AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naresh-Pavithra: ಮದುವೆ ಮುಗಿದ ಕೂಡಲೇ ದುಬೈಗೆ ಹಾರಿದ ನರೇಶ್-ಪವಿತ್ರಾ ಲೋಕೇಶ್ ಜೋಡಿ

ವಿವಾದಗಳ ನಡುವೆ ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಮಾರ್ಚ್ 10 ರಂದು ವಿವಾಹವಾಗಿದ್ದು ಅದರ ಮರುದಿನವೇ ಹನಿಮೂನ್​ಗೆಂದು ದುಬೈಗೆ ಹಾರಿದ್ದಾರೆ.

Naresh-Pavithra: ಮದುವೆ ಮುಗಿದ ಕೂಡಲೇ ದುಬೈಗೆ ಹಾರಿದ ನರೇಶ್-ಪವಿತ್ರಾ ಲೋಕೇಶ್ ಜೋಡಿ
ನರೇಶ್-ಪವಿತ್ರಾ ಲೋಕೇಶ್
ಮಂಜುನಾಥ ಸಿ.
|

Updated on: Mar 11, 2023 | 5:56 PM

Share

ತೆಲುಗು ಚಿತ್ರರಂಗದ ನಟ ನರೇಶ್ (Naresh) ಹಾಗೂ ಪವಿತ್ರಾ ಲೋಕೇಶ್ (Pavitra Lokesh) ಸಂಬಂಧ ಕಳೆದ ಕೆಲ ತಿಂಗಳಿನಿಂದಲೂ ಚರ್ಚೆಯಲ್ಲಿತ್ತು. ನರೇಶ್​ರ ಮೂರನೇ ಪತ್ನಿ ರಮ್ಯಾ ರಘುಪತಿಯ ವಿರೋಧ, ಪ್ರತಿಭಟನೆಗಳಿಂದಾಗಿ ಇವರಿಬ್ಬರ ಸಂಬಂಧದ ಸುದ್ದಿ ವಿವಾದಕ್ಕೆ ಸಿಲುಕಿತ್ತು. ಕೊನೆಗೂ ನರೇಶ್ ಹಾಗೂ ಪವಿತ್ರಾ ಮಾರ್ಚ್ 10 ರಂದು ವಿವಾಹವಾಗಿದ್ದು ಅದರ ಮರುದಿನವೇ ಹನಿಮೂನ್​ಗೆಂದು ದುಬೈಗೆ (Dubai) ಹಾರಿದ್ದಾರೆ.

ನರೇಶ್ ಹಾಗೂ ಪವಿತ್ರಾ ಪ್ರಸ್ತುತ ದುಬೈನಲ್ಲಿದ್ದು ತಮ್ಮ ಹನಿಮೂನ್ (Honeymoon) ಎಂಜಾಯ್ ಮಾಡುತ್ತಿದ್ದಾರೆ. ನರೇಶ್ ಹಾಗೂ ಪವಿತ್ರಾ ಕೈ-ಕೈ ಹಿಡಿದುಕೊಂಡು ದುಬೈನ ಬೀದಿಗಳಲ್ಲಿ, ಮರುಭೂಮಿಯಲ್ಲಿ ಓಡಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಮಾರ್ಚ್ 10 ರಂದು ತಮ್ಮ ವಿವಾಹದ ವಿಡಿಯೋ ತುಣುಕು ಹಂಚಿಕೊಂಡಿದ್ದ ನರೇಶ್, ‘ಹೊಸ ಪಯಣ. ಶಾಂತಿ ಮತ್ತು ನೆಮ್ಮದಿಯ ಜೀವನಕ್ಕೆ ನಿಮ್ಮ ಆಶೀರ್ವಾದ ಇರಲಿ. ಒಂದು ಪವಿತ್ರ ಬಂಧ. ಎರಡು ಮನಸ್ಸುಗಳು, ಏಳು ಹೆಜ್ಜೆಗಳು, ನಿಮ್ಮ ಆಶೀರ್ವಾದವನ್ನು ಕೋರಿ. ನಿಮ್ಮ ಪವಿತ್ರಾ ನರೇಶ್​’ ಎಂದು ಟ್ವೀಟ್ ಮಾಡಿದ್ದರು.

62 ವರ್ಷದ ನಟ ನರೇಶ್​ಗೆ ಇದು ನಾಲ್ಕನೇ ಮದುವೆಯಾದರೆ ಪವಿತ್ರಾ ಲೋಕೇಶ್​ಗೆ ಇದು ಮೂರನೇಯ ಮದುವೆ. ನರೇಶ್, ತಮ್ಮ ಮೂರನೇ ಪತ್ನಿ ರಮ್ಯಾ ರಘುಪತಿಗೆ ವಿಚ್ಚೇದನ ನೀಡುವ ಮೊದಲೇ ಪವಿತ್ರಾ ಲೋಕೇಶ್ ಅವರನ್ನು ವಿವಾಹವಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ನರೇಶ್-ಪವಿತ್ರಾರ ಮದುವೆ ಬಗ್ಗೆ ರಮ್ಯಾ ರಘುಪತಿ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ.

ನರೇಶ್ ಹಾಗೂ ಪವಿತ್ರಾ ಲೋಕೇಶ್ ಹತ್ತಿರವಾಗುತ್ತಲೇ ನರೇಶ್​ರ ಮೂರನೇ ಪತ್ನಿ ರಮ್ಯಾ ರಘಪತಿ ಮಾಧ್ಯಮಗಳ ಮುಂದೆ ಬಂದು ತಮಗೆ ನರೇಶ್ ಅನ್ಯಾಯ ಮಾಡಿದ್ದಾರೆಂದು ಅವಲತ್ತುಕೊಂಡಿದ್ದರು. ಬಳಿಕ ನರೇಶ್ ಸಹ ಬೆಂಗಳೂರಿಗೆ ಬಂದು ಪತ್ರಿಕಾಗೋಷ್ಠಿ ನಡೆಸಿ ರಮ್ಯಾ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಬಳಿಕ ನರೇಶ್ ಹಾಗೂ ಪವಿತ್ರ ಉಳಿದುಕೊಂಡಿದ್ದ ಮೈಸೂರಿನ ಹೋಟೆಲ್​ಗೆ ತೆರಳಿ ರಮ್ಯಾ ರಘುಪತಿ ನೇರವಾಗಿ ನರೇಶ್ ಅನ್ನು ಅಡ್ಡಹಾಕಿ ಬೈಗುಳಗಳ ಸುರಿಮಳೆ ಮಾಡಿದ್ದರಲ್ಲದೆ ಚಪ್ಪಲಿ ಪ್ರದರ್ಶಿಸಿ ಹೈಡ್ರಾಮಾ ಸೃಷ್ಟಿಸಿದ್ದರು.

ಎಲ್ಲ ವಿವಾದಗಳ ಬಳಿಕ ಇದೀಗ ನರೇಶ್ ಹಾಗೂ ಪವಿತ್ರಾ ಲೋಕೇಶ್ ವಿವಾಹವಾಗಿದ್ದಾರೆ. ಇದೀಗ ದುಬೈಗೆ ತೆರಳಿ ಹನಿಮೂನ್ ಎಂಜಾಯ್ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!