AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Parliament Building: ಹೊಸ ಸಂಸತ್​ ಕಟ್ಟಡದ ಉದ್ಘಾಟನೆ ಬಳಿಕ ಅಭಿನಂದನೆ ತಿಳಿಸಿದ ಶಾರುಖ್​ ಖಾನ್​; ನರೇಂದ್ರ ಮೋದಿ ಪ್ರತಿಕ್ರಿಯೆ ಏನು?

Narendra Modi: ಈ ಕಟ್ಟಡದ ವಿಶೇಷತೆ ಮತ್ತು ವೈಭವವನ್ನು ವಿವರಿಸುವ ಒಂದು ವಿಡಿಯೋವನ್ನು ಶಾರುಖ್​ ಖಾನ್​ ಅವರು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರದ್ದೇ ಹಿನ್ನೆಲೆ ಧ್ವನಿ ಇದೆ.

New Parliament Building: ಹೊಸ ಸಂಸತ್​ ಕಟ್ಟಡದ ಉದ್ಘಾಟನೆ ಬಳಿಕ ಅಭಿನಂದನೆ ತಿಳಿಸಿದ ಶಾರುಖ್​ ಖಾನ್​; ನರೇಂದ್ರ ಮೋದಿ ಪ್ರತಿಕ್ರಿಯೆ ಏನು?
ಸಂಸತ್​ನ ಹೊಸ ಕಟ್ಟಡ,  ನರೇಂದ್ರ ಮೋದಿ, ಶಾರುಖ್​ ಖಾನ್​
Follow us
ಮದನ್​ ಕುಮಾರ್​
|

Updated on:May 28, 2023 | 3:19 PM

ದೆಹಲಿಯಲ್ಲಿ ಇಂದು (ಮೇ 28) ಸಂಸತ್​ನ ಹೊಸ ಕಟ್ಟಡ (New Parliament Building) ಉದ್ಘಾಟನೆಗೊಂಡಿದೆ. ಕೇಂದ್ರ ಸಚಿವರು, ಮುಖ್ಯಮಂತ್ರಿಗಳು, ಪುರೋಹಿತರು ಮತ್ತು ಇತರೆ ಗಣ್ಯರ ಸಮ್ಮುಖದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದ ಉದ್ಘಾಟನೆಗೊಂಡ ಈ ಕಟ್ಟಡದ ವಿಶೇಷತೆ ಮತ್ತು ವೈಭವವನ್ನು ವಿವರಿಸುವ ಒಂದು ವಿಡಿಯೋವನ್ನು ಶಾರುಖ್​ ಖಾನ್ (Shah Rukh Khan)​ ಅವರು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರದ್ದೇ ಹಿನ್ನೆಲೆ ಧ್ವನಿ ಇದೆ. ಟ್ವಿಟರ್​ನಲ್ಲಿ ಇದನ್ನು ಶೇರ್​ ಮಾಡಿಕೊಂಡಿರುವ ಅವರು ಅಭಿನಂದನೆ ತಿಳಿಸಿದ್ದಾರೆ. ಅದಕ್ಕೆ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಟ್ವೀಟ್​ ವೈರಲ್​ ಆಗಿದೆ.

‘ಸಂವಿಧಾನವನ್ನು ಎತ್ತಿ ಹಿಡಿಯುವ, ಪ್ರತಿಯೊಬ್ಬ ಪ್ರಜೆಯನ್ನೂ ಪ್ರತಿನಿಧಿಸುವ, ಭಾರತದ ವೈವಿಧ್ಯತೆಯನ್ನು ಕಾಪಾಡುವ ವೈಭವದ ಕಟ್ಟಡ. ಹೊಸ ಭಾರತಕ್ಕೆ ಹೊಸ ಪಾರ್ಲಿಮೆಂಟ್​ ಕಟ್ಟಡ’ ಎಂದು ಶಾರುಖ್​ ಖಾನ್​ ಅವರು ಬಣ್ಣಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮೋದಿ ಅವರು, ‘ಸುಂದರವಾಗಿ ವಿವರಿಸಲಾಗಿದೆ’ ಎಂದು ಟ್ವೀಟ್​ ಮಾಡಿದ್ದಾರೆ. ‘ಪಾರ್ಲಿಮೆಂಟ್​ನ ಈ ಹೊಸ ಕಟ್ಟಡವು ಪ್ರಜಾಪ್ರಭುತ್ವದ ಶಕ್ತಿ ಮತ್ತು ಪ್ರಗತಿಯ ಸಂಕೇತವಾಗಿದೆ. ಸಂಪ್ರದಾಯ ಮತ್ತು ಆಧುನಿಕತೆಯ ಸಮ್ಮಿಲನ ಇದರಲ್ಲಿ ಆಗಿದೆ’ ಎಂದು ನರೇಂದ್ರ ಮೋದಿ ಪೋಸ್ಟ್​ ಮಾಡಿದ್ದಾರೆ.

ಹೊಸ ಸಂಸತ್​ ಕಟ್ಟಡದ ಬಗ್ಗೆ ನಟ ಅಕ್ಷಯ್​ ಕುಮಾರ್​ ಕೂಡ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ‘ಸಂಸತ್ತಿನ ಈ ವೈಭವದ ಹೊಸ ಕಟ್ಟಡವನ್ನು ನೋಡಿ ಹೆಮ್ಮೆಪಡುತ್ತೇನೆ. ಇದು ಎಂದೆಂದಿಗೂ ಭಾರತದ ಬೆಳವಣಿಗೆಯ ಕಥೆಯ ಪ್ರತೀಕವಾಗಲಿ’ ಎಂದು ಅವರು ಟ್ವೀಟ್​ ಮಾಡಿದ್ದಾರೆ.

ಅಕ್ಷಯ್​ ಕುಮಾರ್​ ಅವರ ಟ್ವೀಟ್​ಗೂ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ. ‘ನಿಮ್ಮ ಆಲೋಚನೆಯನ್ನು ನೀವು ತುಂಬ ಚೆನ್ನಾಗಿ ಅಭಿವ್ಯಕ್ತಿಸಿದ್ದೀರಿ. ನಮ್ಮ ಹೊಸ ಸಂಸತ್​ ಕಟ್ಟಡವು ನಿಜವಾಗಿಯೂ ನಮ್ಮ ಪ್ರಜಾಪ್ರಭುತ್ವದ ದಾರಿದೀಪವಾಗಿದೆ. ಇದು ರಾಷ್ಟ್ರದ ಶ್ರೀಮಂತ ಪರಂಪರೆ ಮತ್ತು ಭವಿಷ್ಯದ ರೋಮಾಂಚಕ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ’ ಎಂದು ಮೋದಿ ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:14 pm, Sun, 28 May 23

ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!