Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್, ರಾಮ್ ಚರಣ್ ಬಳಿಕ ವಿಜಯ್ ದೇವರಕೊಂಡ ಪಾಲಾದ ನರ್ತನ್ ಕತೆ

Narthan: ‘ಮಫ್ತಿ’ ನಿರ್ದೇಶಕ ನರ್ತನ್ ಈ ಹಿಂದೆ ಯಶ್​ಗೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿತ್ತು. ಅದಾದ ಬಳಿಕ ರಾಮ್ ಚರಣ್ ಗೆ ಸಿನಿಮಾ ಮಾಡ್ತಾರೆ ಎಂಬ ಸುದ್ದಿ ಹರಿದಾಡಿತು. ಇದೀಗ ಮತ್ತೊಬ್ಬ ಹೀರೋಗೆ ಕತೆ ಹೇಳಿದ್ದಾರಂತೆ.

ಯಶ್, ರಾಮ್ ಚರಣ್ ಬಳಿಕ ವಿಜಯ್ ದೇವರಕೊಂಡ ಪಾಲಾದ ನರ್ತನ್ ಕತೆ
Follow us
ಮಂಜುನಾಥ ಸಿ.
|

Updated on: Feb 27, 2024 | 7:10 PM

‘ಮಫ್ತಿ’ (Mufti) ಸಿನಿಮಾ ನಿರ್ದೇಶಿಸಿದ್ದ ನರ್ತನ್ (Narthan), ಯಶ್​ಗಾಗಿ ಸಿನಿಮಾ ಮಾಡಲಿದ್ದಾರೆ ಎಂದು ಜೋರು ಸುದ್ದಿ ಹರಿದಾಡಿತ್ತು. ತಾವು ಯಶ್​ಗಾಗಿ ಕತೆ ಮಾಡುತ್ತಿರುವುದಾಗಿ ಸ್ವತಃ ನರ್ತನ್ ಹೇಳಿದ್ದರು. ಯಶ್​ಗಾಗಿ ಕತೆಯನ್ನು ಸಹ ರೆಡಿ ಮಾಡಿದ್ದರು ಆದರೆ ಅದೇಕೋ ಸಿನಿಮಾ ಸೆಟ್ಟೇರಲಿಲ್ಲ. ಕತೆಯ ಕೆಲವು ಅಂಶಗಳು ಯಶ್​ಗೆ ಹಿಡಿಸಲಿಲ್ಲವಾದ್ದರಿಂದ ಸಿನಿಮಾ ಕೈಬಿಟ್ಟಿದ್ದಾಗಿ ಹೇಳಲಾಗಿತ್ತು. ಬಳಿಕ ಅದೇ ಕತೆಯನ್ನು ತೆಲುಗಿನ ರಾಮ್​ ಚರಣ್​ಗಾಗಿ ಸ್ವತಃ ನರ್ತನ್ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿಗಳು ಕೇಳಿ ಬಂದಿತ್ತು. ಆದರೆ ಈಗ ಮತ್ತೊಮ್ಮೆ ನಾಯಕ ಬದಲಾಗಿದ್ದಾರೆ.

ನರ್ತನ್, ರಾಮ್ ಚರಣ್​ಗಾಗಿ ಸಿನಿಮಾ ಮಾಡುವುದು ಬಹುತೇಕ ಖಾತ್ರಿಯಾಗಿತ್ತು. ನರ್ತನ್, ರಾಮ್ ಚರಣ್​ಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದಾಗಲಂತೂ ಇಬ್ಬರೂ ಸಿನಿಮಾ ಮಾಡುತ್ತಿರುವುದು ಖಾತ್ರಿ ಎಂದೇ ಹೇಳಲಾಗಿತ್ತು. ಆದರೆ ಈಗ ಮತ್ತೆ ನರ್ತನ್ ಸಿನಿಮಾದ ನಾಯಕ ಬದಲಾಗಿದ್ದಾರೆ. ‘ಆರ್​ಆರ್​ಆರ್’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ರಾಮ್ ಚರಣ್ ರ ಸಿನಿಮಾ ಆದ್ಯತೆಗಳು ಬದಲಾಗಿದ್ದು, ಅವರೀಗ ನರ್ತನ್ ಜೊತೆ ಸಿನಿಮಾ ಮಾಡುತ್ತಿಲ್ಲ ಎನ್ನಲಾಗುತ್ತಿದೆ.

ಇದನ್ನೂ ಓದಿ:‘ಭೈರತಿ ರಣಗಲ್’ ಚಿತ್ರಕ್ಕೆ ಶೂಟಿಂಗ್ ಶುರು; ನರ್ತನ್-ಶಿವಣ್ಣ ಕಾಂಬಿನೇಷನ್ ಬಗ್ಗೆ ಇದೆ ನಿರೀಕ್ಷೆ

ನರ್ತನ್ ಅವರು ಯಶ್​ಗಾಗಿ ಮಾಡಿದ್ದ ಕತೆಯನ್ನೇ ರಾಮ್​ ಚರಣ್​ಗೆ ಹೇಳಿದ್ದರು. ಯುವಿ ಕ್ರಿಯೇಶನ್ಸ್​ನವರು ಸಿನಿಮಾಕ್ಕೆ ಬಂಡವಾಳ ಹೂಡಲಿದ್ದಾರೆ ಎನ್ನಲಾಗಿತ್ತು. ಆದರೆ ರಾಮ್ ಚರಣ್ ಬೇರೆ ಪ್ರಾಜೆಕ್ಟ್​ಗಳಲ್ಲಿ ಬ್ಯುಸಿಯಾಗಿರುವ ಕಾರಣ ನರ್ತನ್ ಜೊತೆಗಿನ ಸಿನಿಮಾದಿಂದ ಹೊರಗೆ ಬಂದಿದ್ದಾರೆ. ಇದೀಗ ಅದೇ ಕತೆಯನ್ನು ವಿಜಯ್ ದೇವರಕೊಂಡ ಅವರಿಗೆ ಸಿನಿಮಾ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ವಿಜಯ್ ದೇವರಕೊಂಡಗೆ ನರ್ತನ್ ಕತೆ ಹೇಳಿದ್ದು ಎಲ್ಲವೂ ಓಕೆ ಆಗಿದೆ. ಸಿನಿಮಾವನ್ನು ಯುವಿ ಕ್ರಿಯೇಶನ್ಸ್​ನವರೇ ನಿರ್ಮಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ನರ್ತನ್ ಪ್ರಸ್ತುತ ಶಿವರಾಜ್ ಕುಮಾರ್ ನಟಿಸುತ್ತಿರುವ ‘ಭೈರತಿ ರಣಗಲ್’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್​ನಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಸಿನಿಮಾವನ್ನು ಶಿವಣ್ಣ ಅವರ ಹೋಮ್ ಬ್ಯಾನರ್​ನಲ್ಲಿ ನಿರ್ಮಿಸಲಾಗಿದೆ. ಸಿನಿಮಾದಲ್ಲಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸಿದ್ದಾರೆ. ‘ಮಫ್ತಿ’ ಸಿನಿಮಾದ ಭೈರತಿ ರಣಗಲ್ ಪಾತ್ರವನ್ನೇ ಮುಖ್ಯವಾಗಿರಿಸಿಕೊಂಡು ಈ ಸಿನಿಮಾ ಮಾಡಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್