Naatu Naatu Song: ‘ಮುಂದಿನ ಕಾಲಕ್ಕೂ ನೆನಪಿನಲ್ಲಿ ಉಳಿಯುವಂಥದ್ದು ನಾಟು ನಾಟು ಹಾಡು’: ಆಸ್ಕರ್​ ಗೆದ್ದಿದ್ದಕ್ಕೆ ಮೋದಿ ಪ್ರಶಂಸೆ

PM Narendra Modi | The Elephant Whisperers: ‘ನಾಟು ನಾಟು..’ ಹಾಡು ಮತ್ತು ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಸಾಕ್ಷ್ಯಚಿತ್ರಕ್ಕೆ ಆಸ್ಕರ್​ ಪ್ರಶಸ್ತಿ ಒಲಿದಿದೆ. ಈ ತಂಡಗಳಿಗೆ ನರೇಂದ್ರ ಮೋದಿ ಅವರು ಅಭಿನಂದನೆ ತಿಳಿಸಿದ್ದಾರೆ.

Naatu Naatu Song: ‘ಮುಂದಿನ ಕಾಲಕ್ಕೂ ನೆನಪಿನಲ್ಲಿ ಉಳಿಯುವಂಥದ್ದು ನಾಟು ನಾಟು ಹಾಡು’: ಆಸ್ಕರ್​ ಗೆದ್ದಿದ್ದಕ್ಕೆ ಮೋದಿ ಪ್ರಶಂಸೆ
ದಿ ಎಲಿಫೆಂಟ್ ವಿಸ್ಪರರ್ಸ್, ನರೇಂದ್ರ ಮೋದಿ, ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​
Follow us
|

Updated on:Mar 13, 2023 | 11:04 AM

ಭಾರತೀಯ ಚಿತ್ರರಂಗಕ್ಕೆ ಹೊಸ ಚೈತನ್ಯ ಬಂದಿದೆ. ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು (Naatu Naatu Song) ಆಸ್ಕರ್​ ಪ್ರಶಸ್ತಿ ಗೆದ್ದು ಬೀಗುತ್ತಿದೆ. ‘ಅತ್ಯುತ್ತಮ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಈ ಗೀತೆಗೆ ಪ್ರಶಸ್ತಿ ಒಲಿದಿದೆ.​ ಇದನ್ನು ಭಾರತದ ಸಿನಿಪ್ರಿಯರು ಸಂಭ್ರಮಿಸುತ್ತಿದ್ದಾರೆ. 95ನೇ ಅಕಾಡೆಮಿ ಅವಾರ್ಡ್ಸ್​ (Academy Awards) ಕಾರ್ಯಕ್ರಮದಲ್ಲಿ ಎಂಎಂ ಕೀರವಾಣಿ ಮತ್ತು ತಂಡದವರು ಪ್ರತಿಷ್ಠಿತ ಪ್ರಶಸ್ತಿ ಪಡೆದು ನಗು ಚೆಲ್ಲಿದ್ದಾರೆ. ಈ ಖುಷಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಟ್ವೀಟ್​ ಮಾಡಿದ್ದಾರೆ. ಜೊತೆಗೆ ‘ಅತ್ಯುತ್ತಮ ಡಾಕ್ಯುಮೆಂಟರಿ ಶಾರ್ಟ್​ ಫಿಲ್ಮ್​’ ವಿಭಾಗದಲ್ಲಿ ಪ್ರಶಸ್ತಿ ಗೆದ್ದ ‘ದಿ ಎಲಿಫೆಂಟ್​ ವಿಸ್ಪರರ್ಸ್​’ ತಂಡಕ್ಕೂ ಅವರು ಟ್ವಿಟರ್​ ಮೂಲಕ ಅಭಿನಂದನೆ ತಿಳಿಸಿದ್ದಾರೆ. ಅದೇ ರೀತಿ ಅನೇಕ ಸೆಲೆಬ್ರಿಟಿಗಳು ಕೂಡ ಪ್ರಶಸ್ತಿ ವಿಜೇತರ ಬೆನ್ನು ತಟ್ಟುತ್ತಿದ್ದಾರೆ.

‘ನಾಟು ನಾಟು..’ ಹಾಡಿನ ಬಗ್ಗೆ ಮೋದಿ ಟ್ವೀಟ್​:

‘ಜಾಗತಿಕ ಮಟ್ಟದಲ್ಲಿ ನಾಟು ನಾಟು ಹಾಡು ಜನಪ್ರಿಯತೆ ಪಡೆದುಕೊಂಡಿದೆ. ಇದು ಮುಂದಿನ ಕಾಲಕ್ಕೂ ನೆನಪಿನಲ್ಲಿ ಉಳಿಯುವಂತಹ ಹಾಡು. ಪ್ರತಿಷ್ಠಿತ ಪ್ರಶಸ್ತಿ ಗೆದ್ದಿದ್ದಕ್ಕಾಗಿ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ, ಗೀತರಚನಕಾರ ಚಂದ್ರಬೋಸ್​ ಮತ್ತು ಇಡೀ ತಂಡಕ್ಕೆ ಅಭಿನಂದನೆಗಳು. ಭಾರತಕ್ಕೆ ಸಂತಸ ಮತ್ತು ಹೆಮ್ಮೆ’ ಎಂದು ನರೇಂದ್ರ ಮೋದಿ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ
Image
Oscar 2023 Winners List: ಈ ವರ್ಷ ಆಸ್ಕರ್ ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ
Image
Oscar 2023: ಆಸ್ಕರ್ ಗೆದ್ದು ಬೀಗಿದ ‘ನಾಟು ನಾಟು..’ ಹಾಡು; ರಾಜಮೌಳಿ ಚಿತ್ರಕ್ಕೆ ಮತ್ತೊಂದು ಕಿರೀಟ
Image
The Elephant Whisperers: ಭಾರತಕ್ಕೆ ಆಸ್ಕರ್​: ‘ದಿ ಎಲಿಫೆಂಟ್​ ವಿಸ್ಪರರ್ಸ್​’ಗೆ ಅಕಾಡೆಮಿ ಪ್ರಶಸ್ತಿ 
Image
Ram Charan: ‘ಭಾರತೀಯರಿಗೆ ಆಸ್ಕರ್​ ಪ್ರಶಸ್ತಿ ಅಂದ್ರೆ ಒಲಂಪಿಕ್ಸ್​ ಗೋಲ್ಡ್​ ಮೆಡಲ್​ ಇದ್ದಂಗೆ’: ರಾಮ್​ ಚರಣ್​

ಆನೆ ಸಾಕುವವರ ಜೀವನದ ಕುರಿತು ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಸಾಕ್ಷ್ಯಚಿತ್ರ ತಯಾರಾಗಿದೆ. ಆಸ್ಕರ್​ ಗೆದ್ದಿರುವ ಈ ತಂಡಕ್ಕೂ ಮೋದಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಮೂರು ವಿಭಾಗಗಳಲ್ಲಿ ಭಾರತದ ಸಿನಿಮಾಗಳು ಈ ಬಾರಿಯ ಆಸ್ಕರ್​ ಸ್ಪರ್ಧೆಗೆ ನಾಮಿನೇಟ್​ ಆಗಿದ್ದವು. ಆ ಪೈಕಿ ಎರಡು ವಿಭಾಗದಲ್ಲಿ ಪ್ರಶಸ್ತಿ ಗೆದ್ದಿರುವುದು ಖುಷಿ ತಂದಿದೆ.

ಇದನ್ನೂ ಓದಿ: The Elephant Whisperers: ಭಾರತಕ್ಕೆ ಆಸ್ಕರ್​: ‘ದಿ ಎಲಿಫೆಂಟ್​ ವಿಸ್ಪರರ್ಸ್​’ಗೆ ಅಕಾಡೆಮಿ ಪ್ರಶಸ್ತಿ 

‘ಪ್ರತಿ ಭಾರತೀಯ ಹೆಮ್ಮೆಪಡುವ ವಿಷಯ’ ಎಂದ ಎಂ.ಎಂ. ಕೀರವಾಣಿ:

‘ನಾಟು ನಾಟು ಹಾಡಿಗೆ ಆಸ್ಕರ್​ ಪ್ರಶಸ್ತಿ ಸಿಕ್ಕಿದ್ದಕ್ಕೆ ಖುಷಿಯಾಗಿದೆ. ಆಸ್ಕರ್​ ಪ್ರಶಸ್ತಿಯ ಗರಿ ಪ್ರತಿ ಭಾರತೀಯ ಹೆಮ್ಮೆಪಡುವ ವಿಷಯ. ನನ್ನ ಮನಸ್ಸಿನಲ್ಲಿ ಒಂದೇ ಒಂದು ಆಸೆ ಇತ್ತು. ಆರ್​ಆರ್​ಆರ್​ ಚಿತ್ರ ಗೆಲ್ಲಬೇಕು, ಪ್ರತಿ ಭಾರತೀಯ ಹೆಮ್ಮೆ ಪಡಬೇಕು. ಈ ಆಸೆ ಈಡೇರಿದೆ’ ಎಂದಿದ್ದಾರೆ ಕೀರವಾಣಿ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:00 am, Mon, 13 March 23

ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?