AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಒಂದಾಯ್ತು ‘ದಸರಾ’ ಜೋಡಿ; ನಾನಿ 33ನೇ ಚಿತ್ರದಲ್ಲಿ ಇರಲಿದೆ ಭರ್ಜರಿ ಆ್ಯಕ್ಷನ್

ನಾನಿ ನಟನೆಯ ‘ದಸರಾ’ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇತ್ತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 117 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. 100 ಕೋಟಿ ರೂಪಾಯಿ ಕ್ಲಬ್ ಸೇರಿದ ನಾನಿ ನಟನೆಯ ಮೊದಲ ಸಿನಿಮಾ ಇದಾಗಿದೆ. ಈಗ ಈ ಕಾಂಬಿನೇಷನ್ ಮತ್ತೆ ಒಂದಾಗುತ್ತಿರುವುದರಿಂದ ಕುತೂಹಲ ಹೆಚ್ಚಿದೆ.

ಮತ್ತೆ ಒಂದಾಯ್ತು ‘ದಸರಾ’ ಜೋಡಿ; ನಾನಿ 33ನೇ ಚಿತ್ರದಲ್ಲಿ ಇರಲಿದೆ ಭರ್ಜರಿ ಆ್ಯಕ್ಷನ್
ನಾನಿ
ರಾಜೇಶ್ ದುಗ್ಗುಮನೆ
|

Updated on: Apr 02, 2024 | 8:32 AM

Share

ನಾನಿ (Nani) ನಟನೆಯ ‘ದಸರಾ’ ಸಿನಿಮಾ ರಿಲೀಸ್ ಆಗಿ ಒಂದು ವರ್ಷ ಕಳೆದಿದೆ. ಈ ಚಿತ್ರಕ್ಕೆ ಶ್ರೀಕಾಂತ್ ಒಡೆಲಾ ನಿರ್ದೇಶನ ಮಾಡಿದ್ದರು. ಸುಧಾಕರ್ ಚೆರುಕುರಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಈ ತಂಡ ಹೊಸ ಸಿನಿಮಾಗಾಗಿ ಮತ್ತೆ ಒಂದಾಗಿದೆ. ಇದು ನಾನಿ ಅಭಿನಯದ 33ನೇ ಸಿನಿಮಾ ಇದಾಗಿದೆ. ಈ ಹೊಸ ಪ್ರಾಜೆಕ್ಟ್ ಫಸ್ಟ್ ಲುಕ್ ರಿವೀಲ್ ಆಗಿದೆ. ಸಖತ್ ರಗಡ್ ಲುಕ್​ನಲ್ಲಿ ನಾನಿ ಆಗಮಿಸಿದ್ದಾರೆ.

ನಾನಿ ನಟನೆಯ ‘ದಸರಾ’ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇತ್ತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 117 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. 100 ಕೋಟಿ ರೂಪಾಯಿ ಕ್ಲಬ್ ಸೇರಿದ ನಾನಿ ನಟನೆಯ ಮೊದಲ ಸಿನಿಮಾ ಇದಾಗಿದೆ. ಈಗ ಈ ಕಾಂಬಿನೇಷನ್ ಮತ್ತೆ ಒಂದಾಗುತ್ತಿರುವುದರಿಂದ ಕುತೂಹಲ ಹೆಚ್ಚಿದೆ.

ಬಾಯಲ್ಲಿ ಸಿಗರೇಟ್ ಹಿಡಿದು ನಾನಿ ಕಾಣಿಸಿಕೊಂಡಿದ್ದಾರೆ. ಈ ಲುಕ್ ಸಖತ್ ರಗಡ್ ಆಗಿದೆ. ಕೆಂಪು ಬಣ್ಣದ ಪೋಸ್ಟರ್​ನಲ್ಲಿ ಸಾಕಷ್ಟು ಸಂಖ್ಯೆಯ ಜನರನ್ನು ಕೂಡ ತೋರಿಸಲಾಗಿದೆ. ಪೋಸ್ಟರ್​ ಮೇಲೆ ಹಲವು ವಿಚಾರಗಳನ್ನು ಬರೆಯಲಾಗಿದೆ. ಮತ್ತೊಂದು ಪವರ್ ಪ್ಯಾಕ್ಡ್ ಆಕ್ಷನ್ ಚಿತ್ರದೊಂದಿಗೆ ನಾನಿ ಪರಿಚಯ ಎಂದು ಶ್ರೀಕಾಂತ್ ತಮ್ಮ ಹೊಸ ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ.

ಸುಧಾಕರ್ ಚೆರುಕುರಿ ನಾನಿ 33ನೇ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ‘ಶ್ರೀ ಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್’ ಬ್ಯಾನರ್ ಅಡಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರದಲ್ಲಿ ನಾನಿ ಹಿಂದೆಂದೂ ಕಾಣದ ಅವತಾರದಲ್ಲಿ ಎಂಟ್ರಿ ಕೊಡಲಿದ್ದಾರೆ. ಶೀಘ್ರವೇ ಸಿನಿಮಾ ಶೂಟಿಂಗ್ ಆರಂಭ ಆಗಲಿದ್ದು, 2025ಕ್ಕೆ ಸಿನಿಮಾ ತೆರೆಗೆ ಬರಲಿದೆ.

ಇದನ್ನೂ ಓದಿ: ನಿರ್ಮಾಪಕ ಜಾಕಿ ಬಗ್ನಾನಿ ಜೊತೆ ರಕುಲ್ ಪ್ರೀತ್ ಸಿಂಗ್ ವಿವಾಹ: ಇಲ್ಲಿವೆ ಚಿತ್ರಗಳು

ನಾನಿ ನಟನೆಯ ‘ಹಾಯ್ ನಾನ್ನ’ ಸಿನಿಮಾ ಎಲ್ಲರಿಂದ ಮೆಚ್ಚುಗೆ ಪಡೆದಿದೆ. ಈ ಚಿತ್ರವನ್ನು ಜನರು ಮೆಚ್ಚಿಕೊಂಡಿದ್ದಾರೆ. ಮೃಣಾಲ್ ಠಾಕೂರ್ ಅವರು ಈ ಸಿನಿಮಾದಲ್ಲಿ ನಾಯಕಿ ಆಗಿ ಮಿಂಚಿದ್ದರು. ತಂದೆ-ಮಗಳ ಭಾವನಾತ್ಮಕ ಕಥೆಯನ್ನು ಈ ಸಿನಿಮಾ ಹೊಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ