AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ ಎನ್​ಟಿಆರ್ ಕುರಿತ ಪ್ರಶ್ನೆಗೆ ‘ಐ ಡೋಂಟ್ ಕೇರ್’ ಎಂದ ಬಾಲಕೃಷ್ಣ: ಎನ್​ಟಿಆರ್ ಕುಟುಂಬ ಮುನಿಸು ತಾರಕಕ್ಕೆ

Jr NTR v/s Balakrishna: ಜೂ ಎನ್​ಟಿಆರ್ ಕುರಿತು ಕೇಳಲಾದ ಪ್ರಶ್ನೆಗೆ ಶಾಕಿಂಗ್ ಉತ್ತರವನ್ನು ಬಾಲಕೃಷ್ಣ ನೀಡಿದ್ದಾರೆ. ನಂದಮೂರಿ ಕುಟುಂಬದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಮತ್ತೊಮ್ಮೆ ಜಗಜ್ಜಾಹೀರು ಮಾಡಿದ್ದಾರೆ.

ಜೂ ಎನ್​ಟಿಆರ್ ಕುರಿತ ಪ್ರಶ್ನೆಗೆ 'ಐ ಡೋಂಟ್ ಕೇರ್' ಎಂದ ಬಾಲಕೃಷ್ಣ: ಎನ್​ಟಿಆರ್ ಕುಟುಂಬ ಮುನಿಸು ತಾರಕಕ್ಕೆ
ಬಾಲಕೃಷ್ಣ-ಜೂ ಎನ್​ಟಿಆರ್
ಮಂಜುನಾಥ ಸಿ.
|

Updated on: Oct 05, 2023 | 7:49 PM

Share

ಅವಿಭಜಿತ ಆಂಧ್ರ ಪ್ರದೇಶದ (Andhra Pradesh) ಸಿನಿಮಾ ಹಾಗೂ ರಾಜಕೀಯ ಎರಡರ ಮೇಲೂ ನಂದಮೂರಿ ಕುಟುಂಬದ ಪ್ರಭಾವ ಬಲು ಗಾಢವಾದುದು. ಸೀನಿಯರ್ ಎನ್​ಟಿಆರ್ ತೆಲುಗು ಚಿತ್ರರಂಗದ ದಂತಕತೆ ಎನಿಸಿಕೊಂಡವರು, ಜೊತೆಗೆ ಕಾಂಗ್ರೆಸ್ ಅನ್ನು ಎದುರು ಹಾಕಿಕೊಂಡು ಸ್ವಂತ ಪಕ್ಷ ಕಟ್ಟಿ ಅಧಿಕಾರಕ್ಕೇರಿ ಸಿಎಂ ಆದವರು. ಅವರ ಕುಟುಂಬ ಸದಸ್ಯರು ಇಂದಿಗೂ ರಾಜಕೀಯ ಹಾಗೂ ಸಿನಿಮಾ ರಂಗ ಎರಡರಲ್ಲೂ ಮುಂಚೂಣಿಯಲ್ಲಿದ್ದಾರೆ. ಆದರೆ ಇದೀಗ ಆ ಕುಟುಂಬದಲ್ಲಿ ದೊಡ್ಡ ಬಿರುಕು ಮೂಡಿದೆ.

ಪ್ರಸ್ತುತ ತೆಲುಗು ಚಿತ್ರರಂಗದ ದೊಡ್ಡ ಸ್ಟಾರ್ ನಟ ಜೂ ಎನ್​ಟಿಆರ್ ಹಾಗೂ ಬಾಲಕೃಷ್ಣ ನಡುವೆ ದೊಡ್ಡ ಬಿರುಕು ಮೂಡಿದೆ. ನಂದಮೂರಿ ಕುಟುಂಬದ ಈಗಿನ ಪ್ರಮುಖರಾಗಿರುವ ಬಾಲಕೃಷ್ಣ ಹಾಗೂ ಆ ಕುಟುಂಬ ಒಡೆತನದ ಪಕ್ಷ ಎನಿಸಿಕೊಂಡಿರುವ ಟಿಡಿಪಿಯ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಜೂ ಎನ್​ಟಿಆರ್ ಅನ್ನು ಕುಟುಂಬದಿಂದ ಹಾಗೂ ಪಕ್ಷದಿಂದ ದೂರ ಇರಿಸಿದ್ದಾರೆ ಎನ್ನಲಾಗಿದ್ದು, ಬಾಲಕೃಷ್ಣ, ಚಂದ್ರಬಾಬು ನಾಯ್ಡು ಹಾಗೂ ಜೂ ಎನ್​ಟಿಆರ್ ಮಧ್ಯೆ ಎಲ್ಲವೂ ಸರಿಯಿಲ್ಲ ಎಂಬುದು ಪದೇ ಪದೇ ಸಾಬೀತಾಗುತ್ತಿದೆ.

ಇದೀಗ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಹಲವು ದಿನಗಳಿಂದಲೂ ಜೈಲಿನಲ್ಲಿದ್ದಾರೆ. ಆದರೆ ಈ ಬಗ್ಗೆ ಜೂ ಎನ್​ಟಿಆರ್ ಯಾವುದೇ ಸಾಮಾಜಿಕ ಜಾಲತಾಣ ಪೋಸ್ಟ್ ಆಗಲಿ, ಬಹಿರಂಗ ಹೇಳಿಕೆಯನ್ನಾಗಲಿ ನೀಡಿಲ್ಲ. ಬದಲಿಗೆ ಕುಟುಂಬದೊಟ್ಟಿಗೆ ವಿದೇಶ ಪ್ರವಾಸ ಮಾಡಿ ಬಂದರು. ಇದು ಬಾಲಕೃಷ್ಣ ಹಾಗೂ ಚಂದ್ರಬಾಬು ನಾಯ್ಡು ಅಭಿಮಾನಿಗಳಿಗೆ ಬೇಸರ ತರಿಸಿದೆ.

ಇದನ್ನೂ ಓದಿ:ಜೂ ಎನ್​ಟಿಆರ್ ನಟನೆಯ ದೇವರ ಸಿನಿಮಾದಿಂದ ಭರ್ಜರಿ ಅಪ್​ಡೇಟ್: ಅಭಿಮಾನಿಗಳು ಹ್ಯಾಪಿ

ಚಂದ್ರಬಾಬು ನಾಯ್ಡು ಗೈರಿನಲ್ಲಿ ಕಳೆದ ಕೆಲವು ದಿನಗಳಿಂದ ಪಕ್ಷವನ್ನು ಮುನ್ನಡೆಸುತ್ತಿರುವ ನಂದಮೂರಿ ಬಾಲಕೃಷ್ಣ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಜೂ ಎನ್​ಟಿಆರ್ ಬಗ್ಗೆ ಆಸಕ್ತಿಕರ ಕಮೆಂಟ್ ಮಾಡಿದ್ದಾರೆ. ಜೂ ಎನ್​ಟಿಆರ್ ಏಕೆ ಚಂದ್ರಬಾಬು ನಾಯ್ಡು ಬಂಧನದ ಬಗ್ಗೆ ಪ್ರತಿಕ್ರಿಯಿಸಿಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ, ಸಿನಿಮಾ ಶೈಲಿಯಲ್ಲಿ, ‘ಐ ಡೋಂಟ್ ಕೇರ್’ ಎಂದಿದ್ದಾರೆ. ಮುಂದುವರೆದು, ‘ಬ್ರೋ ಐ ಡೋಂಟ್ ಕೇರ್’ ಇದು ನನ್ನ ಮುಂದಿನ ಸಿನಿಮಾದ ಹೆಸರು, ಸಿನಿಮಾದಲ್ಲಿ ಮಾತ್ರವಲ್ಲ, ಸಿನಿಮಾದ ಹೊರಗೂ ಸಹ ‘ಐ ಡೋಂಟ್ ಕೇರ್’ ಎಂದಿದ್ದಾರೆ.

ಅಸಲಿಗೆ ಚಂದ್ರಬಾಬು ನಾಯ್ಡು ಅವರೇ ಜೂ ಎನ್​ಟಿಆರ್ ಅನ್ನು ಪಕ್ಷದಿಂದ ದೂರ ಇರಿಸಿದ್ದಾರೆ ಎನ್ನಲಾಗುತ್ತಿದೆ. ಟಿಡಿಪಿ ಪಕ್ಷ ಹಾಗೂ ನಂದಮೂರಿ ಕುಟುಂಬದ ವತಿಯಿಂದ ಎನ್​ಟಿಆರ್ ಜನ್ಮ ಶತಮಾನೋತ್ಸವ ಆಚರಣೆ ಮಾಡಿದಾಗ ಜೂ ಎನ್​ಟಿಆರ್ ಅವರಿಗೆ ಆಹ್ವಾನ ಇರಲಿಲ್ಲ. ಕಾರ್ಯಕ್ರಮದ ನಡೆದಾಗಲೂ ಜೂ ಎನ್​ಟಿಆರ್ ಪೋಸ್ಟರ್ ಅನ್ನು ಎಲ್ಲಿಯೂ ಹಾಕಿಸಿರಲಿಲ್ಲ, ಜೂ ಎನ್​ಟಿಆರ್ ಪೋಸ್ಟರ್ ಅನ್ನು ಕಾರ್ಯಕ್ರಮಕ್ಕೆ ತಂದ ಅಭಿಮಾನಿಗಳನ್ನು ಸಹ ಹೊರಗಟ್ಟಲಾಗಿತ್ತು. ಇದು ಜೂ ಎನ್​ಟಿಆರ್ ಅನ್ನು ಹಾಗೂ ಅವರ ಅಭಿಮಾನಿಗಳನ್ನು ಕೆರಳಿಸಿತ್ತು. ಇದೇ ಕಾರಣಕ್ಕೆ ಜೂ ಎನ್​ಟಿಆರ್ ಚಂದ್ರಬಾಬು ನಾಯ್ಡು ಹಾಗೂ ಅವರ ಬಲಗೈ ಭಂಟನಂತಿರುವ ಬಾಲಕೃಷ್ಣ ಅವರ ಬಗ್ಗೆ ಅಸಮಾಧಾನ ಮೂಡಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಇನ್ನೇನು ಕೆಲವೇ ತಿಂಗಳಲ್ಲಿ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಗಳು ಆರಂಭವಾಗಲಿವೆ. ಆ ಸಂದರ್ಭದಲ್ಲಿಯಾದರೂ ಜೂ ಎನ್​ಟಿಆರ್ ಅವರು ಟಿಡಿಪಿ ಪರವಾಗಿ ಪ್ರಚಾರಕ್ಕೆ ಇಳಿಯುತ್ತಾರೆಯೋ ಅಥವಾ ಸಂಪೂರ್ಣವಾಗಿ ಟಿಡಿಪಿ ಹಾಗೂ ನಂದಮೂರಿ ಕುಟುಂಬದಿಂದ ದೂರಾಗುತ್ತಾರೆಯೋ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ