AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ್ಟಿಪ್ಲೆಕ್ಸ್​ನಲ್ಲಿ ಸಿನಿಮಾ ಟಿಕೆಟ್​ ಬೆಲೆ ಕೇವಲ 99 ರೂಪಾಯಿ; ಯಾವಾಗ ಸಿಗಲಿದೆ ಈ ಆಫರ್​?

ದೊಡ್ಡ ಪರದೆಯಲ್ಲಿ ಸಿನಿಮಾ ನೋಡುವ ಅನುಭವವೇ ಬೇರೆ. ಆದರೆ ದುಬಾರಿ ಬೆಲೆ ಎಂಬ ಕಾರಣಕ್ಕೆ ಅನೇಕರು ಮಲ್ಟಿಪ್ಲೆಕ್ಸ್​ಗೆ ಬರಲು ಹಿಂದೇಟು ಹಾಕುವುದುಂಟು. ಈಗ ‘ನ್ಯಾಷನಲ್​ ಸಿನಿಮಾ ಡೇ’ ಪ್ರಯುಕ್ತ 99 ರೂಪಾಯಿಗೆ ಎಲ್ಲ ಸಿನಿಮಾಗಳ ಟಿಕೆಟ್​ ಸಿಗುವುದರಿಂದ ಅಂದು ಬಹುತೇಕ ಕಡೆಗಳಲ್ಲಿ ಹೌಸ್​ ಫುಲ್​ ಆಗುವ ಸಾಧ್ಯತೆ ಇದೆ.

ಮಲ್ಟಿಪ್ಲೆಕ್ಸ್​ನಲ್ಲಿ ಸಿನಿಮಾ ಟಿಕೆಟ್​ ಬೆಲೆ ಕೇವಲ 99 ರೂಪಾಯಿ; ಯಾವಾಗ ಸಿಗಲಿದೆ ಈ ಆಫರ್​?
ನ್ಯಾಷನಲ್​ ಸಿನಿಮಾ ಡೇ
ಮದನ್​ ಕುಮಾರ್​
| Edited By: |

Updated on:Oct 12, 2023 | 11:19 AM

Share

2023ನೇ ವರ್ಷದಲ್ಲಿ ಭಾರತೀಯ ಚಿತ್ರರಂಗ (Indian Film Industry) ಅನೇಕ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದೆ. ಬಾಕ್ಸ್​ ಆಫೀಸ್​ನಲ್ಲಿ ಹಲವು ಚಿತ್ರಗಳು ಅಬ್ಬರಿಸಿವೆ. ಶಾರುಖ್​ ಖಾನ್​, ಸನ್ನಿ ಡಿಯೋಲ್​, ಅಕ್ಷಯ್​ ಕುಮಾರ್​, ರಣವೀರ್​ ಸಿಂಗ್​, ಸಾಯಿ ಧರಂ ತೇಜ್​, ಟೊವಿನೋ ಥಾಮಸ್​ ಮುಂತಾದ ನಟರ ಸಿನಿಮಾಗಳು ನೂರಾರು ಕೋಟಿ ರೂಪಾಯಿ ಬಿಸ್ನೆಸ್​ ಮಾಡಿವೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳು ತೆರೆಕಂಡಾಗ ಎಲ್ಲವನ್ನೂ ಚಿತ್ರಮಂದಿರಕ್ಕೆ ಹೋಗಿ ನೋಡುವುದು ಕಷ್ಟ. ಯಾಕೆಂದರೆ ಟಿಕೆಟ್​ ದರ (Movie Tickets Price) ದುಬಾರಿ ಆಗಿರುತ್ತದೆ. ಅದರಲ್ಲೂ ಮಲ್ಟಿಪ್ಲೆಕ್ಸ್​ನಲ್ಲಿ ಸಿನಿಮಾ ನೋಡುವುದರಿಂದ ಜೇಬಿಗೆ ದೊಡ್ಡ ಕತ್ತರಿಯೇ ಬೀಳುತ್ತದೆ ಎಂದು ಕೊರಗುವವರಿಗಾಗಿ ಇಲ್ಲೊಂದು ಬಂಪರ್​ ಆಫರ್​ ನೀಡಲಾಗಿದೆ. ‘ನ್ಯಾಷನಲ್​ ಸಿನಿಮಾ ಡೇ’ (National Cinema Day) ಆಚರಣೆಯ ಪ್ರಯುಕ್ತ ಕೇವಲ 99 ರೂಪಾಯಿಗೆ ಸಿನಿಮಾ ಟಿಕೆಟ್​ ಮಾರಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಇಲ್ಲಿದೆ ವಿವರ..

ಕೊವಿಡ್​ ಬಂದ ಬಳಿಕ ಚಿತ್ರರಂಗ ಸೊರಗಿತ್ತು. ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರಲು ಕೆಲವು ಪ್ಲ್ಯಾನ್​ ಮಾಡಲಾಗಿತ್ತು. ಅದರಲ್ಲಿ ‘ನ್ಯಾಷನಲ್​ ಸಿನಿಮಾ ಡೇ’ ಆಚರಣೆ ಕೂಡ ಪ್ರಮುಖವಾದದ್ದು. ಒಂದು ನಿರ್ದಿಷ್ಟ ದಿನದಂದು ದೇಶಾದ್ಯಂತ ಬಹುತೇಕ ಮಲ್ಟಿಪ್ಲೆಕ್ಸ್​ ಮತ್ತು ಆಯ್ದ ಚಿತ್ರಮಂದಿರಗಳಲ್ಲಿ ಎಲ್ಲ ಸಿನಿಮಾಗಳ ಟಿಕೆಟ್​ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವುದು ಇದರ ಉದ್ದೇಶ. ಈ ಪ್ರಯತ್ನಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು. ಹಾಗಾಗಿ ಈ ವರ್ಷ ಕೂಡ ‘ನ್ಯಾಷನಲ್​ ಸಿನಿಮಾ ಡೇ’ ಆಚರಿಸಲು ಮಲ್ಟಿಪ್ಲೆಕ್ಸ್​ ಮತ್ತು ಚಿತ್ರಮಂದಿರಗಳ ಮಾಲೀಕರು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ 2 ಸಾವಿರ ರೂಪಾಯಿಗೆ ಸೇಲ್​ ಆಗ್ತಿದೆ ‘ಆಪನ್​ಹೈಮರ್​’ ಚಿತ್ರದ ಟಿಕೆಟ್​; ಅಂಥ ವಿಶೇಷ ಇದರಲ್ಲಿ ಏನಿದೆ?

ಈ ವರ್ಷ ಅಕ್ಟೋಬರ್​ 13ರಂದು ‘ನ್ಯಾಷನಲ್​ ಸಿನಿಮಾ ಡೇ’ ಆಚರಿಸಲಾಗುತ್ತದೆ. ಅದರಲ್ಲಿ ಪಿವಿಆರ್​, ಐನಾಕ್ಸ್​, ಸಿನಿಪೊಲಿಸ್​, ಮಿರಾಜ್​, ಸಿಟಿಪ್ರೈಡ್​, ಏಷ್ಯನ್​, ಮೂವೀ ಟೈಮ್​ ಮುಂತಾದ ಮಲ್ಟಿಪ್ಲೆಕ್ಸ್​ಗಳು ಇದರಲ್ಲಿ ಭಾಗವಹಿಸುತ್ತಿವೆ. ಅ.13ರಂದು ದೇಶಾದ್ಯಂತ ಎಲ್ಲ ಸಿನಿಮಾಗಳ ಟಿಕೆಟ್​ಗಳು ಕೇವಲ 99 ರೂಪಾಯಿಗೆ ಸಿಗಲಿವೆ. ಅಂದು ತಿಂಡಿ ಮತ್ತು ಪಾನೀಯಗಳ ಬೆಲೆಯಲ್ಲೂ ಇಳಿಕೆ ಮಾಡಲಾಗುತ್ತದೆ. ಇದರಿಂದ ಸಿನಿಪ್ರಿಯರಿಗೆ ಅನುಕೂಲ ಆಗಲಿದೆ. ಅಂದು ಅಪಾರ ಸಂಖ್ಯೆಯ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುವ ನಿರೀಕ್ಷೆ ಇದೆ.

ಕೊರೊನಾ ಹಾವಳಿಯಿಂದ ಉಂಟಾದ ಲಾಕ್​ಡೌನ್​ ಬಳಿಕ ಜನರು ಒಟಿಟಿಗೆ ಹೆಚ್ಚು ಒಗ್ಗಿಕೊಂಡರು. ಮನೆಯಲ್ಲೇ ಕುಳಿತು ಹೊಸ ಸಿನಿಮಾಗಳನ್ನು ನೋಡಲು ಬಯಸುವವರ ಸಂಖ್ಯೆ ಹೆಚ್ಚಿತು. ಅದರ ನಡುವೆಯೂ ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್​ಗಳಲ್ಲಿ ಹೊಸ ಸಿನಿಮಾ ರಿಲೀಸ್​ ಆಗುವುದು ನಿಂತಿಲ್ಲ. ಎಂದಿನಂತೆ ಸ್ಟಾರ್ ನಟರ ಸಿನಿಮಾಗಳು ಅಬ್ಬರಿಸುತ್ತಿವೆ. ಆದರೆ ದುಬಾರಿ ಬೆಲೆ ಎಂಬ ಕಾರಣಕ್ಕೆ ಅನೇಕರು ಮಲ್ಟಿಪ್ಲೆಕ್ಸ್​ಗೆ ಬರಲು ಹಿಂದೇಟು ಹಾಕುವುದುಂಟು. ಈಗ ‘ನ್ಯಾಷನಲ್​ ಸಿನಿಮಾ ಡೇ’ ಪ್ರಯುಕ್ತ 99 ರೂಪಾಯಿಗೆ ಟಿಕೆಟ್​ ಸಿಗುವುದರಿಂದ ಅಂದು ಬಹುತೇಕ ಕಡೆಗಳಲ್ಲಿ ಹೌಸ್​ ಫುಲ್​ ಆಗುವ ಸಾಧ್ಯತೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:55 pm, Thu, 21 September 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?