AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂವರು ಸ್ಟಾರ್ ನಟರನ್ನು ಒಂದುಗೂಡಿಸಲಿರುವ ‘ಮಫ್ತಿ’ ನಿರ್ದೇಶಕ ನರ್ತನ್

Narthan: ‘ಮಫ್ತಿ’ ಸಿನಿಮಾ ಮೂಲಕ ಭರವಸೆ ಮೂಡಿಸಿ ಈಗ ‘ಭೈರತಿ ರಣಗಲ್’ ಸಿನಿಮಾ ಮೂಲಕ ನಿರೀಕ್ಷೆಯನ್ನು ಉಳಿಸಿಕೊಂಡಿರುವ ನರ್ತನ್ ಇದೀಗ ಪರಭಾಷೆಗೆ ಕಾಲಿಡುತ್ತಿದ್ದಾರೆ. ಇಬ್ಬರು ದೊಡ್ಡ ಸ್ಟಾರ್​ ನಟರಿಗಾಗಿ ಸಿನಿಮಾ ಮಾಡಲಿದ್ದಾರೆ.

ಮೂವರು ಸ್ಟಾರ್ ನಟರನ್ನು ಒಂದುಗೂಡಿಸಲಿರುವ ‘ಮಫ್ತಿ’ ನಿರ್ದೇಶಕ ನರ್ತನ್
ಮಂಜುನಾಥ ಸಿ.
|

Updated on:Nov 27, 2024 | 11:24 AM

Share

‘ಮಫ್ತಿ’ ಸಿನಿಮಾ ಮೂಲಕ ಭರವಸೆ ಮೂಡಿಸಿ, ಈಗ ‘ಭೈರತಿ ರಣಗಲ್’ ಸಿನಿಮಾ ಮೂಲಕ ನಿರೀಕ್ಷೆ ಉಳಿಸಿಕೊಂಡಿರುವ ನಿರ್ದೇಶಕ ನರ್ತನ್ ಇದೀಗ ಪರಭಾಷೆಗೆ ಕಾಲಿಡುತ್ತಿದ್ದಾರೆ. ಈ ಹಿಂದೆ ನರ್ತನ್, ಯಶ್​ಗಾಗಿ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಅದು ಕೈಗೂಡಿರಲಿಲ್ಲ. ಆದರೆ ಇದೀಗ ನರ್ತನ್ ನೇರವಾಗಿ ಪರಭಾಷೆಗೆ ಹಾರಿದ್ದು, ಎರಡು ಚಿತ್ರರಂಗದ ಇಬ್ಬರು ದೊಡ್ಡ ಸ್ಟಾರ್​ಗಳನ್ನು ಹಾಕಿಕೊಂಡು ಭಾರಿ ಬಜೆಟ್​ನ ಪ್ಯಾನ್ ಇಂಡಿಯಾ ಸಿನಿಮಾ ಮಾಡಲು ಸಜ್ಜಾಗಿದ್ದಾರೆ.

ಯಶ್​ ಜೊತೆಗಿನ ಸಿನಿಮಾ ಕೈಗೂಡದಿದ್ದಾಗ ನರ್ತನ್, ರಾಮ್ ಚರಣ್​ಗೆ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ನರ್ತನ್ ಹಾಗೂ ರಾಮ್ ಚರಣ್ ಸಿನಿಮಾ ಇನ್ನೇನು ಪ್ರಾರಂಭವಾಗಲಿದೆ ಎನ್ನಲಾಗಿತ್ತು. ಆದರೆ ಕಾರಣಾಂತರಗಳಿಂದ ಅದು ಮುಂದೂಡಲ್ಪಟ್ಟಿತ್ತು. ಇದೀಗ ‘ಭೈರತಿ ರಣಗಲ್’ ಸಿನಿಮಾ ಮುಗಿಸಿ ಸಜ್ಜಾಗಿರುವ ನರ್ತನ್, ರಾಮ್ ಚರಣ್​ಗಾಗಿ ಸಿನಿಮಾ ಮಾಡಲಿದ್ದಾರೆ. ಈ ಸಿನಿಮಾದಲ್ಲಿ ತಮಿಳಿನ ಸ್ಟಾರ್ ನಟ ಸೂರ್ಯ ಸಹ ಇರಲಿದ್ದಾರೆ ಎನ್ನಲಾಗುತ್ತಿದೆ.

ಈ ಬಗ್ಗೆ ಮಾತನಾಡಿರುವ ನರ್ತನ್, ‘ನನ್ನ ಮುಂದಿನ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡಲಿದೆ. ಸಿನಿಮಾದ ಮುಖ್ಯ ಪಾತ್ರಗಳ ಆಯ್ಕೆ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಸೂರ್ಯ ಮತ್ತು ರಾಮ್ ಚರಣ್ ಅವರು ನಮ್ಮ ಸಿನಿಮಾಕ್ಕೆ ಸೂಕ್ತ ಎಂದುಕೊಂಡಿದ್ದೇವೆ. ಈ ಸಿನಿಮಾದಲ್ಲಿ ಕನ್ನಡದ ಸ್ಟಾರ್ ನಟರೊಬ್ಬರು ಸಹ ನಟಿಸುವ ಸಾಧ್ಯತೆ ಇದೆ. ಅದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ಸದ್ಯಕ್ಕೆ ನಿರ್ಮಾಣ ಸಂಸ್ಥೆ ಮಾತ್ರವೇ ಫೈನಲ್ ಆಗಿದೆ’ ಎಂದಿದ್ದಾರೆ.

ಇದನ್ನೂ ಓದಿ:ತಮಿಳು ಸ್ಟಾರ್ ನಟನಿಗೆ ಸಿನಿಮಾ ಮಾಡಲಿದ್ದಾರೆ ನರ್ತನ್, ಕೆವಿಎನ್ ನಿರ್ಮಾಣ

ರಾಮ್ ಚರಣ್ ಪ್ರಸ್ತುತ ತೆಲುಗಿನ ಬುಚ್ಚಿಬಾಬು ಸನಾ ನಿರ್ದೇಶನದ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಆ ಸಿನಿಮಾದ ಚಿತ್ರೀಕರಣ ಇತ್ತೀಚೆಗಷ್ಟೆ ಪ್ರಾರಂಭವಾಗಿದೆ. ಅದಾದ ಬಳಿಕ ನರ್ತನ್ ಜೊತೆಗಿನ ಸಿನಿಮಾದಲ್ಲಿ ತೊಡಗಿಕೊಳ್ಳಲಿದ್ದಾರೆ ರಾಮ್ ಚರಣ್. ಇನ್ನು ಸೂರ್ಯ ಸಹ ಇತ್ತೀಚೆಗಷ್ಟೆ ‘ಕಂಗುವ’ ಸಿನಿಮಾ ಮುಗಿಸಿದ್ದು, ಇದೀಗ ಹೊಸ ಪ್ರಾಜೆಕ್ಟ್ ಪ್ರಾರಂಭ ಮಾಡಲಿದ್ದಾರೆ. ಆ ಸಿನಿಮಾದ ಬಳಿಕ ನರ್ತನ್​ರ ಸಿನಿಮಾದಲ್ಲಿ ನಟಿಸಲಿದ್ದಾರೆ.

ಕೆಲ ಮೂಲಗಳ ಪ್ರಕಾರ, ನರ್ತನ್​, ಯಶ್​ಗಾಗಿ ಮಾಡಿದ್ದ ಕತೆಯನ್ನೇ ಈಗ ರಾಮ್ ಚರಣ್​ ಹಾಗೂ ಸೂರ್ಯ ಅವರಿಗಾಗಿ ಮಾಡುತ್ತಿದ್ದಾರೆ. ಮೂಲ ಕತೆಯನ್ನು ಕೆಲವು ಬದಲಾವಣೆಗಳನ್ನು ಮಾಡಿಕೊಂಡಿದ್ದಾರಂತೆ. ‘ಭೈರತಿ ರಣಗಲ್’ ಸಿನಿಮಾದ ಯಶಸ್ಸನ್ನು ಎಂಜಾಯ್ ಮಾಡುತ್ತಿರುವ ನರ್ತನ್ ಸಣ್ಣ ಗ್ಯಾಪ್ ಬಳಿಕ ರಾಮ್ ಚರಣ್-ಸೂರ್ಯ ಸಿನಿಮಾದ ಪ್ರೀ ಪ್ರೊಡಕ್ಷನ್ ಆರಂಭ ಮಾಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:23 am, Wed, 27 November 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ