ಯಶ್, ರಾಮ್ ಚರಣ್ ಬಳಿಕ ವಿಜಯ್ ದೇವರಕೊಂಡ ಪಾಲಾದ ನರ್ತನ್ ಕತೆ

Narthan: ‘ಮಫ್ತಿ’ ನಿರ್ದೇಶಕ ನರ್ತನ್ ಈ ಹಿಂದೆ ಯಶ್​ಗೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿತ್ತು. ಅದಾದ ಬಳಿಕ ರಾಮ್ ಚರಣ್ ಗೆ ಸಿನಿಮಾ ಮಾಡ್ತಾರೆ ಎಂಬ ಸುದ್ದಿ ಹರಿದಾಡಿತು. ಇದೀಗ ಮತ್ತೊಬ್ಬ ಹೀರೋಗೆ ಕತೆ ಹೇಳಿದ್ದಾರಂತೆ.

ಯಶ್, ರಾಮ್ ಚರಣ್ ಬಳಿಕ ವಿಜಯ್ ದೇವರಕೊಂಡ ಪಾಲಾದ ನರ್ತನ್ ಕತೆ
Follow us
|

Updated on: Feb 27, 2024 | 7:10 PM

‘ಮಫ್ತಿ’ (Mufti) ಸಿನಿಮಾ ನಿರ್ದೇಶಿಸಿದ್ದ ನರ್ತನ್ (Narthan), ಯಶ್​ಗಾಗಿ ಸಿನಿಮಾ ಮಾಡಲಿದ್ದಾರೆ ಎಂದು ಜೋರು ಸುದ್ದಿ ಹರಿದಾಡಿತ್ತು. ತಾವು ಯಶ್​ಗಾಗಿ ಕತೆ ಮಾಡುತ್ತಿರುವುದಾಗಿ ಸ್ವತಃ ನರ್ತನ್ ಹೇಳಿದ್ದರು. ಯಶ್​ಗಾಗಿ ಕತೆಯನ್ನು ಸಹ ರೆಡಿ ಮಾಡಿದ್ದರು ಆದರೆ ಅದೇಕೋ ಸಿನಿಮಾ ಸೆಟ್ಟೇರಲಿಲ್ಲ. ಕತೆಯ ಕೆಲವು ಅಂಶಗಳು ಯಶ್​ಗೆ ಹಿಡಿಸಲಿಲ್ಲವಾದ್ದರಿಂದ ಸಿನಿಮಾ ಕೈಬಿಟ್ಟಿದ್ದಾಗಿ ಹೇಳಲಾಗಿತ್ತು. ಬಳಿಕ ಅದೇ ಕತೆಯನ್ನು ತೆಲುಗಿನ ರಾಮ್​ ಚರಣ್​ಗಾಗಿ ಸ್ವತಃ ನರ್ತನ್ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿಗಳು ಕೇಳಿ ಬಂದಿತ್ತು. ಆದರೆ ಈಗ ಮತ್ತೊಮ್ಮೆ ನಾಯಕ ಬದಲಾಗಿದ್ದಾರೆ.

ನರ್ತನ್, ರಾಮ್ ಚರಣ್​ಗಾಗಿ ಸಿನಿಮಾ ಮಾಡುವುದು ಬಹುತೇಕ ಖಾತ್ರಿಯಾಗಿತ್ತು. ನರ್ತನ್, ರಾಮ್ ಚರಣ್​ಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದಾಗಲಂತೂ ಇಬ್ಬರೂ ಸಿನಿಮಾ ಮಾಡುತ್ತಿರುವುದು ಖಾತ್ರಿ ಎಂದೇ ಹೇಳಲಾಗಿತ್ತು. ಆದರೆ ಈಗ ಮತ್ತೆ ನರ್ತನ್ ಸಿನಿಮಾದ ನಾಯಕ ಬದಲಾಗಿದ್ದಾರೆ. ‘ಆರ್​ಆರ್​ಆರ್’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ರಾಮ್ ಚರಣ್ ರ ಸಿನಿಮಾ ಆದ್ಯತೆಗಳು ಬದಲಾಗಿದ್ದು, ಅವರೀಗ ನರ್ತನ್ ಜೊತೆ ಸಿನಿಮಾ ಮಾಡುತ್ತಿಲ್ಲ ಎನ್ನಲಾಗುತ್ತಿದೆ.

ಇದನ್ನೂ ಓದಿ:‘ಭೈರತಿ ರಣಗಲ್’ ಚಿತ್ರಕ್ಕೆ ಶೂಟಿಂಗ್ ಶುರು; ನರ್ತನ್-ಶಿವಣ್ಣ ಕಾಂಬಿನೇಷನ್ ಬಗ್ಗೆ ಇದೆ ನಿರೀಕ್ಷೆ

ನರ್ತನ್ ಅವರು ಯಶ್​ಗಾಗಿ ಮಾಡಿದ್ದ ಕತೆಯನ್ನೇ ರಾಮ್​ ಚರಣ್​ಗೆ ಹೇಳಿದ್ದರು. ಯುವಿ ಕ್ರಿಯೇಶನ್ಸ್​ನವರು ಸಿನಿಮಾಕ್ಕೆ ಬಂಡವಾಳ ಹೂಡಲಿದ್ದಾರೆ ಎನ್ನಲಾಗಿತ್ತು. ಆದರೆ ರಾಮ್ ಚರಣ್ ಬೇರೆ ಪ್ರಾಜೆಕ್ಟ್​ಗಳಲ್ಲಿ ಬ್ಯುಸಿಯಾಗಿರುವ ಕಾರಣ ನರ್ತನ್ ಜೊತೆಗಿನ ಸಿನಿಮಾದಿಂದ ಹೊರಗೆ ಬಂದಿದ್ದಾರೆ. ಇದೀಗ ಅದೇ ಕತೆಯನ್ನು ವಿಜಯ್ ದೇವರಕೊಂಡ ಅವರಿಗೆ ಸಿನಿಮಾ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ವಿಜಯ್ ದೇವರಕೊಂಡಗೆ ನರ್ತನ್ ಕತೆ ಹೇಳಿದ್ದು ಎಲ್ಲವೂ ಓಕೆ ಆಗಿದೆ. ಸಿನಿಮಾವನ್ನು ಯುವಿ ಕ್ರಿಯೇಶನ್ಸ್​ನವರೇ ನಿರ್ಮಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ನರ್ತನ್ ಪ್ರಸ್ತುತ ಶಿವರಾಜ್ ಕುಮಾರ್ ನಟಿಸುತ್ತಿರುವ ‘ಭೈರತಿ ರಣಗಲ್’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್​ನಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಸಿನಿಮಾವನ್ನು ಶಿವಣ್ಣ ಅವರ ಹೋಮ್ ಬ್ಯಾನರ್​ನಲ್ಲಿ ನಿರ್ಮಿಸಲಾಗಿದೆ. ಸಿನಿಮಾದಲ್ಲಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸಿದ್ದಾರೆ. ‘ಮಫ್ತಿ’ ಸಿನಿಮಾದ ಭೈರತಿ ರಣಗಲ್ ಪಾತ್ರವನ್ನೇ ಮುಖ್ಯವಾಗಿರಿಸಿಕೊಂಡು ಈ ಸಿನಿಮಾ ಮಾಡಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ