AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಖಂಡ 2’ ಟೀಸರ್: ಊಹಿಸಿದ್ದಕ್ಕಿಂತಲೂ ಹೆಚ್ಚಾಯಿತು ಬಾಲಯ್ಯ ಮಾಸ್ ಅವತಾರ

‘ಅಖಂಡ 2’ ಸಿನಿಮಾದಲ್ಲಿ ನಂದಮೂರಿ ಬಾಲಕೃಷ್ಣ ಅವರು ಸಾಧು ಗೆಟಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಸೆಪ್ಟೆಂಬರ್ 25ಕ್ಕೆ ಈ ಚಿತ್ರ ತೆರೆಕಾಣಲಿದೆ. ಈ ಸಿನಿಮಾ ಬಹಳ ಮಾಸ್ ಆಗಿ ಮೂಡಿಬಂದಿದೆ ಎಂಬುದಕ್ಕೆ ಟೀಸರ್ ಸಾಕ್ಷಿ ನೀಡುತ್ತಿದೆ. ಬಾಲಯ್ಯ ಅವರ ಅಭಿಮಾನಿಗಳಿಗೆ ಟೀಸರ್ ಇಷ್ಟವಾಗಿದೆ.

‘ಅಖಂಡ 2’ ಟೀಸರ್: ಊಹಿಸಿದ್ದಕ್ಕಿಂತಲೂ ಹೆಚ್ಚಾಯಿತು ಬಾಲಯ್ಯ ಮಾಸ್ ಅವತಾರ
Nandamuri Balakrishna
ಮದನ್​ ಕುಮಾರ್​
|

Updated on: Jun 09, 2025 | 7:29 PM

Share

ಟಾಲಿವುಡ್ ನಟ ನಂದಮೂರಿ ಬಾಲಕೃಷ್ಣ (Nandamuri Balakrishna) ಅಭಿನಯದ ‘ಅಖಂಡ 2’ ಸಿನಿಮಾ ಮೇಲೆ ಅವರ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ಈ ವರ್ಷ ದಸರಾ ಹಬ್ಬದ ಸಂದರ್ಭದಲ್ಲಿ ಈ ಚಿತ್ರ ಬಿಡುಗಡೆ ಆಗಿದೆ. ನಿರ್ಮಾಪಕರು ಈ ಚಿತ್ರದ ರಿಲೀಸ್ ದಿನಾಂಕ ಘೋಷಿಸಿದ್ದಾರೆ. ಸೆಪ್ಟೆಂಬರ್ 25ರಂದು ಸಿನಿಮಾ ತೆರೆಕಾಣಲಿದೆ ಎಂದು ಖಚಿತಪಡಿಸಿದ್ದಾರೆ. ‘ಅಖಂಡ 2’ ಸಿನಿಮಾದ ಟೀಸರ್ (Akhanda 2 Teaser) ಬಿಡುಗಡೆ ಮಾಡಲಾಗಿದೆ. ಈ ಟೀಸರ್​​ನಲ್ಲಿ ಬಾಲಯ್ಯ (Balayya) ಅವರ ಮಾಸ್ ಅವತಾರ ಕಾಣಿಸಿದೆ. ಅಭಿಮಾನಿಗಳು ಊಹೆ ಮಾಡುವುದಕ್ಕಿಂತಲೂ ಹೆಚ್ಚು ಮಾಸ್ ಆಗಿ ನಂದಮೂರಿ ಬಾಲಕೃಷ್ಣ ಅವರು ಕಾಣಿಸಿಕೊಂಡಿದ್ದಾರೆ.

ಜೂನ್ 10ರಂದು ನಂದಮೂರಿ ಬಾಲಕೃಷ್ಣ ಅವರ ಹುಟ್ಟುಹಬ್ಬ. ಆ ಪ್ರಯುಕ್ತ ಒಂದು ದಿನ ಮುಂಚಿತವಾಗಿಯೇ ‘ಅಖಂಡ 2’ ಸಿನಿಮಾದ ಟೀಸರ್ ಅನಾವರಣ ಮಾಡಲಾಗಿದೆ. ಈ ಚಿತ್ರಕ್ಕೆ ಬಯೊಪಾಟಿ ಶ್ರೀನು ಅವರು ನಿರ್ದೇಶನ ಮಾಡಿದ್ದಾರೆ. ಅಭಿಮಾನಿಗಳಿಗೆ ಏನು ಬೇಕು ಎಂಬುದನ್ನು ಅವರು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ.

‘ಅಖಂಡ 2’ ಸಿನಿಮಾದಲ್ಲಿ ಬಾಲಯ್ಯ ಅವರು ಸಾಧು ಗೆಟಪ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಆದರೆ ಅವರು ಬರೀ ತಪಸ್ಸು ಮಾಡುತ್ತಾ ಸುಮ್ಮನೆ ಕುಳಿತುಕೊಳ್ಳಲ್ಲ. ದುಷ್ಟರನ್ನು ಸಂಹಾರ ಮಾಡುತ್ತಾರೆ. ಹಿಮಾಲಯದಲ್ಲಿ ಗನ್ ಹಿಡಿದು ಬಂದ ವಿಲನ್​ಗಳನ್ನು ತ್ರಿಶೂಲದಿಂದಲೇ ಬಾಲಯ್ಯ ಮಣಿಸುತ್ತಾರೆ! ಬಾಲಯ್ಯ ಸಿನಿಮಾ ಎಂದರೆ ಮಾಸ್ ಡೈಲಾಗ್ ಇರಲೇಬೇಕು. ಅದು ಕೂಡ ಈ ಟೀಸರ್​ನಲ್ಲಿ ಹೈಲೈಟ್ ಆಗಿದೆ.

ಇದನ್ನೂ ಓದಿ
Image
ಪದ್ಮ ಭೂಷಣ ಪ್ರಶಸ್ತಿ ಸ್ವೀಕರಿಸಿದ ಬಾಲಯ್ಯ, ಅಜಿತ್ ಕುಮಾರ್, ಶೇಖರ್ ಕಪೂರ್
Image
ಫ್ಯಾನ್ಸಿ ನಂಬರ್ ಪಡೆಯಲು ಮತ್ತೊಂದು ಕಾರಿಗೆ ಕೊಡವಷ್ಟೇ ಹಣ ಕೊಟ್ಟ ಬಾಲಯ್ಯ
Image
ಸಿನಿಮಾ ಸೋಲುತ್ತದೆ ಎಂಬುದು ಗೊತ್ತಿದ್ದೂ ನಟಿಸಿದ್ದ ಬಾಲಕೃಷ್ಣ
Image
ಟ್ರೆಂಡ್ ಫಾಲೋ ಮಾಡಿದ ನಂದಮೂರಿ ಬಾಲಕೃಷ್ಣ, ಕೊಟ್ಟರು ದೊಡ್ಡ ಉಡುಗೊರೆ

ಈ ಸಿನಿಮಾದಲ್ಲಿ ಪಕ್ಕಾ ಕಮರ್ಷಿಯಲ್ ಅಂಶಗಳು ಇವೆ ಎಂಬುದು ಟೀಸರ್ ನೋಡಿದರೆ ಸ್ಪಷ್ಟವಾಗುತ್ತಿದೆ. ಈ ಸಿನಿಮಾಗೆ ಥಮನ್ ಅವರು ಸಂಗೀತ ನೀಡಿದ್ದಾರೆ. ಮಾಸ್ ಅಭಿಮಾನಿಗಳನ್ನು ಸೆಳೆಯಲು ಅವರು ಪ್ರಯತ್ನಿಸಿದ್ದಾರೆ. ಟೀಸರ್ ಬಿಡುಗಡೆ ಆದ ಬಳಿಕ ‘ಅಖಂಡ 2’ ಸಿನಿಮಾ ಮೇಲಿನ ಹೈಪ್ ಹೆಚ್ಚಾಗಿದೆ. ಬಾಲಯ್ಯ ಜನ್ಮದಿನಕ್ಕೆ ಉಡುಗೊರೆ ರೂಪದಲ್ಲಿ ಈ ಟೀಸರ್ ರಿಲೀಸ್ ಮಾಡಲಾಗಿದೆ.

ಇದನ್ನೂ ಓದಿ: ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..

ಪವನ್ ಕಲ್ಯಾಣ್ ನಟನೆಯ ‘ಒಜಿ’ ಸಿನಿಮಾ ಕೂಡ ಸೆಪ್ಟೆಂಬರ್ 25ರಂದು ಬಿಡುಗಡೆ ಆಗಲಿದೆ. ಆ ಸಿನಿಮಾ ಜೊತೆ ಕ್ಲ್ಯಾಶ್ ತಪ್ಪಿಸಲು ‘ಅಖಂಡ 2’ ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಿಕೆ ಆಗಬಹುದು ಎಂದು ಕೆಲವರು ಊಹಿಸಿದ್ದರು. ಆದರೆ ಆ ಊಹೆ ನಿಜವಾಗಿಲ್ಲ. ‘ಅಖಂಡ 2’ ಕೂಡ ಸೆಪ್ಟೆಂಬರ್ 25ರಂದೇ ರಿಲೀಸ್ ಆಗಲಿದೆ. ಆ ಮೂಲಕ ಬಾಕ್ಸ್ ಆಫೀಸ್​ನಲ್ಲಿ ಪೈಪೋಟಿ ನೀಡಲು ಸಜ್ಜಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ