AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್, ರಾಮ್ ಚರಣ್ ಬಳಿಕ ವಿಜಯ್ ದೇವರಕೊಂಡ ಪಾಲಾದ ನರ್ತನ್ ಕತೆ

Narthan: ‘ಮಫ್ತಿ’ ನಿರ್ದೇಶಕ ನರ್ತನ್ ಈ ಹಿಂದೆ ಯಶ್​ಗೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿತ್ತು. ಅದಾದ ಬಳಿಕ ರಾಮ್ ಚರಣ್ ಗೆ ಸಿನಿಮಾ ಮಾಡ್ತಾರೆ ಎಂಬ ಸುದ್ದಿ ಹರಿದಾಡಿತು. ಇದೀಗ ಮತ್ತೊಬ್ಬ ಹೀರೋಗೆ ಕತೆ ಹೇಳಿದ್ದಾರಂತೆ.

ಯಶ್, ರಾಮ್ ಚರಣ್ ಬಳಿಕ ವಿಜಯ್ ದೇವರಕೊಂಡ ಪಾಲಾದ ನರ್ತನ್ ಕತೆ
ಮಂಜುನಾಥ ಸಿ.
|

Updated on: Feb 27, 2024 | 7:10 PM

Share

‘ಮಫ್ತಿ’ (Mufti) ಸಿನಿಮಾ ನಿರ್ದೇಶಿಸಿದ್ದ ನರ್ತನ್ (Narthan), ಯಶ್​ಗಾಗಿ ಸಿನಿಮಾ ಮಾಡಲಿದ್ದಾರೆ ಎಂದು ಜೋರು ಸುದ್ದಿ ಹರಿದಾಡಿತ್ತು. ತಾವು ಯಶ್​ಗಾಗಿ ಕತೆ ಮಾಡುತ್ತಿರುವುದಾಗಿ ಸ್ವತಃ ನರ್ತನ್ ಹೇಳಿದ್ದರು. ಯಶ್​ಗಾಗಿ ಕತೆಯನ್ನು ಸಹ ರೆಡಿ ಮಾಡಿದ್ದರು ಆದರೆ ಅದೇಕೋ ಸಿನಿಮಾ ಸೆಟ್ಟೇರಲಿಲ್ಲ. ಕತೆಯ ಕೆಲವು ಅಂಶಗಳು ಯಶ್​ಗೆ ಹಿಡಿಸಲಿಲ್ಲವಾದ್ದರಿಂದ ಸಿನಿಮಾ ಕೈಬಿಟ್ಟಿದ್ದಾಗಿ ಹೇಳಲಾಗಿತ್ತು. ಬಳಿಕ ಅದೇ ಕತೆಯನ್ನು ತೆಲುಗಿನ ರಾಮ್​ ಚರಣ್​ಗಾಗಿ ಸ್ವತಃ ನರ್ತನ್ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿಗಳು ಕೇಳಿ ಬಂದಿತ್ತು. ಆದರೆ ಈಗ ಮತ್ತೊಮ್ಮೆ ನಾಯಕ ಬದಲಾಗಿದ್ದಾರೆ.

ನರ್ತನ್, ರಾಮ್ ಚರಣ್​ಗಾಗಿ ಸಿನಿಮಾ ಮಾಡುವುದು ಬಹುತೇಕ ಖಾತ್ರಿಯಾಗಿತ್ತು. ನರ್ತನ್, ರಾಮ್ ಚರಣ್​ಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದಾಗಲಂತೂ ಇಬ್ಬರೂ ಸಿನಿಮಾ ಮಾಡುತ್ತಿರುವುದು ಖಾತ್ರಿ ಎಂದೇ ಹೇಳಲಾಗಿತ್ತು. ಆದರೆ ಈಗ ಮತ್ತೆ ನರ್ತನ್ ಸಿನಿಮಾದ ನಾಯಕ ಬದಲಾಗಿದ್ದಾರೆ. ‘ಆರ್​ಆರ್​ಆರ್’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ರಾಮ್ ಚರಣ್ ರ ಸಿನಿಮಾ ಆದ್ಯತೆಗಳು ಬದಲಾಗಿದ್ದು, ಅವರೀಗ ನರ್ತನ್ ಜೊತೆ ಸಿನಿಮಾ ಮಾಡುತ್ತಿಲ್ಲ ಎನ್ನಲಾಗುತ್ತಿದೆ.

ಇದನ್ನೂ ಓದಿ:‘ಭೈರತಿ ರಣಗಲ್’ ಚಿತ್ರಕ್ಕೆ ಶೂಟಿಂಗ್ ಶುರು; ನರ್ತನ್-ಶಿವಣ್ಣ ಕಾಂಬಿನೇಷನ್ ಬಗ್ಗೆ ಇದೆ ನಿರೀಕ್ಷೆ

ನರ್ತನ್ ಅವರು ಯಶ್​ಗಾಗಿ ಮಾಡಿದ್ದ ಕತೆಯನ್ನೇ ರಾಮ್​ ಚರಣ್​ಗೆ ಹೇಳಿದ್ದರು. ಯುವಿ ಕ್ರಿಯೇಶನ್ಸ್​ನವರು ಸಿನಿಮಾಕ್ಕೆ ಬಂಡವಾಳ ಹೂಡಲಿದ್ದಾರೆ ಎನ್ನಲಾಗಿತ್ತು. ಆದರೆ ರಾಮ್ ಚರಣ್ ಬೇರೆ ಪ್ರಾಜೆಕ್ಟ್​ಗಳಲ್ಲಿ ಬ್ಯುಸಿಯಾಗಿರುವ ಕಾರಣ ನರ್ತನ್ ಜೊತೆಗಿನ ಸಿನಿಮಾದಿಂದ ಹೊರಗೆ ಬಂದಿದ್ದಾರೆ. ಇದೀಗ ಅದೇ ಕತೆಯನ್ನು ವಿಜಯ್ ದೇವರಕೊಂಡ ಅವರಿಗೆ ಸಿನಿಮಾ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ವಿಜಯ್ ದೇವರಕೊಂಡಗೆ ನರ್ತನ್ ಕತೆ ಹೇಳಿದ್ದು ಎಲ್ಲವೂ ಓಕೆ ಆಗಿದೆ. ಸಿನಿಮಾವನ್ನು ಯುವಿ ಕ್ರಿಯೇಶನ್ಸ್​ನವರೇ ನಿರ್ಮಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ನರ್ತನ್ ಪ್ರಸ್ತುತ ಶಿವರಾಜ್ ಕುಮಾರ್ ನಟಿಸುತ್ತಿರುವ ‘ಭೈರತಿ ರಣಗಲ್’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್​ನಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಸಿನಿಮಾವನ್ನು ಶಿವಣ್ಣ ಅವರ ಹೋಮ್ ಬ್ಯಾನರ್​ನಲ್ಲಿ ನಿರ್ಮಿಸಲಾಗಿದೆ. ಸಿನಿಮಾದಲ್ಲಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸಿದ್ದಾರೆ. ‘ಮಫ್ತಿ’ ಸಿನಿಮಾದ ಭೈರತಿ ರಣಗಲ್ ಪಾತ್ರವನ್ನೇ ಮುಖ್ಯವಾಗಿರಿಸಿಕೊಂಡು ಈ ಸಿನಿಮಾ ಮಾಡಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!