ಭಾರತೀಯ ಚಿತ್ರರಂಗಕ್ಕೆ ಹೊಸ ಚೈತನ್ಯ ಬಂದಿದೆ. ‘ಆರ್ಆರ್ಆರ್’ ಸಿನಿಮಾದ ‘ನಾಟು ನಾಟು..’ ಹಾಡು (Naatu Naatu Song) ಆಸ್ಕರ್ ಪ್ರಶಸ್ತಿ ಗೆದ್ದು ಬೀಗುತ್ತಿದೆ. ‘ಅತ್ಯುತ್ತಮ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಈ ಗೀತೆಗೆ ಪ್ರಶಸ್ತಿ ಒಲಿದಿದೆ. ಇದನ್ನು ಭಾರತದ ಸಿನಿಪ್ರಿಯರು ಸಂಭ್ರಮಿಸುತ್ತಿದ್ದಾರೆ. 95ನೇ ಅಕಾಡೆಮಿ ಅವಾರ್ಡ್ಸ್ (Academy Awards) ಕಾರ್ಯಕ್ರಮದಲ್ಲಿ ಎಂಎಂ ಕೀರವಾಣಿ ಮತ್ತು ತಂಡದವರು ಪ್ರತಿಷ್ಠಿತ ಪ್ರಶಸ್ತಿ ಪಡೆದು ನಗು ಚೆಲ್ಲಿದ್ದಾರೆ. ಈ ಖುಷಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಟ್ವೀಟ್ ಮಾಡಿದ್ದಾರೆ. ಜೊತೆಗೆ ‘ಅತ್ಯುತ್ತಮ ಡಾಕ್ಯುಮೆಂಟರಿ ಶಾರ್ಟ್ ಫಿಲ್ಮ್’ ವಿಭಾಗದಲ್ಲಿ ಪ್ರಶಸ್ತಿ ಗೆದ್ದ ‘ದಿ ಎಲಿಫೆಂಟ್ ವಿಸ್ಪರರ್ಸ್’ ತಂಡಕ್ಕೂ ಅವರು ಟ್ವಿಟರ್ ಮೂಲಕ ಅಭಿನಂದನೆ ತಿಳಿಸಿದ್ದಾರೆ. ಅದೇ ರೀತಿ ಅನೇಕ ಸೆಲೆಬ್ರಿಟಿಗಳು ಕೂಡ ಪ್ರಶಸ್ತಿ ವಿಜೇತರ ಬೆನ್ನು ತಟ್ಟುತ್ತಿದ್ದಾರೆ.
‘ಜಾಗತಿಕ ಮಟ್ಟದಲ್ಲಿ ನಾಟು ನಾಟು ಹಾಡು ಜನಪ್ರಿಯತೆ ಪಡೆದುಕೊಂಡಿದೆ. ಇದು ಮುಂದಿನ ಕಾಲಕ್ಕೂ ನೆನಪಿನಲ್ಲಿ ಉಳಿಯುವಂತಹ ಹಾಡು. ಪ್ರತಿಷ್ಠಿತ ಪ್ರಶಸ್ತಿ ಗೆದ್ದಿದ್ದಕ್ಕಾಗಿ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ, ಗೀತರಚನಕಾರ ಚಂದ್ರಬೋಸ್ ಮತ್ತು ಇಡೀ ತಂಡಕ್ಕೆ ಅಭಿನಂದನೆಗಳು. ಭಾರತಕ್ಕೆ ಸಂತಸ ಮತ್ತು ಹೆಮ್ಮೆ’ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
Exceptional!
The popularity of ‘Naatu Naatu’ is global. It will be a song that will be remembered for years to come. Congratulations to @mmkeeravaani, @boselyricist and the entire team for this prestigious honour.
India is elated and proud. #Oscars https://t.co/cANG5wHROt
— Narendra Modi (@narendramodi) March 13, 2023
Congratulations to @EarthSpectrum, @guneetm and the entire team of ‘The Elephant Whisperers’ for this honour. Their work wonderfully highlights the importance of sustainable development and living in harmony with nature. #Oscars https://t.co/S3J9TbJ0OP
— Narendra Modi (@narendramodi) March 13, 2023
ಆನೆ ಸಾಕುವವರ ಜೀವನದ ಕುರಿತು ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರ ತಯಾರಾಗಿದೆ. ಆಸ್ಕರ್ ಗೆದ್ದಿರುವ ಈ ತಂಡಕ್ಕೂ ಮೋದಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಮೂರು ವಿಭಾಗಗಳಲ್ಲಿ ಭಾರತದ ಸಿನಿಮಾಗಳು ಈ ಬಾರಿಯ ಆಸ್ಕರ್ ಸ್ಪರ್ಧೆಗೆ ನಾಮಿನೇಟ್ ಆಗಿದ್ದವು. ಆ ಪೈಕಿ ಎರಡು ವಿಭಾಗದಲ್ಲಿ ಪ್ರಶಸ್ತಿ ಗೆದ್ದಿರುವುದು ಖುಷಿ ತಂದಿದೆ.
ಇದನ್ನೂ ಓದಿ: The Elephant Whisperers: ಭಾರತಕ್ಕೆ ಆಸ್ಕರ್: ‘ದಿ ಎಲಿಫೆಂಟ್ ವಿಸ್ಪರರ್ಸ್’ಗೆ ಅಕಾಡೆಮಿ ಪ್ರಶಸ್ತಿ
‘ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಸಿಕ್ಕಿದ್ದಕ್ಕೆ ಖುಷಿಯಾಗಿದೆ. ಆಸ್ಕರ್ ಪ್ರಶಸ್ತಿಯ ಗರಿ ಪ್ರತಿ ಭಾರತೀಯ ಹೆಮ್ಮೆಪಡುವ ವಿಷಯ. ನನ್ನ ಮನಸ್ಸಿನಲ್ಲಿ ಒಂದೇ ಒಂದು ಆಸೆ ಇತ್ತು. ಆರ್ಆರ್ಆರ್ ಚಿತ್ರ ಗೆಲ್ಲಬೇಕು, ಪ್ರತಿ ಭಾರತೀಯ ಹೆಮ್ಮೆ ಪಡಬೇಕು. ಈ ಆಸೆ ಈಡೇರಿದೆ’ ಎಂದಿದ್ದಾರೆ ಕೀರವಾಣಿ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 11:00 am, Mon, 13 March 23