AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್​ ಚಿತ್ರೋತ್ಸವದಲ್ಲಿ ಪ್ರಶಸ್ತಿ ಗೆದ್ದ ಪಾಯಲ್​ ಕಪಾಡಿಯಾಗೆ ನರೇಂದ್ರ ಮೋದಿ ಅಭಿನಂದನೆ

ನಿರ್ದೇಶಕಿ ಪಾಯಲ್​ ಕಪಾಡಿಯಾ ಅವರಿಗೆ ಕಾನ್​ ಚಿತ್ರೋತ್ಸವದಲ್ಲಿ ‘ಗ್ರ್ಯಾಂಡ್​ ಪ್ರಿಕ್ಸ್​’ ಪ್ರಶಸ್ತಿ ನೀಡಲಾಗಿದೆ. ಈ ಕಾರಣಕ್ಕಾಗಿ ಭಾರತೀಯರಿಗೆ 77ನೇ ಸಾಲಿನ ಕಾನ್​ ಫಿಲ್ಮ್​ ಫೆಸ್ಟಿವಲ್​ ವಿಶೇಷವಾಗಿದೆ. ‘ಆಲ್​ ವಿ ಇಮ್ಯಾಜಿನ್​ ಆ್ಯಸ್​ ಲೈಟ್​’ ಚಿತ್ರಕ್ಕೆ ಪ್ರತಿಷ್ಠಿತ ಪ್ರಶಸ್ತಿ ಸಿಕ್ಕಿದ್ದು, ನರೇಂದ್ರ ಮೋದಿ ಅವರು ಪಾಯಲ್​ ಕಪಾಡಿಯಾಗೆ ಅಭಿನಂದನೆ ಸಲ್ಲಿಸಿದ್ದಾರೆ.

ಕಾನ್​ ಚಿತ್ರೋತ್ಸವದಲ್ಲಿ ಪ್ರಶಸ್ತಿ ಗೆದ್ದ ಪಾಯಲ್​ ಕಪಾಡಿಯಾಗೆ ನರೇಂದ್ರ ಮೋದಿ ಅಭಿನಂದನೆ
ಚಿತ್ರತಂಡದ ಜೊತೆ ಪಾಯಲ್​ ಕಪಾಡಿಯಾ
ಮದನ್​ ಕುಮಾರ್​
|

Updated on: May 26, 2024 | 8:25 PM

Share

77ನೇ ಸಾಲಿನ ಕಾನ್ಫಿಲ್ಮ್​ ಫೆಸ್ಟಿವಲ್​ನಲ್ಲಿ ಭಾರತಕ್ಕೆ ಪ್ರತಿಷ್ಠಿತ ಪ್ರಶಸ್ತಿ ಸಿಕ್ಕಿದೆ. ನಿರ್ದೇಶಕಿ ಪಾಯಲ್​ ಕಪಾಡಿಯಾ ಅವರ ‘ಆಲ್​ ವಿ ಇಮ್ಯಾಜಿನ್​ ಆ್ಯಸ್​ ಲೈಟ್​’ (All We Imagine As Light) ಸಿನಿಮಾಗೆ ಗ್ರ್ಯಾಂಡ್​ ಪ್ರಿಕ್ಸ್​ ಪ್ರಶಸ್ತಿ ದೊರೆತಿದೆ. ಈ ಪ್ರಶಸ್ತಿ ಪಡೆದ ಭಾರತದ ಮೊದಲ ಡೈರೆಕ್ಟರ್​ ಎಂಬ ಖ್ಯಾತಿಗೆ ಪಾಯಲ್​ ಕಪಾಡಿಯಾ (Payal Kapadia) ಅವರು ಪಾತ್ರರಾಗಿದ್ದಾರೆ. ಅವರಿಗೆ ಸೋಶಿಯಲ್​ ಮೀಡಿಯಾ ಮೂಲಕ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದಾರೆ. ಪಾಯಲ್​ ಕಪಾಡಿಯಾ ಅವರಿಂದಾಗಿ ಯುವ ಫಿಲ್ಮ್​ ಮೇಕರ್​ಗಳಿಗೆ ಸ್ಫೂರ್ತಿ ಸಿಕ್ಕಿದೆ ಎಂದು ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.

‘ಪಾಯಲ್​ ಕಪಾಡಿಯಾ ಅವರಿಂದ ಭಾರತಕ್ಕೆ ಹೆಮ್ಮೆ ಆಗಿದೆ. 77ನೇ ಕಾನ್​ ಚಿತ್ರೋತ್ಸವದಲ್ಲಿ ‘ಆಲ್​ ವಿ ಇಮ್ಯಾಜಿನ್​ ಆ್ಯಸ್​ ಲೈಟ್​’ ಸಿನಿಮಾಗೆ ಅವರು ಗ್ರ್ಯಾಂಡ್​ ಪ್ರಿಕ್ಸ್​ ಪ್ರಶಸ್ತಿ ಪಡೆದು ಇತಿಹಾಸ ನಿರ್ಮಿಸಿದ್ದಾರೆ. ಫಿಲ್ಮ್​ ಆ್ಯಂಡ್​ ಟೆಲಿವಿಷನ್​ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾದ ಹಳೇ ವಿದ್ಯಾರ್ಥಿಯಾದ ಅವರು ಜಾಗತಿಕ ಮಟ್ಟದಲ್ಲಿ ತಮ್ಮ ಪ್ರತಿಭೆಯಿಂದ ಶೈನ್​ ಆಗುತ್ತಿದ್ದಾರೆ. ಭಾರತದ ಶ್ರೀಮಂತ ಸೃಜನಶೀಲತೆಗೆ ಅವರು ಸಾಕ್ಷಿ. ಈ ಪ್ರತಿಷ್ಠಿತ ಪ್ರಶಸ್ತಿಯು ಅವರಿಗೆ ಸಂದ ಗೌರವ ಮಾತವಲ್ಲದೇ, ಭಾರತದಲ್ಲಿನ ಹೊಸ ತಲೆಮಾರಿನ ಫಿಲ್ಮ್​ ಮೇಕರ್​ಗಳಿಗೆ ಸ್ಫೂರ್ತಿಯಾಗಿದೆ’ ಎಂದು ನರೇಂದ್ರ ಮೋದಿ ಅವರು ‘ಎಕ್ಸ್​’ (ಟ್ವಿಟರ್​) ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ.

ಕಳೆದ 30 ವರ್ಷಗಳಲ್ಲಿ ಕಾನ್​ ಚಿತ್ರೋತ್ಸವದ ಮುಖ್ಯ ವಿಭಾಗದಲ್ಲಿ ಸ್ಪರ್ಧಿಸಿದ ಭಾರತದ ಮೊದಲ ಸಿನಿಮಾ ಇದಾಗಿದೆ. ಬೇರೆ ಬೇರೆ ದೇಶಗಳ ಸಿನಿಮಾಗಳ ಜೊತೆ ಸ್ಪರ್ಧಿಸಿ ‘ಆಲ್​ ವಿ ಇಮ್ಯಾಜಿನ್​ ಆ್ಯಸ್​ ಲೈಟ್​’ ಸಿನಿಮಾ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಸಿನಿಮಾದ ಕಲಾವಿದರ ಜೊತೆ ನಿರ್ದೇಶಕಿ ಪಾಯಲ್​ ಕಪಾಡಿಯಾ ಅವರು ಕಾನ್​ ಚಿತ್ರೋತ್ಸವಕ್ಕೆ ತೆರಳಿದ್ದಾರೆ.

ಇದನ್ನೂ ಓದಿ: ಕಾನ್​ ಚಿತ್ರೋತ್ಸವದ ರೆಡ್​ ಕಾರ್ಪೆಟ್​ಗೆ ಮೆರುಗು ತಂದ ಅದಿತಿ ರಾವ್​ ಹೈದರಿ

ನಿರ್ದೇಶಕಿ ಪಾಯಲ್​ ಕಪಾಡಿಯಾ ಅವರ ಈ ಸಾಧನೆಗಾಗಿ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಇಂಡೋ-ಫ್ರೆಂಚ್ ಪ್ರೊಡಕ್ಷನ್ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಮೇ 23ರಂದು ಈ ಸಿನಿಮಾದ ಪ್ರೀಮಿಯರ್​ ಆಯಿತು. ಅಂದು ಸಿನಿಮಾ ಮುಗಿದ ಬಳಿಕ ಪ್ರೇಕ್ಷಕರು 8 ನಿಮಿಷಗಳ ಕಾಲ ಎದ್ದು ನಿಂತು ಈ ಚಿತ್ರತಂಡಕ್ಕೆ ಗೌರವ ಸಲ್ಲಿಸಿದರು ಎಂಬುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ