AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naresh-Pavithra: ಮದುವೆ ಮುಗಿದ ಕೂಡಲೇ ದುಬೈಗೆ ಹಾರಿದ ನರೇಶ್-ಪವಿತ್ರಾ ಲೋಕೇಶ್ ಜೋಡಿ

ವಿವಾದಗಳ ನಡುವೆ ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಮಾರ್ಚ್ 10 ರಂದು ವಿವಾಹವಾಗಿದ್ದು ಅದರ ಮರುದಿನವೇ ಹನಿಮೂನ್​ಗೆಂದು ದುಬೈಗೆ ಹಾರಿದ್ದಾರೆ.

Naresh-Pavithra: ಮದುವೆ ಮುಗಿದ ಕೂಡಲೇ ದುಬೈಗೆ ಹಾರಿದ ನರೇಶ್-ಪವಿತ್ರಾ ಲೋಕೇಶ್ ಜೋಡಿ
ನರೇಶ್-ಪವಿತ್ರಾ ಲೋಕೇಶ್
Follow us
ಮಂಜುನಾಥ ಸಿ.
|

Updated on: Mar 11, 2023 | 5:56 PM

ತೆಲುಗು ಚಿತ್ರರಂಗದ ನಟ ನರೇಶ್ (Naresh) ಹಾಗೂ ಪವಿತ್ರಾ ಲೋಕೇಶ್ (Pavitra Lokesh) ಸಂಬಂಧ ಕಳೆದ ಕೆಲ ತಿಂಗಳಿನಿಂದಲೂ ಚರ್ಚೆಯಲ್ಲಿತ್ತು. ನರೇಶ್​ರ ಮೂರನೇ ಪತ್ನಿ ರಮ್ಯಾ ರಘುಪತಿಯ ವಿರೋಧ, ಪ್ರತಿಭಟನೆಗಳಿಂದಾಗಿ ಇವರಿಬ್ಬರ ಸಂಬಂಧದ ಸುದ್ದಿ ವಿವಾದಕ್ಕೆ ಸಿಲುಕಿತ್ತು. ಕೊನೆಗೂ ನರೇಶ್ ಹಾಗೂ ಪವಿತ್ರಾ ಮಾರ್ಚ್ 10 ರಂದು ವಿವಾಹವಾಗಿದ್ದು ಅದರ ಮರುದಿನವೇ ಹನಿಮೂನ್​ಗೆಂದು ದುಬೈಗೆ (Dubai) ಹಾರಿದ್ದಾರೆ.

ನರೇಶ್ ಹಾಗೂ ಪವಿತ್ರಾ ಪ್ರಸ್ತುತ ದುಬೈನಲ್ಲಿದ್ದು ತಮ್ಮ ಹನಿಮೂನ್ (Honeymoon) ಎಂಜಾಯ್ ಮಾಡುತ್ತಿದ್ದಾರೆ. ನರೇಶ್ ಹಾಗೂ ಪವಿತ್ರಾ ಕೈ-ಕೈ ಹಿಡಿದುಕೊಂಡು ದುಬೈನ ಬೀದಿಗಳಲ್ಲಿ, ಮರುಭೂಮಿಯಲ್ಲಿ ಓಡಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಮಾರ್ಚ್ 10 ರಂದು ತಮ್ಮ ವಿವಾಹದ ವಿಡಿಯೋ ತುಣುಕು ಹಂಚಿಕೊಂಡಿದ್ದ ನರೇಶ್, ‘ಹೊಸ ಪಯಣ. ಶಾಂತಿ ಮತ್ತು ನೆಮ್ಮದಿಯ ಜೀವನಕ್ಕೆ ನಿಮ್ಮ ಆಶೀರ್ವಾದ ಇರಲಿ. ಒಂದು ಪವಿತ್ರ ಬಂಧ. ಎರಡು ಮನಸ್ಸುಗಳು, ಏಳು ಹೆಜ್ಜೆಗಳು, ನಿಮ್ಮ ಆಶೀರ್ವಾದವನ್ನು ಕೋರಿ. ನಿಮ್ಮ ಪವಿತ್ರಾ ನರೇಶ್​’ ಎಂದು ಟ್ವೀಟ್ ಮಾಡಿದ್ದರು.

62 ವರ್ಷದ ನಟ ನರೇಶ್​ಗೆ ಇದು ನಾಲ್ಕನೇ ಮದುವೆಯಾದರೆ ಪವಿತ್ರಾ ಲೋಕೇಶ್​ಗೆ ಇದು ಮೂರನೇಯ ಮದುವೆ. ನರೇಶ್, ತಮ್ಮ ಮೂರನೇ ಪತ್ನಿ ರಮ್ಯಾ ರಘುಪತಿಗೆ ವಿಚ್ಚೇದನ ನೀಡುವ ಮೊದಲೇ ಪವಿತ್ರಾ ಲೋಕೇಶ್ ಅವರನ್ನು ವಿವಾಹವಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ನರೇಶ್-ಪವಿತ್ರಾರ ಮದುವೆ ಬಗ್ಗೆ ರಮ್ಯಾ ರಘುಪತಿ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ.

ನರೇಶ್ ಹಾಗೂ ಪವಿತ್ರಾ ಲೋಕೇಶ್ ಹತ್ತಿರವಾಗುತ್ತಲೇ ನರೇಶ್​ರ ಮೂರನೇ ಪತ್ನಿ ರಮ್ಯಾ ರಘಪತಿ ಮಾಧ್ಯಮಗಳ ಮುಂದೆ ಬಂದು ತಮಗೆ ನರೇಶ್ ಅನ್ಯಾಯ ಮಾಡಿದ್ದಾರೆಂದು ಅವಲತ್ತುಕೊಂಡಿದ್ದರು. ಬಳಿಕ ನರೇಶ್ ಸಹ ಬೆಂಗಳೂರಿಗೆ ಬಂದು ಪತ್ರಿಕಾಗೋಷ್ಠಿ ನಡೆಸಿ ರಮ್ಯಾ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಬಳಿಕ ನರೇಶ್ ಹಾಗೂ ಪವಿತ್ರ ಉಳಿದುಕೊಂಡಿದ್ದ ಮೈಸೂರಿನ ಹೋಟೆಲ್​ಗೆ ತೆರಳಿ ರಮ್ಯಾ ರಘುಪತಿ ನೇರವಾಗಿ ನರೇಶ್ ಅನ್ನು ಅಡ್ಡಹಾಕಿ ಬೈಗುಳಗಳ ಸುರಿಮಳೆ ಮಾಡಿದ್ದರಲ್ಲದೆ ಚಪ್ಪಲಿ ಪ್ರದರ್ಶಿಸಿ ಹೈಡ್ರಾಮಾ ಸೃಷ್ಟಿಸಿದ್ದರು.

ಎಲ್ಲ ವಿವಾದಗಳ ಬಳಿಕ ಇದೀಗ ನರೇಶ್ ಹಾಗೂ ಪವಿತ್ರಾ ಲೋಕೇಶ್ ವಿವಾಹವಾಗಿದ್ದಾರೆ. ಇದೀಗ ದುಬೈಗೆ ತೆರಳಿ ಹನಿಮೂನ್ ಎಂಜಾಯ್ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ