AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Parliament Building: ಹೊಸ ಸಂಸತ್​ ಕಟ್ಟಡದ ಉದ್ಘಾಟನೆ ಬಳಿಕ ಅಭಿನಂದನೆ ತಿಳಿಸಿದ ಶಾರುಖ್​ ಖಾನ್​; ನರೇಂದ್ರ ಮೋದಿ ಪ್ರತಿಕ್ರಿಯೆ ಏನು?

Narendra Modi: ಈ ಕಟ್ಟಡದ ವಿಶೇಷತೆ ಮತ್ತು ವೈಭವವನ್ನು ವಿವರಿಸುವ ಒಂದು ವಿಡಿಯೋವನ್ನು ಶಾರುಖ್​ ಖಾನ್​ ಅವರು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರದ್ದೇ ಹಿನ್ನೆಲೆ ಧ್ವನಿ ಇದೆ.

New Parliament Building: ಹೊಸ ಸಂಸತ್​ ಕಟ್ಟಡದ ಉದ್ಘಾಟನೆ ಬಳಿಕ ಅಭಿನಂದನೆ ತಿಳಿಸಿದ ಶಾರುಖ್​ ಖಾನ್​; ನರೇಂದ್ರ ಮೋದಿ ಪ್ರತಿಕ್ರಿಯೆ ಏನು?
ಸಂಸತ್​ನ ಹೊಸ ಕಟ್ಟಡ,  ನರೇಂದ್ರ ಮೋದಿ, ಶಾರುಖ್​ ಖಾನ್​
ಮದನ್​ ಕುಮಾರ್​
|

Updated on:May 28, 2023 | 3:19 PM

Share

ದೆಹಲಿಯಲ್ಲಿ ಇಂದು (ಮೇ 28) ಸಂಸತ್​ನ ಹೊಸ ಕಟ್ಟಡ (New Parliament Building) ಉದ್ಘಾಟನೆಗೊಂಡಿದೆ. ಕೇಂದ್ರ ಸಚಿವರು, ಮುಖ್ಯಮಂತ್ರಿಗಳು, ಪುರೋಹಿತರು ಮತ್ತು ಇತರೆ ಗಣ್ಯರ ಸಮ್ಮುಖದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದ ಉದ್ಘಾಟನೆಗೊಂಡ ಈ ಕಟ್ಟಡದ ವಿಶೇಷತೆ ಮತ್ತು ವೈಭವವನ್ನು ವಿವರಿಸುವ ಒಂದು ವಿಡಿಯೋವನ್ನು ಶಾರುಖ್​ ಖಾನ್ (Shah Rukh Khan)​ ಅವರು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರದ್ದೇ ಹಿನ್ನೆಲೆ ಧ್ವನಿ ಇದೆ. ಟ್ವಿಟರ್​ನಲ್ಲಿ ಇದನ್ನು ಶೇರ್​ ಮಾಡಿಕೊಂಡಿರುವ ಅವರು ಅಭಿನಂದನೆ ತಿಳಿಸಿದ್ದಾರೆ. ಅದಕ್ಕೆ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಟ್ವೀಟ್​ ವೈರಲ್​ ಆಗಿದೆ.

‘ಸಂವಿಧಾನವನ್ನು ಎತ್ತಿ ಹಿಡಿಯುವ, ಪ್ರತಿಯೊಬ್ಬ ಪ್ರಜೆಯನ್ನೂ ಪ್ರತಿನಿಧಿಸುವ, ಭಾರತದ ವೈವಿಧ್ಯತೆಯನ್ನು ಕಾಪಾಡುವ ವೈಭವದ ಕಟ್ಟಡ. ಹೊಸ ಭಾರತಕ್ಕೆ ಹೊಸ ಪಾರ್ಲಿಮೆಂಟ್​ ಕಟ್ಟಡ’ ಎಂದು ಶಾರುಖ್​ ಖಾನ್​ ಅವರು ಬಣ್ಣಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮೋದಿ ಅವರು, ‘ಸುಂದರವಾಗಿ ವಿವರಿಸಲಾಗಿದೆ’ ಎಂದು ಟ್ವೀಟ್​ ಮಾಡಿದ್ದಾರೆ. ‘ಪಾರ್ಲಿಮೆಂಟ್​ನ ಈ ಹೊಸ ಕಟ್ಟಡವು ಪ್ರಜಾಪ್ರಭುತ್ವದ ಶಕ್ತಿ ಮತ್ತು ಪ್ರಗತಿಯ ಸಂಕೇತವಾಗಿದೆ. ಸಂಪ್ರದಾಯ ಮತ್ತು ಆಧುನಿಕತೆಯ ಸಮ್ಮಿಲನ ಇದರಲ್ಲಿ ಆಗಿದೆ’ ಎಂದು ನರೇಂದ್ರ ಮೋದಿ ಪೋಸ್ಟ್​ ಮಾಡಿದ್ದಾರೆ.

ಹೊಸ ಸಂಸತ್​ ಕಟ್ಟಡದ ಬಗ್ಗೆ ನಟ ಅಕ್ಷಯ್​ ಕುಮಾರ್​ ಕೂಡ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ‘ಸಂಸತ್ತಿನ ಈ ವೈಭವದ ಹೊಸ ಕಟ್ಟಡವನ್ನು ನೋಡಿ ಹೆಮ್ಮೆಪಡುತ್ತೇನೆ. ಇದು ಎಂದೆಂದಿಗೂ ಭಾರತದ ಬೆಳವಣಿಗೆಯ ಕಥೆಯ ಪ್ರತೀಕವಾಗಲಿ’ ಎಂದು ಅವರು ಟ್ವೀಟ್​ ಮಾಡಿದ್ದಾರೆ.

ಅಕ್ಷಯ್​ ಕುಮಾರ್​ ಅವರ ಟ್ವೀಟ್​ಗೂ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ. ‘ನಿಮ್ಮ ಆಲೋಚನೆಯನ್ನು ನೀವು ತುಂಬ ಚೆನ್ನಾಗಿ ಅಭಿವ್ಯಕ್ತಿಸಿದ್ದೀರಿ. ನಮ್ಮ ಹೊಸ ಸಂಸತ್​ ಕಟ್ಟಡವು ನಿಜವಾಗಿಯೂ ನಮ್ಮ ಪ್ರಜಾಪ್ರಭುತ್ವದ ದಾರಿದೀಪವಾಗಿದೆ. ಇದು ರಾಷ್ಟ್ರದ ಶ್ರೀಮಂತ ಪರಂಪರೆ ಮತ್ತು ಭವಿಷ್ಯದ ರೋಮಾಂಚಕ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ’ ಎಂದು ಮೋದಿ ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:14 pm, Sun, 28 May 23

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ