AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಖಂಡ 2’ ಟೀಸರ್: ಊಹಿಸಿದ್ದಕ್ಕಿಂತಲೂ ಹೆಚ್ಚಾಯಿತು ಬಾಲಯ್ಯ ಮಾಸ್ ಅವತಾರ

‘ಅಖಂಡ 2’ ಸಿನಿಮಾದಲ್ಲಿ ನಂದಮೂರಿ ಬಾಲಕೃಷ್ಣ ಅವರು ಸಾಧು ಗೆಟಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಸೆಪ್ಟೆಂಬರ್ 25ಕ್ಕೆ ಈ ಚಿತ್ರ ತೆರೆಕಾಣಲಿದೆ. ಈ ಸಿನಿಮಾ ಬಹಳ ಮಾಸ್ ಆಗಿ ಮೂಡಿಬಂದಿದೆ ಎಂಬುದಕ್ಕೆ ಟೀಸರ್ ಸಾಕ್ಷಿ ನೀಡುತ್ತಿದೆ. ಬಾಲಯ್ಯ ಅವರ ಅಭಿಮಾನಿಗಳಿಗೆ ಟೀಸರ್ ಇಷ್ಟವಾಗಿದೆ.

‘ಅಖಂಡ 2’ ಟೀಸರ್: ಊಹಿಸಿದ್ದಕ್ಕಿಂತಲೂ ಹೆಚ್ಚಾಯಿತು ಬಾಲಯ್ಯ ಮಾಸ್ ಅವತಾರ
Nandamuri Balakrishna
ಮದನ್​ ಕುಮಾರ್​
|

Updated on: Jun 09, 2025 | 7:29 PM

Share

ಟಾಲಿವುಡ್ ನಟ ನಂದಮೂರಿ ಬಾಲಕೃಷ್ಣ (Nandamuri Balakrishna) ಅಭಿನಯದ ‘ಅಖಂಡ 2’ ಸಿನಿಮಾ ಮೇಲೆ ಅವರ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ಈ ವರ್ಷ ದಸರಾ ಹಬ್ಬದ ಸಂದರ್ಭದಲ್ಲಿ ಈ ಚಿತ್ರ ಬಿಡುಗಡೆ ಆಗಿದೆ. ನಿರ್ಮಾಪಕರು ಈ ಚಿತ್ರದ ರಿಲೀಸ್ ದಿನಾಂಕ ಘೋಷಿಸಿದ್ದಾರೆ. ಸೆಪ್ಟೆಂಬರ್ 25ರಂದು ಸಿನಿಮಾ ತೆರೆಕಾಣಲಿದೆ ಎಂದು ಖಚಿತಪಡಿಸಿದ್ದಾರೆ. ‘ಅಖಂಡ 2’ ಸಿನಿಮಾದ ಟೀಸರ್ (Akhanda 2 Teaser) ಬಿಡುಗಡೆ ಮಾಡಲಾಗಿದೆ. ಈ ಟೀಸರ್​​ನಲ್ಲಿ ಬಾಲಯ್ಯ (Balayya) ಅವರ ಮಾಸ್ ಅವತಾರ ಕಾಣಿಸಿದೆ. ಅಭಿಮಾನಿಗಳು ಊಹೆ ಮಾಡುವುದಕ್ಕಿಂತಲೂ ಹೆಚ್ಚು ಮಾಸ್ ಆಗಿ ನಂದಮೂರಿ ಬಾಲಕೃಷ್ಣ ಅವರು ಕಾಣಿಸಿಕೊಂಡಿದ್ದಾರೆ.

ಜೂನ್ 10ರಂದು ನಂದಮೂರಿ ಬಾಲಕೃಷ್ಣ ಅವರ ಹುಟ್ಟುಹಬ್ಬ. ಆ ಪ್ರಯುಕ್ತ ಒಂದು ದಿನ ಮುಂಚಿತವಾಗಿಯೇ ‘ಅಖಂಡ 2’ ಸಿನಿಮಾದ ಟೀಸರ್ ಅನಾವರಣ ಮಾಡಲಾಗಿದೆ. ಈ ಚಿತ್ರಕ್ಕೆ ಬಯೊಪಾಟಿ ಶ್ರೀನು ಅವರು ನಿರ್ದೇಶನ ಮಾಡಿದ್ದಾರೆ. ಅಭಿಮಾನಿಗಳಿಗೆ ಏನು ಬೇಕು ಎಂಬುದನ್ನು ಅವರು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ.

‘ಅಖಂಡ 2’ ಸಿನಿಮಾದಲ್ಲಿ ಬಾಲಯ್ಯ ಅವರು ಸಾಧು ಗೆಟಪ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಆದರೆ ಅವರು ಬರೀ ತಪಸ್ಸು ಮಾಡುತ್ತಾ ಸುಮ್ಮನೆ ಕುಳಿತುಕೊಳ್ಳಲ್ಲ. ದುಷ್ಟರನ್ನು ಸಂಹಾರ ಮಾಡುತ್ತಾರೆ. ಹಿಮಾಲಯದಲ್ಲಿ ಗನ್ ಹಿಡಿದು ಬಂದ ವಿಲನ್​ಗಳನ್ನು ತ್ರಿಶೂಲದಿಂದಲೇ ಬಾಲಯ್ಯ ಮಣಿಸುತ್ತಾರೆ! ಬಾಲಯ್ಯ ಸಿನಿಮಾ ಎಂದರೆ ಮಾಸ್ ಡೈಲಾಗ್ ಇರಲೇಬೇಕು. ಅದು ಕೂಡ ಈ ಟೀಸರ್​ನಲ್ಲಿ ಹೈಲೈಟ್ ಆಗಿದೆ.

ಇದನ್ನೂ ಓದಿ
Image
ಪದ್ಮ ಭೂಷಣ ಪ್ರಶಸ್ತಿ ಸ್ವೀಕರಿಸಿದ ಬಾಲಯ್ಯ, ಅಜಿತ್ ಕುಮಾರ್, ಶೇಖರ್ ಕಪೂರ್
Image
ಫ್ಯಾನ್ಸಿ ನಂಬರ್ ಪಡೆಯಲು ಮತ್ತೊಂದು ಕಾರಿಗೆ ಕೊಡವಷ್ಟೇ ಹಣ ಕೊಟ್ಟ ಬಾಲಯ್ಯ
Image
ಸಿನಿಮಾ ಸೋಲುತ್ತದೆ ಎಂಬುದು ಗೊತ್ತಿದ್ದೂ ನಟಿಸಿದ್ದ ಬಾಲಕೃಷ್ಣ
Image
ಟ್ರೆಂಡ್ ಫಾಲೋ ಮಾಡಿದ ನಂದಮೂರಿ ಬಾಲಕೃಷ್ಣ, ಕೊಟ್ಟರು ದೊಡ್ಡ ಉಡುಗೊರೆ

ಈ ಸಿನಿಮಾದಲ್ಲಿ ಪಕ್ಕಾ ಕಮರ್ಷಿಯಲ್ ಅಂಶಗಳು ಇವೆ ಎಂಬುದು ಟೀಸರ್ ನೋಡಿದರೆ ಸ್ಪಷ್ಟವಾಗುತ್ತಿದೆ. ಈ ಸಿನಿಮಾಗೆ ಥಮನ್ ಅವರು ಸಂಗೀತ ನೀಡಿದ್ದಾರೆ. ಮಾಸ್ ಅಭಿಮಾನಿಗಳನ್ನು ಸೆಳೆಯಲು ಅವರು ಪ್ರಯತ್ನಿಸಿದ್ದಾರೆ. ಟೀಸರ್ ಬಿಡುಗಡೆ ಆದ ಬಳಿಕ ‘ಅಖಂಡ 2’ ಸಿನಿಮಾ ಮೇಲಿನ ಹೈಪ್ ಹೆಚ್ಚಾಗಿದೆ. ಬಾಲಯ್ಯ ಜನ್ಮದಿನಕ್ಕೆ ಉಡುಗೊರೆ ರೂಪದಲ್ಲಿ ಈ ಟೀಸರ್ ರಿಲೀಸ್ ಮಾಡಲಾಗಿದೆ.

ಇದನ್ನೂ ಓದಿ: ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..

ಪವನ್ ಕಲ್ಯಾಣ್ ನಟನೆಯ ‘ಒಜಿ’ ಸಿನಿಮಾ ಕೂಡ ಸೆಪ್ಟೆಂಬರ್ 25ರಂದು ಬಿಡುಗಡೆ ಆಗಲಿದೆ. ಆ ಸಿನಿಮಾ ಜೊತೆ ಕ್ಲ್ಯಾಶ್ ತಪ್ಪಿಸಲು ‘ಅಖಂಡ 2’ ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಿಕೆ ಆಗಬಹುದು ಎಂದು ಕೆಲವರು ಊಹಿಸಿದ್ದರು. ಆದರೆ ಆ ಊಹೆ ನಿಜವಾಗಿಲ್ಲ. ‘ಅಖಂಡ 2’ ಕೂಡ ಸೆಪ್ಟೆಂಬರ್ 25ರಂದೇ ರಿಲೀಸ್ ಆಗಲಿದೆ. ಆ ಮೂಲಕ ಬಾಕ್ಸ್ ಆಫೀಸ್​ನಲ್ಲಿ ಪೈಪೋಟಿ ನೀಡಲು ಸಜ್ಜಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು