AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನಿ, ಸಾಯಿ ಪಲ್ಲವಿ ಮತ್ತು ಕೃತಿ ಶೆಟ್ಟಿ ಅಭಿನಯದ ‘ಶ್ಯಾಮ್ ಸಿಂಘಾ ರಾಯ್’ ಚಿತ್ರ ಶೀಘ್ರದಲ್ಲೇ ಬಿಡುಗಡೆಗೊಳ್ಳಲಿದೆ

‘ಶ್ಯಾಮ್ ಸಿಂಘಾ ರಾಯ್’ ಈ ವರ್ಷದ ಕೊನೆಯಲ್ಲಿ ತೆರೆಗೆ ಬರಲಿದೆ. ಏಪ್ರಿಲ್ 23 ರಂದು ನಾನಿ ಅಭಿನಯಿಸಿದ, ಶಿವಾ ನಿರ್ವಾಣರವರ ‘ಟಕ್ ಜಗದೀಶ್’ ಚಿತ್ರವು ತೆರೆಗೆ ಬರಬೇಕಾಗಿತ್ತು ಆದರೆ ಸಾಂಕ್ರಾಮಿಕ ರೋಗದಿಂದಾಗಿ ಚಿತ್ರದ ಬಿಡುಗಡೆಯನ್ನು ಮುಂದೂಡಲಾಯಿತು.

ನಾನಿ, ಸಾಯಿ ಪಲ್ಲವಿ ಮತ್ತು ಕೃತಿ ಶೆಟ್ಟಿ ಅಭಿನಯದ ‘ಶ್ಯಾಮ್ ಸಿಂಘಾ ರಾಯ್’ ಚಿತ್ರ ಶೀಘ್ರದಲ್ಲೇ ಬಿಡುಗಡೆಗೊಳ್ಳಲಿದೆ
Shyam Singha Roy
TV9 Web
| Edited By: |

Updated on: Jul 27, 2021 | 5:32 PM

Share

ಲಾಕ್‌ಡೌನ್ ನಂತರ ನಾನಿ, ಸಾಯಿ ಪಲ್ಲವಿ ಮತ್ತು ಕೃತಿ ಶೆಟ್ಟಿ ಅವರು ರಾಹುಲ್ ಸಂಸ್ಕೃತನ್ ಅವರ ‘ಶ್ಯಾಮ್ ಸಿಂಘಾ ರಾಯ್’ ಚಿತ್ರದ ಚಿತ್ರೀಕರಣವನ್ನು ಮುಗಿಸಿದ್ದಾರೆ. ಕರೋನವೈರಸ್ನ ಎರಡನೇ ಅಲೆಯ ನಂತರ ಚಿತ್ರದ ತಂಡವು ಮತ್ತೆ ಚಿತ್ರೀಕರಣವನ್ನು ಪ್ರಾರಂಭಿಸಿತ್ತು. ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಹಂಚಿಕೊಂಡ ನಾನಿ, “ಶೂಟ್ ಮುಗಿದಿದೆ. ಉತ್ತಮ ತಂಡದೊಂದಿಗೆ ಉತ್ತಮ ಫಲಿತಾಂಶ ಬರುತ್ತದೆ. ಪೋಸ್ಟ್ ಪ್ರೊಡಕ್ಷನ್ ಪ್ರಾರಂಭವಾಗಿದೆ.” ಎಂದರು. ಚಲನಚಿತ್ರದ ರೆಟ್ರೊ ಅವತಾರದಲ್ಲಿ ಕನ್ನಡಿಯನ್ನು ನೋಡುತ್ತಿರುವ ಚಿತ್ರವನ್ನು ಸಹ ಅವರು ಹಂಚಿಕೊಂಡರು.

ಚಿತ್ರದ ನಿರ್ಮಾಪಕರು ಹೈದರಾಬಾದ್‌ನ ಹೊರವಲಯದಲ್ಲಿನ 10 ಎಕರೆ ಪ್ರದೇಶದಲ್ಲಿ ಬೃಹತ್ ಸೆಟ್ ಅನ್ನು ಹಾಕಿ ಕಲ್ಕತ್ತಾವನ್ನು ಮರುಸೃಷ್ಟಿಸಿದ್ದರು. ಪುನರ್ಜನ್ಮವನ್ನು ಆಧರಿಸಿದ ಈ ಚಿತ್ರದಲ್ಲಿ ನಾನಿಯ ಪಾತ್ರವು ತೀವ್ರವಾದದ್ದು ಎಂದು ಹೇಳಲಾಗುತ್ತದೆ. ರಾಹುಲ್ ಅವರ ಕೊನೆಯ ಚಿತ್ರ, ವಿಜಯ್ ದೇವೇರಕೊಂಡ ಅಭಿನಯದ ‘ಟ್ಯಾಕ್ಸಿವಾಲಾ’ ಅನನ್ಯ ಎಂಬ ಮೆಚ್ಚುಗೆಯನ್ನು ಪಡೆದದ್ದರಿಂದ, ಅವರ ಎರಡನೆಯ ಚಿತ್ರದ ಬಗ್ಗೆ ನಿರೀಕ್ಷೆಗಳು ಹೆಚ್ಚಾಗಿದೆ. ಈ ಚಿತ್ರದಲ್ಲಿ ರಾಹುಲ್ ರವೀಂದ್ರನ್ ಕೂಡ ಪ್ರಮುಖ ಪಾತ್ರದಲ್ಲಿದ್ದಾರೆ.

‘ಶ್ಯಾಮ್ ಸಿಂಘಾ ರಾಯ್’ ಈ ವರ್ಷದ ಕೊನೆಯಲ್ಲಿ ತೆರೆಗೆ ಬರಲಿದೆ. ಏಪ್ರಿಲ್ 23 ರಂದು ನಾನಿ ಅಭಿನಯಿಸಿದ, ಶಿವಾ ನಿರ್ವಾಣರವರ ‘ಟಕ್ ಜಗದೀಶ್’ ಚಿತ್ರವು ತೆರೆಗೆ ಬರಬೇಕಾಗಿತ್ತು ಆದರೆ ಸಾಂಕ್ರಾಮಿಕ ರೋಗದಿಂದಾಗಿ ಚಿತ್ರದ ಬಿಡುಗಡೆಯನ್ನು ಮುಂದೂಡಲಾಯಿತು. ನಾನಿ ಶೀಘ್ರದಲ್ಲೇ ವಿವೇಕ್ ಅಥ್ರೇಯಾ ಅವರ ‘ಆಂಟೆ ಸುಂದರನಿಕಿ’ ಚಿತ್ರದ ಶೂಟಿಂಗ್ ಪ್ರಾರಂಭಿಸಲಿದ್ದು, ಈ ಚಿತ್ರದ ಮೂಲಕ ನಜ್ರಿಯಾ ನಜೀಮ್ ಫಹಾದ್ ಟಾಲಿವುಡ್ ಗೆ ಪಾದಾರ್ಪಣೆ ಮಾಡಲಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಇಷ್ಟಪಡುವ ಹುಡುಗ ಹೇಗಿರಬೇಕು? ಗುಣಗಳ ಪಟ್ಟಿ ಬಿಡುಗಡೆ ಮಾಡಿದ ನಟಿ ಕೃತಿ ಶೆಟ್ಟಿ

ಇದನ್ನೂ ಓದಿ: ಖ್ಯಾತ ನಟಿ ಸಾಯಿ ಪಲ್ಲವಿ ಒಟ್ಟೂ ಆಸ್ತಿ ಮೌಲ್ಯ ಎಷ್ಟು? ಇಲ್ಲಿದೆ ಮಾಹಿತಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?