AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿ ಬಯೋಪಿಕ್ ‘ಮಾ ವಂದೇ’ ಶೂಟಿಂಗ್ ಶುರು; ರವಿ ಬಸ್ರೂರು ಸಂಗೀತ

ನರೇಂದ್ರ ಮೋದಿ ಅವರ ರಾಜಕೀಯ ಮತ್ತು ಖಾಸಗಿ ಬದುಕಿನ ಕುರಿತ ಬಯೋಪಿಕ್ ‘ಮಾ ವಂದೇ’ ಸಿದ್ಧವಾಗುತ್ತಿದೆ. ಮುಂಬೈನಲ್ಲಿ ಇತ್ತೀಚೆಗೆ ಈ ಸಿನಿಮಾಗೆ ಮುಹೂರ್ತ ನೆರವೇರಿಸಲಾಗಿದ್ದು, ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಉನ್ನಿ ಮುಕುಂದನ್ ಅವರು ಮೋದಿ ಪಾತ್ರವನ್ನು ಮಾಡುತ್ತಿದ್ದು, ಘಟಾನುಘಟಿ ತಂತ್ರಜ್ಞರು ಈ ಚಿತ್ರಕ್ಕೆ ಕೆಲಸ ಮಾಡುತ್ತಿದ್ದಾರೆ.

ನರೇಂದ್ರ ಮೋದಿ ಬಯೋಪಿಕ್ ‘ಮಾ ವಂದೇ’ ಶೂಟಿಂಗ್ ಶುರು; ರವಿ ಬಸ್ರೂರು ಸಂಗೀತ
Maa Vande Movie Team
ಮದನ್​ ಕುಮಾರ್​
|

Updated on: Dec 21, 2025 | 11:30 AM

Share

ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಜೀವನದ ಕುರಿತು ಹೊಸದೊಂದು ಸಿನಿಮಾ ತಯಾರಾಗುತ್ತಿದೆ. ಈ ಸಿನಿಮಾಗೆ ‘ಮಾ ವಂದೇ’ (Maa Vande) ಎಂದು ಹೆಸರು ಇಡಲಾಗಿದೆ. ಈಗ ಈ ಸಿನಿಮಾದ ಮುಹೂರ್ತ ಸಮಾರಂಭ ನಡೆದಿದೆ. ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು (Ravi Basrur) ಅವರು ಈ ಸಿನಿಮಾಗೆ ಸಂಗೀತ ನೀಡಲಿದ್ದಾರೆ ಎಂಬುದು ವಿಶೇಷ. ಮಲಯಾಳಂ ಚಿತ್ರರಂಗದ ಖ್ಯಾತ ನಟ ಉನ್ನಿ ಮುಕುಂದನ್ ಅವರು ಈ ಸಿನಿಮಾದಲ್ಲಿ ನರೇಂದ್ರ ಮೋದಿ ಪಾತ್ರವನ್ನು ಮಾಡಲಿದ್ದಾರೆ. ನರೇಂದ್ರ ಮೋದಿ ಬಯೋಪಿಕ್ ಬಗ್ಗೆ ಅವರ ಅಭಿಮಾನಿಗಳಿಗೆ ಕೌತುಕ ಮೂಡಿದೆ.

ನರೇಂದ್ರ ಮೋದಿ ಅವರ ಜೀವನದ ವಿವರಗಳನ್ನು ಈಗಾಗಲೇ ಬೇರೆ ಬೇರೆ ರೂಪದಲ್ಲಿ ದಾಖಲಿಸಲಾಗಿದೆ. 2019ರಲ್ಲಿ ‘ಪಿಎಂ ನರೇಂದ್ರ ಮೋದಿ’ ಸಿನಿಮಾ ಬಿಡುಗಡೆ ಆಗಿತ್ತು. ಅದರಲ್ಲಿ ವಿವೇಕ್ ಒಬೆರಾಯ್ ಅವರು ಮೋದಿಯ ಪಾತ್ರಕ್ಕೆ ಬಣ್ಣ ಹಚ್ಚಿದ್ದರು. ಬಾಕ್ಸ್ ಆಫೀಸ್​​ನಲ್ಲಿ ಆ ಚಿತ್ರ ಸೋತಿತ್ತು. ನರೇಂದ್ರ ಮೋದಿ ಲುಕ್ ಬಗ್ಗೆ ಟೀಕೆ ವ್ಯಕ್ತವಾಗಿತ್ತು.

ಈಗ ನರೇಂದ್ರ ಮೋದಿ ಅವರ ಖಾಸಗಿ ಬದುಕು ಮತ್ತು ರಾಜಕೀಯ ಜೀವನದ ವಿವರಗಳನ್ನು ಇಟ್ಟುಕೊಂಡು ‘ಮಾ ವಂದೇ’ ಸಿನಿಮಾ ಮಾಡಲಾಗುತ್ತಿದೆ. ಈ ಸಿನಿಮಾವನ್ನು ಸೆಪ್ಟೆಂಬರ್ ತಿಂಗಳಲ್ಲಿ ಘೋಷಿಸಲಾಗಿತ್ತು. ಈಗ ಶೂಟಿಂಗ್ ಆರಂಭ ಆಗಿದೆ. ಮುಹೂರ್ತ ಸಮಾರಂಭದಲ್ಲಿ ಚಿತ್ರತಂಡದವರು ಭಾಗಿ ಆಗಿದ್ದಾರೆ. ಮುಂಬೈನಲ್ಲಿ ಮುಹೂರ್ತ ಮಾಡಲಾಗಿದ್ದು, ರವಿ ಬಸ್ರೂರು ಅವರ ಕೂಡ ಪಾಲ್ಗೊಂಡಿದ್ದಾರೆ.

‘ಮಾ ವಂದೇ’ ಸಿನಿಮಾದ ಮುಹೂರ್ತ ಸಮಾರಂಭದ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ‘ಸಿಲ್ವರ್ ಕಾಸ್ಟ್ ಕ್ರಿಯೇಷನ್ಸ್’ ಮೂಲಕ ವೀರ್ ರೆಡ್ಡಿ ಎಂ. ಅವರು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕ್ರಾಂತಿ ಕುಮಾರ್ ಸಿ.ಹೆಚ್. ಅವರು ‘ಮಾ ವಂದೇ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಕನ್ನಡ, ಹಿಂದಿ, ಇಂಗ್ಲಿಷ್, ತಮಿಳು, ತೆಲುಗು, ಗುಜರಾತಿ, ಮಲಯಾಳಂ, ಮರಾಠಿ ಮುಂತಾದ ಭಾಷೆಗಳಲ್ಲಿ ಈ ಸಿನಿಮಾ ಸಿದ್ಧವಾಗಲಿದೆ.

ಇದನ್ನೂ ಓದಿ:  ನಿಂತೇ ಹೋಯ್ತು ಶಿವಾಜಿ ಬಯೋಪಿಕ್; ಕಾರಣ ತಿಳಿಸಿದ ನಿರ್ದೇಶಕ

ಘಟಾನುಘಟಿ ತಂತ್ರಜ್ಞರು ‘ಮಾ ವಂದೇ’ ಸಿನಿಮಾದ ತಾಂತ್ರಿಕ ಬಳಗದಲ್ಲಿ ಕೆಲಸ ಮಾಡುತ್ತಿದ್ದಾರೆ. ‘ಬಾಹುಬಲಿ’ ಸಿನಿಮಾಗೆ ಛಾಯಾಗ್ರಹಣ ಮಾಡಿದ ಕೆ.ಕೆ. ಸೇಂಥಿಲ್ ಕುಮಾರ್ ಅವರ ಈ ಚಿತ್ರಕ್ಕೂ ಕ್ಯಾಮೆರಾ ಕೆಲಸ ಮಾಡಲಿದ್ದಾರೆ. ‘ಕೆಜಿಎಫ್: ಚಾಪ್ಟರ್ 1’, ‘ಕೆಜಿಎಫ್: ಚಾಪ್ಟರ್ 2’, ‘ಸಲಾರ್’ ಸಿನಿಮಾಗಳಿಂದ ಫೇಮಸ್ ಆದ ರವಿ ಬಸ್ರೂರು ಅವರು ಮೋದಿ ಬಯೋಪಿಕ್​​ಗೆ ಸಂಗೀತ ನೀಡುವ ಅವಕಾಶ ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!