AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನ ಭಜನೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಮನ ಗೆದ್ದ ಗಾಯಕಿ ಸ್ವಾತಿ ಮಿಶ್ರಾ

ಸ್ವಾತಿ ಮಿಶ್ರಾ ಅವರು ಬಹುಮುಖ ಪ್ರತಿಭೆ ಎನಿಸಿಕೊಂಡಿದ್ದಾರೆ. ಹಾಡುವುದರ ಜೊತೆಗೆ ಸಾಹಿತ್ಯವನ್ನೂ ಅವರು ರಚಿಸುತ್ತಾರೆ. ಅನೇಕ ಭಕ್ತಿ ಗೀತೆಗಳನ್ನು ಅವರು ಬರೆದಿದ್ದಾರೆ. ‘ರಾಮ್​ ಆಯೆಂಗೆ..’ ಭಜನೆಯು ಯೂಟ್ಯೂಬ್​ನಲ್ಲಿ 4.4 ಕೋಟಿ​ಗಿಂತಲೂ ಹೆಚ್ಚು ಬಾರಿ ವೀಕ್ಷಣೆ ಕಂಡಿದೆ. ಇದನ್ನು ನೋಡಿ ನರೇಂದ್ರ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ.

ರಾಮನ ಭಜನೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಮನ ಗೆದ್ದ ಗಾಯಕಿ ಸ್ವಾತಿ ಮಿಶ್ರಾ
ಸ್ವಾತಿ ಮಿಶ್ರಾ, ನರೇಂದ್ರ ಮೋದಿ,
ಮದನ್​ ಕುಮಾರ್​
|

Updated on:Jan 04, 2024 | 11:36 AM

Share

ಅಯೋಧ್ಯೆಯಲ್ಲಿ ರಾಮ ಮಂದಿರ (Ram Mandir) ಉದ್ಘಾಟನೆಗೆ ದಿನಗಣನೆ ಆರಂಭ ಆಗಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಕೋಟ್ಯಂತರ ಮಂದಿ ಕಾದಿದ್ದಾರೆ. ಈ ಸಂದರ್ಭದಲ್ಲಿ ಗಾಯಕಿ ಸ್ವಾತಿ ಮಿಶ್ರಾ (Swati Mishra) ಅವರು ಹಾಡಿರುವ ರಾಮನ ಭಜನೆ ವೈರಲ್​ ಆಗಿದೆ. ‘ರಾಮ್​ ಆಯೆಂಗೆ..’ ಎಂಬ ಈ ಭಜನೆಯನ್ನು ಕೇಳಿ ಪ್ರಧಾನಿ ನರೇಂದ್ರ ಮೋದಿ (Narendra Modi) ಕೂಡ ಮೆಚ್ಚಿಕೊಂಡಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿರುವ ಅವರು, ‘ರಾಮ್​ ಲಲ್ಲಾನ ಸ್ವಾಗತದ ಸಮಯದಲ್ಲಿ ಸ್ವಾತಿ ಮಿಶ್ರಾ ಅವರ ಈ ಭಜನೆ ಮಂತ್ರಮುಗ್ಧಗೊಳಿಸುವ ರೀತಿಯಲ್ಲಿ ಇದೆ’ ಎಂದು ಬರೆದುಕೊಂಡಿದ್ದಾರೆ.

ಸುಮಧುರ ಕಂಠ ಹೊಂದಿರುವ ಸ್ವಾತಿ ಮಿಶ್ರಾ ಅವರು ಮುಂಬೈನವರು. ತಮ್ಮ ಹಾಡುಗಳ ಮೂಲಕ ಅವರು ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ತಮ್ಮದೇ ಯೂಟ್ಯೂಬ್​ ಚಾನೆಲ್​ ಹೊಂದಿರುವ ಅವರು ಅನೇಕ ಹಾಡುಗಳನ್ನು ರಿಲೀಸ್​ ಮಾಡಿದ್ದಾರೆ. ಹಲವು ಸಂಗೀತ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲೂ ಸ್ವಾತಿ ಮಿಶ್ರಾ ಆ್ಯಕ್ಟೀವ್​ ಆಗಿದ್ದಾರೆ.

ಸ್ವಾತಿ ಮಿಶ್ರಾ ಅವರು ಬಹುಮುಖ ಪ್ರತಿಭೆ ಎನಿಸಿಕೊಂಡಿದ್ದಾರೆ. ಹಾಡುವುದರ ಜೊತೆಗೆ ಸಾಹಿತ್ಯವನ್ನೂ ಅವರು ರಚಿಸುತ್ತಾರೆ. ಅನೇಕ ಭಕ್ತಿ ಗೀತೆಗಳನ್ನು ಅವರು ಬರೆದಿದ್ದಾರೆ. ಇತ್ತೀಚೆಗೆ ಅವರು ಬಿಡುಗಡೆ ಮಾಡಿದ ‘ಜನಮ್​ ಭೂಮಿ ಕೆ ಲಾಲ್​ ರಾಮ್​ ಆಯೆ ಹೈ..’ ಹಾಡು ಕೂಡ ಫೇಮಸ್​ ಆಗಿದೆ. ‘ರಾಮ್​ ಆಯೆಂಗೆ..’ ಭಜನೆಯು ಯೂಟ್ಯೂಬ್​ನಲ್ಲಿ 44 ಮಿಲಿಯನ್​ಗಿಂತಲೂ ಹೆಚ್ಚು ಬಾರಿ ವೀಕ್ಷಣೆ ಕಂಡಿದೆ.

ಅನೇಕ ಕವರ್​ ಸಾಂಗ್​ಗಳಿಗೆ ಸ್ವಾತಿ ಮಿಶ್ರಾ ಧ್ವನಿ ನೀಡಿದ್ದಾರೆ. ‘ರಾಮ್ ಆಯೆಂಗೆ..’ ಭಜನೆಯನ್ನು ಅವರು 2023ರ ಅಕ್ಟೋಬರ್​ನಲ್ಲಿ ರಿಲೀಸ್​ ಮಾಡಿದ್ದರು. ಈಗ ಇದರ ಬಗ್ಗೆ ನರೇಂದ್ರ ಮೋದಿ ಟ್ವೀಟ್​ ಮಾಡಿದ ಬಳಿಕ ವೀಕ್ಷಣೆ ಹೆಚ್ಚಾಗಿದೆ. ಸ್ವಾತಿ ಮಿಶ್ರ ಅವರ ಜನಪ್ರಿಯತೆ ಕೂಡ ದುಪ್ಪಟ್ಟಾಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಸ್ವಾತಿ ಮಿಶ್ರಾ ಅವರನ್ನು ಏಳೂವರೆ ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:36 am, Thu, 4 January 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ