AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naresh-Pavithra: ಮದುವೆ ಮುಗಿದ ಕೂಡಲೇ ದುಬೈಗೆ ಹಾರಿದ ನರೇಶ್-ಪವಿತ್ರಾ ಲೋಕೇಶ್ ಜೋಡಿ

ವಿವಾದಗಳ ನಡುವೆ ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಮಾರ್ಚ್ 10 ರಂದು ವಿವಾಹವಾಗಿದ್ದು ಅದರ ಮರುದಿನವೇ ಹನಿಮೂನ್​ಗೆಂದು ದುಬೈಗೆ ಹಾರಿದ್ದಾರೆ.

Naresh-Pavithra: ಮದುವೆ ಮುಗಿದ ಕೂಡಲೇ ದುಬೈಗೆ ಹಾರಿದ ನರೇಶ್-ಪವಿತ್ರಾ ಲೋಕೇಶ್ ಜೋಡಿ
ನರೇಶ್-ಪವಿತ್ರಾ ಲೋಕೇಶ್
ಮಂಜುನಾಥ ಸಿ.
|

Updated on: Mar 11, 2023 | 5:56 PM

Share

ತೆಲುಗು ಚಿತ್ರರಂಗದ ನಟ ನರೇಶ್ (Naresh) ಹಾಗೂ ಪವಿತ್ರಾ ಲೋಕೇಶ್ (Pavitra Lokesh) ಸಂಬಂಧ ಕಳೆದ ಕೆಲ ತಿಂಗಳಿನಿಂದಲೂ ಚರ್ಚೆಯಲ್ಲಿತ್ತು. ನರೇಶ್​ರ ಮೂರನೇ ಪತ್ನಿ ರಮ್ಯಾ ರಘುಪತಿಯ ವಿರೋಧ, ಪ್ರತಿಭಟನೆಗಳಿಂದಾಗಿ ಇವರಿಬ್ಬರ ಸಂಬಂಧದ ಸುದ್ದಿ ವಿವಾದಕ್ಕೆ ಸಿಲುಕಿತ್ತು. ಕೊನೆಗೂ ನರೇಶ್ ಹಾಗೂ ಪವಿತ್ರಾ ಮಾರ್ಚ್ 10 ರಂದು ವಿವಾಹವಾಗಿದ್ದು ಅದರ ಮರುದಿನವೇ ಹನಿಮೂನ್​ಗೆಂದು ದುಬೈಗೆ (Dubai) ಹಾರಿದ್ದಾರೆ.

ನರೇಶ್ ಹಾಗೂ ಪವಿತ್ರಾ ಪ್ರಸ್ತುತ ದುಬೈನಲ್ಲಿದ್ದು ತಮ್ಮ ಹನಿಮೂನ್ (Honeymoon) ಎಂಜಾಯ್ ಮಾಡುತ್ತಿದ್ದಾರೆ. ನರೇಶ್ ಹಾಗೂ ಪವಿತ್ರಾ ಕೈ-ಕೈ ಹಿಡಿದುಕೊಂಡು ದುಬೈನ ಬೀದಿಗಳಲ್ಲಿ, ಮರುಭೂಮಿಯಲ್ಲಿ ಓಡಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಮಾರ್ಚ್ 10 ರಂದು ತಮ್ಮ ವಿವಾಹದ ವಿಡಿಯೋ ತುಣುಕು ಹಂಚಿಕೊಂಡಿದ್ದ ನರೇಶ್, ‘ಹೊಸ ಪಯಣ. ಶಾಂತಿ ಮತ್ತು ನೆಮ್ಮದಿಯ ಜೀವನಕ್ಕೆ ನಿಮ್ಮ ಆಶೀರ್ವಾದ ಇರಲಿ. ಒಂದು ಪವಿತ್ರ ಬಂಧ. ಎರಡು ಮನಸ್ಸುಗಳು, ಏಳು ಹೆಜ್ಜೆಗಳು, ನಿಮ್ಮ ಆಶೀರ್ವಾದವನ್ನು ಕೋರಿ. ನಿಮ್ಮ ಪವಿತ್ರಾ ನರೇಶ್​’ ಎಂದು ಟ್ವೀಟ್ ಮಾಡಿದ್ದರು.

62 ವರ್ಷದ ನಟ ನರೇಶ್​ಗೆ ಇದು ನಾಲ್ಕನೇ ಮದುವೆಯಾದರೆ ಪವಿತ್ರಾ ಲೋಕೇಶ್​ಗೆ ಇದು ಮೂರನೇಯ ಮದುವೆ. ನರೇಶ್, ತಮ್ಮ ಮೂರನೇ ಪತ್ನಿ ರಮ್ಯಾ ರಘುಪತಿಗೆ ವಿಚ್ಚೇದನ ನೀಡುವ ಮೊದಲೇ ಪವಿತ್ರಾ ಲೋಕೇಶ್ ಅವರನ್ನು ವಿವಾಹವಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ನರೇಶ್-ಪವಿತ್ರಾರ ಮದುವೆ ಬಗ್ಗೆ ರಮ್ಯಾ ರಘುಪತಿ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ.

ನರೇಶ್ ಹಾಗೂ ಪವಿತ್ರಾ ಲೋಕೇಶ್ ಹತ್ತಿರವಾಗುತ್ತಲೇ ನರೇಶ್​ರ ಮೂರನೇ ಪತ್ನಿ ರಮ್ಯಾ ರಘಪತಿ ಮಾಧ್ಯಮಗಳ ಮುಂದೆ ಬಂದು ತಮಗೆ ನರೇಶ್ ಅನ್ಯಾಯ ಮಾಡಿದ್ದಾರೆಂದು ಅವಲತ್ತುಕೊಂಡಿದ್ದರು. ಬಳಿಕ ನರೇಶ್ ಸಹ ಬೆಂಗಳೂರಿಗೆ ಬಂದು ಪತ್ರಿಕಾಗೋಷ್ಠಿ ನಡೆಸಿ ರಮ್ಯಾ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಬಳಿಕ ನರೇಶ್ ಹಾಗೂ ಪವಿತ್ರ ಉಳಿದುಕೊಂಡಿದ್ದ ಮೈಸೂರಿನ ಹೋಟೆಲ್​ಗೆ ತೆರಳಿ ರಮ್ಯಾ ರಘುಪತಿ ನೇರವಾಗಿ ನರೇಶ್ ಅನ್ನು ಅಡ್ಡಹಾಕಿ ಬೈಗುಳಗಳ ಸುರಿಮಳೆ ಮಾಡಿದ್ದರಲ್ಲದೆ ಚಪ್ಪಲಿ ಪ್ರದರ್ಶಿಸಿ ಹೈಡ್ರಾಮಾ ಸೃಷ್ಟಿಸಿದ್ದರು.

ಎಲ್ಲ ವಿವಾದಗಳ ಬಳಿಕ ಇದೀಗ ನರೇಶ್ ಹಾಗೂ ಪವಿತ್ರಾ ಲೋಕೇಶ್ ವಿವಾಹವಾಗಿದ್ದಾರೆ. ಇದೀಗ ದುಬೈಗೆ ತೆರಳಿ ಹನಿಮೂನ್ ಎಂಜಾಯ್ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!