AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naatu Naatu Song: ‘ಮುಂದಿನ ಕಾಲಕ್ಕೂ ನೆನಪಿನಲ್ಲಿ ಉಳಿಯುವಂಥದ್ದು ನಾಟು ನಾಟು ಹಾಡು’: ಆಸ್ಕರ್​ ಗೆದ್ದಿದ್ದಕ್ಕೆ ಮೋದಿ ಪ್ರಶಂಸೆ

PM Narendra Modi | The Elephant Whisperers: ‘ನಾಟು ನಾಟು..’ ಹಾಡು ಮತ್ತು ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಸಾಕ್ಷ್ಯಚಿತ್ರಕ್ಕೆ ಆಸ್ಕರ್​ ಪ್ರಶಸ್ತಿ ಒಲಿದಿದೆ. ಈ ತಂಡಗಳಿಗೆ ನರೇಂದ್ರ ಮೋದಿ ಅವರು ಅಭಿನಂದನೆ ತಿಳಿಸಿದ್ದಾರೆ.

Naatu Naatu Song: ‘ಮುಂದಿನ ಕಾಲಕ್ಕೂ ನೆನಪಿನಲ್ಲಿ ಉಳಿಯುವಂಥದ್ದು ನಾಟು ನಾಟು ಹಾಡು’: ಆಸ್ಕರ್​ ಗೆದ್ದಿದ್ದಕ್ಕೆ ಮೋದಿ ಪ್ರಶಂಸೆ
ದಿ ಎಲಿಫೆಂಟ್ ವಿಸ್ಪರರ್ಸ್, ನರೇಂದ್ರ ಮೋದಿ, ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​
ಮದನ್​ ಕುಮಾರ್​
|

Updated on:Mar 13, 2023 | 11:04 AM

Share

ಭಾರತೀಯ ಚಿತ್ರರಂಗಕ್ಕೆ ಹೊಸ ಚೈತನ್ಯ ಬಂದಿದೆ. ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು (Naatu Naatu Song) ಆಸ್ಕರ್​ ಪ್ರಶಸ್ತಿ ಗೆದ್ದು ಬೀಗುತ್ತಿದೆ. ‘ಅತ್ಯುತ್ತಮ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಈ ಗೀತೆಗೆ ಪ್ರಶಸ್ತಿ ಒಲಿದಿದೆ.​ ಇದನ್ನು ಭಾರತದ ಸಿನಿಪ್ರಿಯರು ಸಂಭ್ರಮಿಸುತ್ತಿದ್ದಾರೆ. 95ನೇ ಅಕಾಡೆಮಿ ಅವಾರ್ಡ್ಸ್​ (Academy Awards) ಕಾರ್ಯಕ್ರಮದಲ್ಲಿ ಎಂಎಂ ಕೀರವಾಣಿ ಮತ್ತು ತಂಡದವರು ಪ್ರತಿಷ್ಠಿತ ಪ್ರಶಸ್ತಿ ಪಡೆದು ನಗು ಚೆಲ್ಲಿದ್ದಾರೆ. ಈ ಖುಷಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಟ್ವೀಟ್​ ಮಾಡಿದ್ದಾರೆ. ಜೊತೆಗೆ ‘ಅತ್ಯುತ್ತಮ ಡಾಕ್ಯುಮೆಂಟರಿ ಶಾರ್ಟ್​ ಫಿಲ್ಮ್​’ ವಿಭಾಗದಲ್ಲಿ ಪ್ರಶಸ್ತಿ ಗೆದ್ದ ‘ದಿ ಎಲಿಫೆಂಟ್​ ವಿಸ್ಪರರ್ಸ್​’ ತಂಡಕ್ಕೂ ಅವರು ಟ್ವಿಟರ್​ ಮೂಲಕ ಅಭಿನಂದನೆ ತಿಳಿಸಿದ್ದಾರೆ. ಅದೇ ರೀತಿ ಅನೇಕ ಸೆಲೆಬ್ರಿಟಿಗಳು ಕೂಡ ಪ್ರಶಸ್ತಿ ವಿಜೇತರ ಬೆನ್ನು ತಟ್ಟುತ್ತಿದ್ದಾರೆ.

‘ನಾಟು ನಾಟು..’ ಹಾಡಿನ ಬಗ್ಗೆ ಮೋದಿ ಟ್ವೀಟ್​:

‘ಜಾಗತಿಕ ಮಟ್ಟದಲ್ಲಿ ನಾಟು ನಾಟು ಹಾಡು ಜನಪ್ರಿಯತೆ ಪಡೆದುಕೊಂಡಿದೆ. ಇದು ಮುಂದಿನ ಕಾಲಕ್ಕೂ ನೆನಪಿನಲ್ಲಿ ಉಳಿಯುವಂತಹ ಹಾಡು. ಪ್ರತಿಷ್ಠಿತ ಪ್ರಶಸ್ತಿ ಗೆದ್ದಿದ್ದಕ್ಕಾಗಿ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ, ಗೀತರಚನಕಾರ ಚಂದ್ರಬೋಸ್​ ಮತ್ತು ಇಡೀ ತಂಡಕ್ಕೆ ಅಭಿನಂದನೆಗಳು. ಭಾರತಕ್ಕೆ ಸಂತಸ ಮತ್ತು ಹೆಮ್ಮೆ’ ಎಂದು ನರೇಂದ್ರ ಮೋದಿ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ
Image
Oscar 2023 Winners List: ಈ ವರ್ಷ ಆಸ್ಕರ್ ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ
Image
Oscar 2023: ಆಸ್ಕರ್ ಗೆದ್ದು ಬೀಗಿದ ‘ನಾಟು ನಾಟು..’ ಹಾಡು; ರಾಜಮೌಳಿ ಚಿತ್ರಕ್ಕೆ ಮತ್ತೊಂದು ಕಿರೀಟ
Image
The Elephant Whisperers: ಭಾರತಕ್ಕೆ ಆಸ್ಕರ್​: ‘ದಿ ಎಲಿಫೆಂಟ್​ ವಿಸ್ಪರರ್ಸ್​’ಗೆ ಅಕಾಡೆಮಿ ಪ್ರಶಸ್ತಿ 
Image
Ram Charan: ‘ಭಾರತೀಯರಿಗೆ ಆಸ್ಕರ್​ ಪ್ರಶಸ್ತಿ ಅಂದ್ರೆ ಒಲಂಪಿಕ್ಸ್​ ಗೋಲ್ಡ್​ ಮೆಡಲ್​ ಇದ್ದಂಗೆ’: ರಾಮ್​ ಚರಣ್​

ಆನೆ ಸಾಕುವವರ ಜೀವನದ ಕುರಿತು ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಸಾಕ್ಷ್ಯಚಿತ್ರ ತಯಾರಾಗಿದೆ. ಆಸ್ಕರ್​ ಗೆದ್ದಿರುವ ಈ ತಂಡಕ್ಕೂ ಮೋದಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಮೂರು ವಿಭಾಗಗಳಲ್ಲಿ ಭಾರತದ ಸಿನಿಮಾಗಳು ಈ ಬಾರಿಯ ಆಸ್ಕರ್​ ಸ್ಪರ್ಧೆಗೆ ನಾಮಿನೇಟ್​ ಆಗಿದ್ದವು. ಆ ಪೈಕಿ ಎರಡು ವಿಭಾಗದಲ್ಲಿ ಪ್ರಶಸ್ತಿ ಗೆದ್ದಿರುವುದು ಖುಷಿ ತಂದಿದೆ.

ಇದನ್ನೂ ಓದಿ: The Elephant Whisperers: ಭಾರತಕ್ಕೆ ಆಸ್ಕರ್​: ‘ದಿ ಎಲಿಫೆಂಟ್​ ವಿಸ್ಪರರ್ಸ್​’ಗೆ ಅಕಾಡೆಮಿ ಪ್ರಶಸ್ತಿ 

‘ಪ್ರತಿ ಭಾರತೀಯ ಹೆಮ್ಮೆಪಡುವ ವಿಷಯ’ ಎಂದ ಎಂ.ಎಂ. ಕೀರವಾಣಿ:

‘ನಾಟು ನಾಟು ಹಾಡಿಗೆ ಆಸ್ಕರ್​ ಪ್ರಶಸ್ತಿ ಸಿಕ್ಕಿದ್ದಕ್ಕೆ ಖುಷಿಯಾಗಿದೆ. ಆಸ್ಕರ್​ ಪ್ರಶಸ್ತಿಯ ಗರಿ ಪ್ರತಿ ಭಾರತೀಯ ಹೆಮ್ಮೆಪಡುವ ವಿಷಯ. ನನ್ನ ಮನಸ್ಸಿನಲ್ಲಿ ಒಂದೇ ಒಂದು ಆಸೆ ಇತ್ತು. ಆರ್​ಆರ್​ಆರ್​ ಚಿತ್ರ ಗೆಲ್ಲಬೇಕು, ಪ್ರತಿ ಭಾರತೀಯ ಹೆಮ್ಮೆ ಪಡಬೇಕು. ಈ ಆಸೆ ಈಡೇರಿದೆ’ ಎಂದಿದ್ದಾರೆ ಕೀರವಾಣಿ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:00 am, Mon, 13 March 23

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ