಿಕೆ ಮೇಲೆ ನಡೆದ ಘಟನೆ ಅನೇಕರನ್ನು ಬೆಚ್ಚಿ ಬೀಳಿಸಿದೆ.

ಅಂಜಲಿ, ನೇಹಾ ಶೆಟ್ಟಿ ಮೊದಲಾದವರು ವೇದಿಕೆ ಮೇಲೆ ನಿಂತಿದ್ದರು. ಬಾಲಯ್ಯ ಅವರು ಅಂಜಲಿಗೆ ಏನನ್ನೋ ಹೇಳುವ ಪ್ರಯುತ್ನ ಮಾಡಿದ್ದಾರೆ. ಆದರೆ, ಅವರಿಗೆ ಇದು ಕೇಳಿಲ್ಲ. ಇದರಿಂದ ಸಿಟ್ಟಾದ ಬಾಲಯ್ಯ ಅವರು ಅಂಜಲಿಯನ್ನು ತಳ್ಳಿದ್ದಾರೆ. ಅಲ್ಲೇ ಇದ್ದ ನೇಹಾ ಶೆಟ್ಟಿ ಈ ಘಟನೆಯಿಂದ ಶಾಕ್ ಆದರು. ಆದರೆ, ಅಂಜಲಿ ಅವರು ಏನನ್ನೂ ತೋರಿಸಿಕೊಳ್ಳದೆ ನಕ್ಕಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಅನೇಕರು ಟೀಕೆ ವ್ಯಕ್ತಪಡಿಸಿದ್ದಾರೆ.

‘ಬಾಲಯ್ಯ ಅವರು ಈ ರೀತಿ ಮಾಡಿದ್ದು ಸರಿ ಅಲ್ಲ’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ‘ಬಾಲಯ್ಯ ಅವರು ಈ ರೀತಿ ನಡೆದುಕೊಳ್ಳುತ್ತಿರುವುದು ಹೊಸದಲ್ಲ’ ಎಂದಿದ್ದಾರೆ. ‘ಹಿರಿಯ ನಟನಾಗಿ ಹೇಗೆ ನಡೆದುಕೊಳ್ಳಬೇಕು ಅನ್ನೋದು ಗೊತ್ತಿಲ್ಲ’ ಎಂದು ಅನೇಕರು ಬಾಲಯ್ಯ ಅವರನ್ನು ಟೀಕಿಸುತ್ತಿದ್ದಾರೆ.

ಇದನ್ನೂ ಓದಿ: ಚುನಾವಣೆ ಮುಗಿದರಾಗಿಲ್ಲ, ಫಲಿತಾಂಶವೂ ಬರಬೇಕು; ಸಿನಿಮಾದಿಂದ ದೂರವೇ ಉಳಿದ ಬಾಲಯ್ಯ 

ಬಾಲಯ್ಯ ಅವರು 100ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಅಖಂಡ’, ‘ವೀರಸಿಂಹ ರೆಡ್ಡಿ, ‘ಭಗವಾನ್ ಕೇಸರಿ’ ಮೊದಲಾದ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿವೆ. 2023ರಲ್ಲಿ ರಿಲೀಸ್ ಆದ ‘ವೀರಸಿಂಹ ರೆಡ್ಡಿ’ ಅವರ ನಟನೆಯ ಕೊನೆಯ ಸಿನಿಮಾ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 132 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ‘ಅಖಂಡ 2’ ಚಿತ್ರದಲ್ಲಿ ಬಾಲಯ್ಯ ನಟಿಸಲಿದ್ದಾರೆ. ಇತ್ತೀಚೆಗೆ ಬೇರೊಂದು ಸಿನಿಮಾ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಅವರು, ‘ಹೊಸ ಚಿತ್ರದ ಕೆಲಸ ಆರಂಭ ಆಗಿಲ್ಲ. ಚುನಾವಣಾ ಫಲಿತಾಂಶ ಬಂದ ಬಳಿಕವೇ ಕೆಲಸ ಶುರು ಮಾಡುತ್ತೇನೆ’ ಎಂದು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!