ರಾಮನ ಭಜನೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಮನ ಗೆದ್ದ ಗಾಯಕಿ ಸ್ವಾತಿ ಮಿಶ್ರಾ

ಸ್ವಾತಿ ಮಿಶ್ರಾ ಅವರು ಬಹುಮುಖ ಪ್ರತಿಭೆ ಎನಿಸಿಕೊಂಡಿದ್ದಾರೆ. ಹಾಡುವುದರ ಜೊತೆಗೆ ಸಾಹಿತ್ಯವನ್ನೂ ಅವರು ರಚಿಸುತ್ತಾರೆ. ಅನೇಕ ಭಕ್ತಿ ಗೀತೆಗಳನ್ನು ಅವರು ಬರೆದಿದ್ದಾರೆ. ‘ರಾಮ್​ ಆಯೆಂಗೆ..’ ಭಜನೆಯು ಯೂಟ್ಯೂಬ್​ನಲ್ಲಿ 4.4 ಕೋಟಿ​ಗಿಂತಲೂ ಹೆಚ್ಚು ಬಾರಿ ವೀಕ್ಷಣೆ ಕಂಡಿದೆ. ಇದನ್ನು ನೋಡಿ ನರೇಂದ್ರ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ.

ರಾಮನ ಭಜನೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಮನ ಗೆದ್ದ ಗಾಯಕಿ ಸ್ವಾತಿ ಮಿಶ್ರಾ
ಸ್ವಾತಿ ಮಿಶ್ರಾ, ನರೇಂದ್ರ ಮೋದಿ,
Follow us
|

Updated on:Jan 04, 2024 | 11:36 AM

ಅಯೋಧ್ಯೆಯಲ್ಲಿ ರಾಮ ಮಂದಿರ (Ram Mandir) ಉದ್ಘಾಟನೆಗೆ ದಿನಗಣನೆ ಆರಂಭ ಆಗಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಕೋಟ್ಯಂತರ ಮಂದಿ ಕಾದಿದ್ದಾರೆ. ಈ ಸಂದರ್ಭದಲ್ಲಿ ಗಾಯಕಿ ಸ್ವಾತಿ ಮಿಶ್ರಾ (Swati Mishra) ಅವರು ಹಾಡಿರುವ ರಾಮನ ಭಜನೆ ವೈರಲ್​ ಆಗಿದೆ. ‘ರಾಮ್​ ಆಯೆಂಗೆ..’ ಎಂಬ ಈ ಭಜನೆಯನ್ನು ಕೇಳಿ ಪ್ರಧಾನಿ ನರೇಂದ್ರ ಮೋದಿ (Narendra Modi) ಕೂಡ ಮೆಚ್ಚಿಕೊಂಡಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿರುವ ಅವರು, ‘ರಾಮ್​ ಲಲ್ಲಾನ ಸ್ವಾಗತದ ಸಮಯದಲ್ಲಿ ಸ್ವಾತಿ ಮಿಶ್ರಾ ಅವರ ಈ ಭಜನೆ ಮಂತ್ರಮುಗ್ಧಗೊಳಿಸುವ ರೀತಿಯಲ್ಲಿ ಇದೆ’ ಎಂದು ಬರೆದುಕೊಂಡಿದ್ದಾರೆ.

ಸುಮಧುರ ಕಂಠ ಹೊಂದಿರುವ ಸ್ವಾತಿ ಮಿಶ್ರಾ ಅವರು ಮುಂಬೈನವರು. ತಮ್ಮ ಹಾಡುಗಳ ಮೂಲಕ ಅವರು ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ತಮ್ಮದೇ ಯೂಟ್ಯೂಬ್​ ಚಾನೆಲ್​ ಹೊಂದಿರುವ ಅವರು ಅನೇಕ ಹಾಡುಗಳನ್ನು ರಿಲೀಸ್​ ಮಾಡಿದ್ದಾರೆ. ಹಲವು ಸಂಗೀತ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲೂ ಸ್ವಾತಿ ಮಿಶ್ರಾ ಆ್ಯಕ್ಟೀವ್​ ಆಗಿದ್ದಾರೆ.

ಸ್ವಾತಿ ಮಿಶ್ರಾ ಅವರು ಬಹುಮುಖ ಪ್ರತಿಭೆ ಎನಿಸಿಕೊಂಡಿದ್ದಾರೆ. ಹಾಡುವುದರ ಜೊತೆಗೆ ಸಾಹಿತ್ಯವನ್ನೂ ಅವರು ರಚಿಸುತ್ತಾರೆ. ಅನೇಕ ಭಕ್ತಿ ಗೀತೆಗಳನ್ನು ಅವರು ಬರೆದಿದ್ದಾರೆ. ಇತ್ತೀಚೆಗೆ ಅವರು ಬಿಡುಗಡೆ ಮಾಡಿದ ‘ಜನಮ್​ ಭೂಮಿ ಕೆ ಲಾಲ್​ ರಾಮ್​ ಆಯೆ ಹೈ..’ ಹಾಡು ಕೂಡ ಫೇಮಸ್​ ಆಗಿದೆ. ‘ರಾಮ್​ ಆಯೆಂಗೆ..’ ಭಜನೆಯು ಯೂಟ್ಯೂಬ್​ನಲ್ಲಿ 44 ಮಿಲಿಯನ್​ಗಿಂತಲೂ ಹೆಚ್ಚು ಬಾರಿ ವೀಕ್ಷಣೆ ಕಂಡಿದೆ.

ಅನೇಕ ಕವರ್​ ಸಾಂಗ್​ಗಳಿಗೆ ಸ್ವಾತಿ ಮಿಶ್ರಾ ಧ್ವನಿ ನೀಡಿದ್ದಾರೆ. ‘ರಾಮ್ ಆಯೆಂಗೆ..’ ಭಜನೆಯನ್ನು ಅವರು 2023ರ ಅಕ್ಟೋಬರ್​ನಲ್ಲಿ ರಿಲೀಸ್​ ಮಾಡಿದ್ದರು. ಈಗ ಇದರ ಬಗ್ಗೆ ನರೇಂದ್ರ ಮೋದಿ ಟ್ವೀಟ್​ ಮಾಡಿದ ಬಳಿಕ ವೀಕ್ಷಣೆ ಹೆಚ್ಚಾಗಿದೆ. ಸ್ವಾತಿ ಮಿಶ್ರ ಅವರ ಜನಪ್ರಿಯತೆ ಕೂಡ ದುಪ್ಪಟ್ಟಾಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಸ್ವಾತಿ ಮಿಶ್ರಾ ಅವರನ್ನು ಏಳೂವರೆ ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:36 am, Thu, 4 January 24

ಎಡಿಜಿಪಿ ಚಂದ್ರಶೇಖರ್ ದಾಖಲಿಸಿದ ದೂರಿನ ಬಗ್ಗೆ ಕುಮಾರಸ್ವಾಮಿ ಖಡಕ್ ಮಾತು
ಎಡಿಜಿಪಿ ಚಂದ್ರಶೇಖರ್ ದಾಖಲಿಸಿದ ದೂರಿನ ಬಗ್ಗೆ ಕುಮಾರಸ್ವಾಮಿ ಖಡಕ್ ಮಾತು
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
"ಇಟ್ಟ ರಾಮನ ಬಾಣ ಹುಸಿಯಿಲ್ಲ" ಆತಂಕ ಮೂಡಿಸಿದ ಮೈಲಾರಲಿಂಗೇಶ್ವರ ಕಾರ್ಣಿಕ
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್