AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naresh-Pavithra: ಮದುವೆ ಮುಗಿದ ಕೂಡಲೇ ದುಬೈಗೆ ಹಾರಿದ ನರೇಶ್-ಪವಿತ್ರಾ ಲೋಕೇಶ್ ಜೋಡಿ

ವಿವಾದಗಳ ನಡುವೆ ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಮಾರ್ಚ್ 10 ರಂದು ವಿವಾಹವಾಗಿದ್ದು ಅದರ ಮರುದಿನವೇ ಹನಿಮೂನ್​ಗೆಂದು ದುಬೈಗೆ ಹಾರಿದ್ದಾರೆ.

Naresh-Pavithra: ಮದುವೆ ಮುಗಿದ ಕೂಡಲೇ ದುಬೈಗೆ ಹಾರಿದ ನರೇಶ್-ಪವಿತ್ರಾ ಲೋಕೇಶ್ ಜೋಡಿ
ನರೇಶ್-ಪವಿತ್ರಾ ಲೋಕೇಶ್
ಮಂಜುನಾಥ ಸಿ.
|

Updated on: Mar 11, 2023 | 5:56 PM

Share

ತೆಲುಗು ಚಿತ್ರರಂಗದ ನಟ ನರೇಶ್ (Naresh) ಹಾಗೂ ಪವಿತ್ರಾ ಲೋಕೇಶ್ (Pavitra Lokesh) ಸಂಬಂಧ ಕಳೆದ ಕೆಲ ತಿಂಗಳಿನಿಂದಲೂ ಚರ್ಚೆಯಲ್ಲಿತ್ತು. ನರೇಶ್​ರ ಮೂರನೇ ಪತ್ನಿ ರಮ್ಯಾ ರಘುಪತಿಯ ವಿರೋಧ, ಪ್ರತಿಭಟನೆಗಳಿಂದಾಗಿ ಇವರಿಬ್ಬರ ಸಂಬಂಧದ ಸುದ್ದಿ ವಿವಾದಕ್ಕೆ ಸಿಲುಕಿತ್ತು. ಕೊನೆಗೂ ನರೇಶ್ ಹಾಗೂ ಪವಿತ್ರಾ ಮಾರ್ಚ್ 10 ರಂದು ವಿವಾಹವಾಗಿದ್ದು ಅದರ ಮರುದಿನವೇ ಹನಿಮೂನ್​ಗೆಂದು ದುಬೈಗೆ (Dubai) ಹಾರಿದ್ದಾರೆ.

ನರೇಶ್ ಹಾಗೂ ಪವಿತ್ರಾ ಪ್ರಸ್ತುತ ದುಬೈನಲ್ಲಿದ್ದು ತಮ್ಮ ಹನಿಮೂನ್ (Honeymoon) ಎಂಜಾಯ್ ಮಾಡುತ್ತಿದ್ದಾರೆ. ನರೇಶ್ ಹಾಗೂ ಪವಿತ್ರಾ ಕೈ-ಕೈ ಹಿಡಿದುಕೊಂಡು ದುಬೈನ ಬೀದಿಗಳಲ್ಲಿ, ಮರುಭೂಮಿಯಲ್ಲಿ ಓಡಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಮಾರ್ಚ್ 10 ರಂದು ತಮ್ಮ ವಿವಾಹದ ವಿಡಿಯೋ ತುಣುಕು ಹಂಚಿಕೊಂಡಿದ್ದ ನರೇಶ್, ‘ಹೊಸ ಪಯಣ. ಶಾಂತಿ ಮತ್ತು ನೆಮ್ಮದಿಯ ಜೀವನಕ್ಕೆ ನಿಮ್ಮ ಆಶೀರ್ವಾದ ಇರಲಿ. ಒಂದು ಪವಿತ್ರ ಬಂಧ. ಎರಡು ಮನಸ್ಸುಗಳು, ಏಳು ಹೆಜ್ಜೆಗಳು, ನಿಮ್ಮ ಆಶೀರ್ವಾದವನ್ನು ಕೋರಿ. ನಿಮ್ಮ ಪವಿತ್ರಾ ನರೇಶ್​’ ಎಂದು ಟ್ವೀಟ್ ಮಾಡಿದ್ದರು.

62 ವರ್ಷದ ನಟ ನರೇಶ್​ಗೆ ಇದು ನಾಲ್ಕನೇ ಮದುವೆಯಾದರೆ ಪವಿತ್ರಾ ಲೋಕೇಶ್​ಗೆ ಇದು ಮೂರನೇಯ ಮದುವೆ. ನರೇಶ್, ತಮ್ಮ ಮೂರನೇ ಪತ್ನಿ ರಮ್ಯಾ ರಘುಪತಿಗೆ ವಿಚ್ಚೇದನ ನೀಡುವ ಮೊದಲೇ ಪವಿತ್ರಾ ಲೋಕೇಶ್ ಅವರನ್ನು ವಿವಾಹವಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ನರೇಶ್-ಪವಿತ್ರಾರ ಮದುವೆ ಬಗ್ಗೆ ರಮ್ಯಾ ರಘುಪತಿ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ.

ನರೇಶ್ ಹಾಗೂ ಪವಿತ್ರಾ ಲೋಕೇಶ್ ಹತ್ತಿರವಾಗುತ್ತಲೇ ನರೇಶ್​ರ ಮೂರನೇ ಪತ್ನಿ ರಮ್ಯಾ ರಘಪತಿ ಮಾಧ್ಯಮಗಳ ಮುಂದೆ ಬಂದು ತಮಗೆ ನರೇಶ್ ಅನ್ಯಾಯ ಮಾಡಿದ್ದಾರೆಂದು ಅವಲತ್ತುಕೊಂಡಿದ್ದರು. ಬಳಿಕ ನರೇಶ್ ಸಹ ಬೆಂಗಳೂರಿಗೆ ಬಂದು ಪತ್ರಿಕಾಗೋಷ್ಠಿ ನಡೆಸಿ ರಮ್ಯಾ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಬಳಿಕ ನರೇಶ್ ಹಾಗೂ ಪವಿತ್ರ ಉಳಿದುಕೊಂಡಿದ್ದ ಮೈಸೂರಿನ ಹೋಟೆಲ್​ಗೆ ತೆರಳಿ ರಮ್ಯಾ ರಘುಪತಿ ನೇರವಾಗಿ ನರೇಶ್ ಅನ್ನು ಅಡ್ಡಹಾಕಿ ಬೈಗುಳಗಳ ಸುರಿಮಳೆ ಮಾಡಿದ್ದರಲ್ಲದೆ ಚಪ್ಪಲಿ ಪ್ರದರ್ಶಿಸಿ ಹೈಡ್ರಾಮಾ ಸೃಷ್ಟಿಸಿದ್ದರು.

ಎಲ್ಲ ವಿವಾದಗಳ ಬಳಿಕ ಇದೀಗ ನರೇಶ್ ಹಾಗೂ ಪವಿತ್ರಾ ಲೋಕೇಶ್ ವಿವಾಹವಾಗಿದ್ದಾರೆ. ಇದೀಗ ದುಬೈಗೆ ತೆರಳಿ ಹನಿಮೂನ್ ಎಂಜಾಯ್ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ