AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಎಲಿಫೆಂಟ್​ ವಿಸ್ಪರರ್ಸ್​’ ಖ್ಯಾತಿಯ ಬೆಳ್ಳಿ-ಬೊಮ್ಮನ್​ ದಂಪತಿಯನ್ನು ಭೇಟಿ ಮಾಡಲಿರುವ ಮೋದಿ

The Elephant Whisperers: ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಬುಡಕಟ್ಟು ಪ್ರದೇಶದ ರಸ್ತೆಗಳನ್ನು ನವೀಕರಣ ಮಾಡಲಾಗಿದೆ. 30ಕ್ಕೂ ಅಧಿಕ ಕಂಬಗಳನ್ನು ನಿಲ್ಲಿಸಿ ವಿದ್ಯುತ್​ ಸಂಪರ್ಕ ಕಲ್ಪಿಸಲಾಗಿದೆ.

‘ದಿ ಎಲಿಫೆಂಟ್​ ವಿಸ್ಪರರ್ಸ್​’ ಖ್ಯಾತಿಯ ಬೆಳ್ಳಿ-ಬೊಮ್ಮನ್​ ದಂಪತಿಯನ್ನು ಭೇಟಿ ಮಾಡಲಿರುವ ಮೋದಿ
ಬೆಳ್ಳಿ, ಬೊಮ್ಮನ್, ನರೇಂದ್ರ ಮೋದಿ
ಮದನ್​ ಕುಮಾರ್​
|

Updated on:Apr 04, 2023 | 5:48 PM

Share

ಭಾರತಕ್ಕೆ ಆಸ್ಕರ್​ ಪ್ರಶಸ್ತಿ ತಂದುಕೊಟ್ಟು ‘ದಿ ಎಲಿಫೆಂಟ್​ ವಿಸ್ಪರರ್ಸ್​’ (The Elephant Whisperers) ಸಾಕ್ಷ್ಯಚಿತ್ರ ಸಾಕಷ್ಟು ಫೇಮಸ್​ ಆಗಿದೆ. ಈ ಡಾಕ್ಯುಮೆಂಟರಿಯಲ್ಲಿ ಕಾಣಿಸಿಕೊಂಡ ಬೆಳ್ಳಿ ಮತ್ತು ಬೊಮ್ಮನ್​ ದಂಪತಿಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭೇಟಿ ಮಾಡಲಿದ್ದಾರೆ. ಅನಾಥ ಆನೆಗಳನ್ನು ಸಾಕುವ ಕಾಯಕದಲ್ಲಿ ಈ ದಂಪತಿ ತೊಡಗಿಕೊಂಡಿದ್ದಾರೆ. ಅವರ ಜೀವನದ ಕಥೆಯನ್ನು ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಸಾಕ್ಷ್ಯಚಿತ್ರದಲ್ಲಿ ಮನಮುಟ್ಟುವಂತೆ ತೋರಿಸಲಾಗಿದೆ. ತಮಿಳುನಾಡಿನ ಮುದುಮಲೈ ಹುಲಿ ಸಂರಕ್ಷಿತ ಅರಣ್ಯದ ತೆಪ್ಪಕಾಡು ಆನೆ ಶಿಬಿರಕ್ಕೆ ಮೋದಿ ಅವರು ಏಪ್ರಿಲ್​ 9ರಂದು ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಬೆಳ್ಳಿ ಮತ್ತು ಬೊಮ್ಮನ್​ (Bellie and Bomman) ದಂಪತಿ ಜೊತೆ ಮಾತನಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಭದ್ರತೆ ಮಾಡಲಾಗುತ್ತಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿರುವ ಪ್ರದೇಶಗಳಲ್ಲಿ ಭದ್ರತೆಯ ದೃಷ್ಟಿಯಿಂದ ಸಾರ್ವಜನಿಕರಿಗೆ ಕೆಲವು ನಿರ್ಬಂಧಗಳನ್ನು ಹೇರಲಾಗಿದೆ. ಏಪ್ರಿಲ್​ 7ರಿಂದ ಏಪ್ರಿಲ್​ 9ರವರೆಗೆ ಹೋಟೆಲ್​, ಆನೆ ಸಫಾರಿಯನ್ನು ನಿರ್ಬಂಧಿಸಲಾಗಿದೆ. ಪ್ರವಾಸಿ ವಾಹನಗಳ ಪ್ರವೇಶವನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ. ಮೋದಿ ಆಗಮಿಸುವ ಹೆಲಿಕಾಪ್ಟರ್​ ನಿಲುಗಡೆಗಾಗಿ ಹೆಲಿಪ್ಯಾಡ್​ ಸಿದ್ಧಪಡಿಸಲಾಗಿದೆ.

ಇದನ್ನೂ ಓದಿ: Bomman and Bellie: ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಸಾಕ್ಷ್ಯಚಿತ್ರದಲ್ಲಿ ಕಾಣಿಸಿಕೊಂಡ ಮಾವುತರಿಗೆ ತಮಿಳುನಾಡು ಸಿಎಂ ಬಂಪರ್​ ಕೊಡುಗೆ

ಇದನ್ನೂ ಓದಿ
Image
Oscar 2023 Winners List: ಈ ವರ್ಷ ಆಸ್ಕರ್ ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ
Image
Oscar 2023: ಆಸ್ಕರ್ ಗೆದ್ದು ಬೀಗಿದ ‘ನಾಟು ನಾಟು..’ ಹಾಡು; ರಾಜಮೌಳಿ ಚಿತ್ರಕ್ಕೆ ಮತ್ತೊಂದು ಕಿರೀಟ
Image
The Elephant Whisperers: ಭಾರತಕ್ಕೆ ಆಸ್ಕರ್​: ‘ದಿ ಎಲಿಫೆಂಟ್​ ವಿಸ್ಪರರ್ಸ್​’ಗೆ ಅಕಾಡೆಮಿ ಪ್ರಶಸ್ತಿ 
Image
Ram Charan: ‘ಭಾರತೀಯರಿಗೆ ಆಸ್ಕರ್​ ಪ್ರಶಸ್ತಿ ಅಂದ್ರೆ ಒಲಂಪಿಕ್ಸ್​ ಗೋಲ್ಡ್​ ಮೆಡಲ್​ ಇದ್ದಂಗೆ’: ರಾಮ್​ ಚರಣ್​

ಮೋದಿ ಆಗಮನದ ಹಿನ್ನೆಲೆಯಲ್ಲಿ ಬುಡಕಟ್ಟು ಪ್ರದೇಶದ ರಸ್ತೆಗಳನ್ನು ನವೀಕರಣ ಮಾಡಲಾಗಿದೆ. 30ಕ್ಕೂ ಅಧಿಕ ಕಂಬಗಳನ್ನು ನಿಲ್ಲಿಸಿ, ವಿದ್ಯುತ್​ ಸಂಪರ್ಕ ಕಲ್ಪಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ತಮಿಳುನಾಡು ಅರಣ್ಯ ಇಲಾಖೆಯ ಭಾಗವಾಗಿ ಆನೆಗಳನ್ನು ಸಾಕುವ ಮಾವುತರಾಗಿ ಬೊಮ್ಮನ್​ ಮತ್ತು ಬೆಳ್ಳಿ ದಂಪತಿ ಕೆಲಸ ಮಾಡುತ್ತಿದ್ದಾರೆ. ಅವರ ಕುರಿತಾದ ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಸಾಕ್ಷ್ಯಚಿತ್ರಕ್ಕೆ ಆಸ್ಕರ್​ ಪ್ರಶಸ್ತಿ ಬಂದ ಬಳಿಕ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಕೂಡ ಭೇಟಿ ಮಾಡಿದ್ದರು.

ಇದನ್ನೂ ಓದಿ: The Elephant Whisperers: ಭಾರತಕ್ಕೆ ಆಸ್ಕರ್​: ‘ದಿ ಎಲಿಫೆಂಟ್​ ವಿಸ್ಪರರ್ಸ್​’ಗೆ ಅಕಾಡೆಮಿ ಪ್ರಶಸ್ತಿ 

ಕಾರ್ತಿಕಿ​ ಗೋನ್ಸಾಲ್ವಿಸ್​​ ಅವರು ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಸಾಕ್ಷ್ಯಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಮೊದಲ ಪ್ರಯತ್ನದಲ್ಲೇ ಅವರಿಗೆ ಆಸ್ಕರ್​ ಪ್ರಶಸ್ತಿ ಸಿಕ್ಕಿರುವುದು ವಿಶೇಷ. ಬೊಮ್ಮನ್​ ಮತ್ತು ಬೆಳ್ಳಿ ದಂಪತಿಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರು ಸನ್ಮಾನಿಸಿರುವುದಕ್ಕೆ ಕಾರ್ತಿಕಿ​ ಗೋನ್ಸಾಲ್ವಿಸ್​ ಸಂತಸ ವ್ಯಕ್ತಪಡಿಸಿದ್ದರು. ಆ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಅನಾಥ ಆನೆ ಮರಿಗಳನ್ನು ಬೊಮ್ಮನ್​ ಮತ್ತು ಬೆಳ್ಳಿ ಸಾಕುತ್ತಾರೆ. ಆದರೆ ಆನೆಗಳು ದೊಡ್ಡದಾದ ಬಳಿಕ ಅವುಗಳನ್ನು ಬೇರೆ ಶಿಬಿರಕ್ಕೆ ಸ್ಥಳಾಂತರ ಮಾಡಲಾಗುತ್ತದೆ. ಸ್ವಂತ ಮಕ್ಕಳಂತೆ ಸಾಕಿದ ಆನೆಗಳನ್ನು ದೂರ ಮಾಡುವ ಸಂದರ್ಭ ಬೊಮ್ಮನ್​ ಮತ್ತು ಬೆಳ್ಳಿಗೆ ತುಂಬ ಭಾವುಕವಾಗಿರುತ್ತದೆ. ಈ ಎಲ್ಲ ಅಂಶಗಳನ್ನು ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಸಾಕ್ಷ್ಯಚಿತ್ರದಲ್ಲಿ ಕಟ್ಟಿಕೊಡಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:48 pm, Tue, 4 April 23

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!