AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NBK107: ತೆಲುಗಿನಲ್ಲೂ ರಿಮೇಕ್ ಆಗುತ್ತಿದೆಯಾ ‘ಮಫ್ತಿ’? ಕುತೂಹಲ ಮೂಡಿಸಿದ ‘ಎನ್​ಬಿಕೆ107’ ಪೋಸ್ಟರ್

Nandamuri Balakrishna | Shiva Rajkumar: ನಂದಮೂರಿ ಬಾಲಕೃಷ್ಣ ‘ಅಖಂಡ’ದ ಯಶಸ್ಸಿನಲ್ಲಿದ್ದಾರೆ. ಇದೀಗ ಅವರು ಹೊಸ ಚಿತ್ರ ‘ಎನ್​ಬಿಕೆ 107’ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರದ ಮೊದಲ ಪೋಸ್ಟರ್ ತೀವ್ರ ಕುತೂಹಲ ಹುಟ್ಟುಹಾಕಿದೆ. ಕಾರಣವೇನು?

NBK107: ತೆಲುಗಿನಲ್ಲೂ ರಿಮೇಕ್ ಆಗುತ್ತಿದೆಯಾ ‘ಮಫ್ತಿ’? ಕುತೂಹಲ ಮೂಡಿಸಿದ ‘ಎನ್​ಬಿಕೆ107’ ಪೋಸ್ಟರ್
‘ಎನ್​ಬಿಕೆ107’ ಚಿತ್ರದಲ್ಲಿ ನಂದಮೂರಿ ಬಾಲಕೃಷ್ಣ (ಎಡ), ‘ಮಫ್ತಿ’ಯಲ್ಲಿ ಶಿವಣ್ಣ
TV9 Web
| Edited By: |

Updated on:Feb 23, 2022 | 5:13 PM

Share

ಟಾಲಿವುಡ್​ ಖ್ಯಾತ ನಟ ನಂದಮೂರಿ ಬಾಲಕೃಷ್ಣ (Nandamuri Balakrishna) ‘ಅಖಂಡ’ದ ಯಶಸ್ಸಿನಲ್ಲಿದ್ದಾರೆ. ಚಿತ್ರಮಂದಿರದಲ್ಲಿ ಧೂಳೆಬ್ಬಿಸಿದ್ದ ಈ ಚಿತ್ರ ಇದೀಗ ಒಟಿಟಿಯಲ್ಲೂ ಉತ್ತಮ ಪ್ರದರ್ಶನ ಕಾಣುತ್ತಿದೆ. ಅದರ ಎರಡನೇ ಭಾಗದ ಕುರಿತು ಸುದ್ದಿಗಳು ಕೇಳಿಬರುತ್ತಿರುವಂತೆಯೇ, ಅವರು ಹೊಸ ಚಿತ್ರದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ಬಾಲಕೃಷ್ಣ ನಟನೆಯ 107ನೇ ಚಿತ್ರದ ಶೂಟಿಂಗ್ ಆರಂಭವಾಗಿತ್ತು. ಇನ್ನೂ ಯಾವುದೇ ಶೀರ್ಷಿಕೆ ಅಂತಿಮಗೊಳ್ಳದ ಈ ಚಿತ್ರವನ್ನು ‘ಎನ್​ಬಿಕೆ107’ (NBK 107) ಎಂಬ ಹೆಸರಿನಿಂದ ಗುರುತಿಸಲಾಗುತ್ತಿದೆ. ಚಿತ್ರದ ಮೊದಲ ದಿನದ ಶೂಟಿಂಗ್​ ಸಂದರ್ಭದಲ್ಲಿ ಸೆಟ್​ನಿಂದ ಬಾಲಕೃಷ್ಣ ಅವರ ಲುಕ್​ ಒಂದು ಲೀಕ್ ಆಗಿತ್ತು. ಇದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸೆನ್ಸೇಶನ್ ಮೂಡಿಸಿದ್ದಲ್ಲದೇ, ಚರ್ಚೆಯನ್ನೂ ಹುಟ್ಟುಹಾಕಿತ್ತು. ಇದೀಗ ಚಿತ್ರತಂಡ, ಅಧಿಕೃತ ಪೋಸ್ಟರ್​ ಒಂದನ್ನು ರಿಲೀಸ್ ಮಾಡಿದೆ. ಅದರಲ್ಲಿ ಸಖತ್ ಮಾಸ್ ಆಗಿ ನಂದಮೂರಿ ಬಾಲಕೃಷ್ಣ ಕಾಣಿಸಿಕೊಂಡಿದ್ದಾರೆ. ಆದರೆ ಈ ಪೋಸ್ಟರ್​ ಅಭಿಮಾನಿಗಳಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದೆ.

ನಂದಮೂರಿ ಬಾಲಕೃಷ್ಣ ಲುಕ್​ಗೂ ‘ಮಫ್ತಿ’ ಲುಕ್​ಗೂ ಹೋಲಿಕೆ ಮಾಡುತ್ತಿರುವ ನೆಟ್ಟಿಗರು:

‘ಎನ್​ಬಿಕೆ 107’ ಚಿತ್ರವನ್ನು ನಿರ್ಮಾಣ ಮಾಡುತ್ತಿರುವುದು ಮೈತ್ರಿ ಮೂವಿ ಮೇಕರ್ಸ್. ಇದೀಗ ನಂದಮೂರಿ ಬಾಲಕೃಷ್ಣ ಅವರ ಮೊದಲ ಲುಕ್​ಅನ್ನು ಚಿತ್ರತಂಡ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಅದರಲ್ಲಿ ಬಾಲಕೃಷ್ಣ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವ ಗೋಪಿಚಂದ್ ಟ್ವೀಟ್ ಮಾಡಿ, ಹೊಸ ಅವತಾರದಲ್ಲಿ ಬಾಲಕೃಷ್ಣ ಅವರನ್ನು ನಿಮ್ಮ ಮುಂದೆ ತರುತ್ತಿದ್ದೇವೆ. ದೊಡ್ಡ ಮಟ್ಟದಲ್ಲಿ ಇದು ಮೂಡಿಬರಲಿದೆ ಎಂದಿದ್ದಾರೆ.

‘ಎನ್​ಬಿಕೆ 107’ ಮೊದಲ ಪೋಸ್ಟರ್ ವೈರಲ್ ಆಗಿರುವಂತೆಯೇ ನೆಟ್ಟಿಗರಲ್ಲಿ ಹೊಸ ಪ್ರಶ್ನೆಯೊಂದು ಮೂಡಿದೆ. ಇದಕ್ಕೆ ಕಾರಣ ಸಾಮ್ಯತೆ! ಹೌದು. ಕನ್ನಡದ ಸೂಪರ್ ಹಿಟ್ ಚಿತ್ರವಾದ ‘ಮಫ್ತಿ’ಯಲ್ಲಿ ಶಿವರಾಜ್​ಕುಮಾರ್ ತೀರಾ ಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದರು. ನರ್ತನ್ ನಿರ್ದೇಶಿಸಿದ್ದ ಆ ಚಿತ್ರದಲ್ಲಿ ಶ್ರೀಮುರುಳಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಕಣ್ಣುಗಳ ಮೂಲಕವೇ ಖಡಕ್ ಆಗಿ ಅಭಿನಯಿಸಿದ್ದ ಶಿವಣ್ಣ, ಹೊಸ ಟ್ರೆಂಡ್ ಸೃಷ್ಟಿಸಿದ್ದರು.

ಭೈರತಿ ರಣಗಲ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಶಿವಣ್ಣ ಅವರ ಲುಕ್​ನಂತೆಯೇ ನಂದಮೂರಿ ಬಾಲೃಷ್ಣ ಅವರ ಹೊಸ ಚಿತ್ರದ ಪಾತ್ರ ಮೂಡಿಬಂದಿದೆ. ಇದು ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಹುಟ್ಟುಹಾಕಿದೆ. ಈಗಾಗಲೇ ತಮಿಳಿನಲ್ಲಿ ರಿಮೇಕ್ ಆಗುತ್ತಿರುವ ‘ಮಫ್ತಿ’ ಚಿತ್ರ, ತೆಲುಗಿನಲ್ಲಿಯೂ ರಿಮೇಕ್ ಆಗುತ್ತಿದೆಯೇ ಎಂಬ ಅಚ್ಚರಿಯನ್ನು ನೆಟ್ಟಿಗರು ಹೊರಹಾಕಿದ್ದಾರೆ.

ಶಿವರಾಜ್​ಕುಮಾರ್ ಹಾಗೂ ಬಾಲಕೃಷ್ಣ ಅವರ ಗೆಟಪ್​ಗಳು ಬಹುತೇಕ ಒಂದೇ ರೀತಿ ಇದೆ. ಇದೇ ಕಾರಣದಿಂದ ನೆಟ್ಟಿಗರು ಇದು ‘ಮಫ್ತಿ’ಯ ರಿಮೇಕ್ ಹೌದೇ? ಎಂಬ ಪ್ರಶ್ನೆಯನ್ನು ಎತ್ತಿದ್ದಾರೆ. ಒಂದು ವೇಳೆ ಹೌದು ಎಂದಾಗಿದ್ದರೆ ಇದು ಮತ್ತೊಂದು ಅಮೋಘ ಚಿತ್ರವಾಗಲಿದೆ ಎಂದೂ ಅಭಿಮಾನಿಗಳು ಸಂತಸ ಹಂಚಿಕೊಂಡಿದ್ದಾರೆ. ‘ಮಫ್ತಿ’ಯ ರಿಮೇಕ್ ಹೌದಾಗಿದ್ದರೆ, ಶ್ರೀಮುರುಳಿ ಪಾತ್ರ ಯಾರದ್ದು ಎಂಬ ಚರ್ಚೆಯೂ ಜೋರಾಗಿದೆ. ಕೆಲವರು ಇದು ಸ್ವಮೇಕ್ ಚಿತ್ರ. ಗೆಟಪ್ ಮಾತ್ರ ಒಂದೇ ರೀತಿ ಇರಬಹುದು ಎಂದೂ ಅನಿಸಿಕೆ ಹಂಚಿಕೊಂಡಿದ್ದಾರೆ. ಆದರೆ ಈ ಬಗ್ಗೆ ಚಿತ್ರತಂಡ ಯಾವುದೇ ಮಾಹಿತಿ ನೀಡಿಲ್ಲ. ಹೀಗಾಗಿ ‘ಎನ್​ಬಿಕೆ107’ ಮಫ್ತಿಯ ರಿಮೇಕ್ ಹೌದೇ ಅಥವಾ ಅಲ್ಲವೇ ಎಂಬುದು ಖಚಿತವಾಗಿಲ್ಲ. ಆದರೆ ಬಾಲಕೃಷ್ಣರ ಗೆಟಪ್ ನೋಡಿ ಅಭಿಮಾನಿಗಳು ಥ್ರಿಲ್ ಆಗಿರೋದು ಸುಳ್ಳಲ್ಲ.

‘ಎನ್​ಬಿಕೆ 107’ ಚಿತ್ರದ ಪೋಸ್ಟರ್ ಇಲ್ಲಿದೆ:

ಈಗಾಗಲೇ ‘ಎನ್​ಬಿಕೆ107’ ತಾರಾಗಣದ ಕಾರಣದಿಂದ ಸುದ್ದಿ ಮಾಡಿದೆ. ಸ್ಯಾಂಡಲ್​ವುಡ್​​ನ ತಾರೆ ದುನಿಯಾ ವಿಜಯ್ ಇದೇ ಚಿತ್ರದ ಮೂಲಕ ಟಾಲಿವುಡ್​ ಪದಾರ್ಪಣೆ ಮಾಡುತ್ತಿದ್ದಾರೆ. ಶೃತಿ ಹಾಸನ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದು, ವರಲಕ್ಷ್ಮಿ ಶರತ್​ಕುಮಾರ್ ಕೂಡ ನಟಿಸುತ್ತಿದ್ದಾರೆ. ಈ ಕಾರಣ ಚಿತ್ರದ ಮೇಲೆ ದೊಡ್ಡ ನಿರೀಕ್ಷೆ ಮೂಡಿದೆ. ಇದೀಗ ಚಿತ್ರದಲ್ಲಿ ‘ಮಫ್ತಿ’ ಗೆಟಪ್​ನಲ್ಲಿ ನಂದಮೂರಿ ಬಾಲಕೃಷ್ಣ ಕಾಣಿಸಿಕೊಂಡಿದ್ದು ಚಿತ್ರ ಮತ್ತಷ್ಟು ಸದ್ದು ಮಾಡುತ್ತಿದೆ.

ಇದನ್ನೂ ಓದಿ:

Puneeth Rajkumar: ಥೇಟ್​​ ಪುನೀತ್​ರಂತೆಯೇ ಇದ್ದಾರೆ ಈ ನಾಯಕ ನಟ; ಅವರ ಹೊಸ ಸಿನಿಮಾ ಯಾವುದು?

‘ಇಂಥ ಸಿನಿಮಾ ಮಾಡೋದಕ್ಕೆ ಹೆಮ್ಮೆ ಇದೆ’ ಹೊಸ ಚಿತ್ರದ ಬಗ್ಗೆ ಮಾಹಿತಿ ಬಿಟ್ಟುಕೊಟ್ಟ ಮೇಘನಾ ರಾಜ್​

Published On - 5:10 pm, Wed, 23 February 22

3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್