AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Natu Natu Song: ಯುದ್ಧ ಶುರು ಆಗೋದಕ್ಕೂ ಮುನ್ನ ಉಕ್ರೇನ್​ನಲ್ಲಿ ‘ನಾಟು ನಾಟು..’ ಸಾಂಗ್​ ಶೂಟಿಂಗ್​ ಮಾಡಿದ್ದ ರಾಜಮೌಳಿ

Natu Natu | Golden Globe Awards: ಉಕ್ರೇನ್​ನಲ್ಲಿ ಶೂಟಿಂಗ್​ ಮಾಡಿದ ಘಟನೆಯನ್ನು ರಾಮ್​ ಚರಣ್​ ಪತ್ನಿ ಉಪಾಸನಾ ಅವರು ನೆನಪಿಸಿಕೊಂಡಿದ್ದಾರೆ. ಈಗ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆದ ಖುಷಿಯಲ್ಲಿ ಇಡೀ ತಂಡ ತೇಲುತ್ತಿದೆ.

Natu Natu Song: ಯುದ್ಧ ಶುರು ಆಗೋದಕ್ಕೂ ಮುನ್ನ ಉಕ್ರೇನ್​ನಲ್ಲಿ ‘ನಾಟು ನಾಟು..’ ಸಾಂಗ್​ ಶೂಟಿಂಗ್​ ಮಾಡಿದ್ದ ರಾಜಮೌಳಿ
‘ನಾಟು ನಾಟು’ ಹಾಡಿನಲ್ಲಿ ಜೂನಿಯರ್​ ಎನ್​ಟಿಆರ್​ ಮತ್ತು ರಾಮ್​ ಚರಣ್​
TV9 Web
| Edited By: |

Updated on: Jan 11, 2023 | 4:23 PM

Share

ಭಾರತೀಯ ಚಿತ್ರರಂಗಕ್ಕೆ ‘ಆರ್​ಆರ್​ಆರ್​’ ಸಿನಿಮಾದಿಂದ ಹೆಮ್ಮೆ ಮೂಡುವಂತಾಗಿದೆ. ಈ ಸಿನಿಮಾದ ‘ನಾಟು ನಾಟು..’ (Natu Natu Song) ಹಾಡಿಗೆ ಪ್ರತಿಷ್ಠಿತ ಗೋಲ್ಡನ್​ ಗ್ಲೋಬ್​ ಪ್ರಶಸ್ತಿ (Golden Globe Awards) ಸಿಕ್ಕಿದೆ. ಲಾಸ್​ ಏಂಜಲಿಸ್​ನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಅವರು ಪ್ರಶಸ್ತಿ ಸ್ವೀಕರಿಸಿದ್ದಾರೆ. ಅವರಿಗೆ ಇಡೀ ತಂಡ ಸಾಥ್​ ನೀಡಿದೆ. ನಿರ್ದೇಶಕ ಎಸ್​ಎಸ್​ ರಾಜಮೌಳಿ, ನಟರಾದ ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​, ರಾಮ್​ ಚರಣ್​ ಪತ್ನಿ ಉಪಾಸನಾ ಸೇರಿದಂತೆ ಅನೇಕರು ಈ ಸಂಭ್ರಮಕ್ಕೆ ಸಾಕ್ಷಿ ಆಗಿದ್ದಾರೆ. ಈಗ ಎಲ್ಲರೂ ‘ನಾಟು ನಾಟು..’ ಹಾಡಿನ ಬಗ್ಗೆಯೇ ಮಾತನಾಡುತ್ತಿದ್ದಾರೆ. ಅಚ್ಚರಿ ಎಂದರೆ ಈ ಹಾಡಿನ ಶೂಟಿಂಗ್ ಆಗಿದ್ದು ಉಕ್ರೇನ್​ನಲ್ಲಿ. ರಷ್ಯಾ-ಉಕ್ರೇನ್​ (Ukraine) ಯುದ್ಧ ಶುರು ಆಗುವುದಕ್ಕೂ ಮುನ್ನ ‘ಆರ್​ಆರ್​ಆರ್​’ ಚಿತ್ರತಂಡ ಅಲ್ಲಿ ಹಾಡಿನ ಚಿತ್ರೀಕರಣ ಮಾಡಿತ್ತು.

ಉಕ್ರೇನ್​-ರಷ್ಯಾ ಯುದ್ಧ ಶುರುವಾದ ನಂತರ ಅಲ್ಲಿನ ವಾತಾವರಣ ತುಂಬ ಭೀಕರವಾಯಿತು. ಜನರು ಪ್ರಾಣ ಉಳಿಸಿಕೊಳ್ಳಲು ಸಖತ್​ ಕಷ್ಟಪಟ್ಟರು. ಉಕ್ರೇನ್​ನ ಬೃಹತ್​ ಕಟ್ಟಡಗಳ ಮೇಲೆ ಬಾಂಬ್​ ದಾಳಿ ಮಾಡಲಾಯಿತು. ನಗರಗಳು ನೆಲಸಮವಾದವು. ಅಂಥ ಪರಿಸ್ಥಿತಿ ನಿರ್ಮಾಣ ಆಗುವುದಕ್ಕೂ ಮುನ್ನ ‘ಆರ್​ಆರ್​ಆರ್​’ ಚಿತ್ರತಂಡ ಅಲ್ಲಿ ಶೂಟಿಂಗ್​ ಮಾಡಿತ್ತು. ಉಕ್ರೇನ್​ನಲ್ಲಿ ಶೂಟಿಂಗ್​ ಮಾಡಿದ ಘಟನೆಯನ್ನು ರಾಮ್​ ಚರಣ್​ ಪತ್ನಿ ಉಪಾಸನಾ ಅವರು ನೆನಪಿಸಿಕೊಂಡಿದ್ದಾರೆ. ಈಗ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆದ ಖುಷಿಯಲ್ಲಿ ಇಡೀ ತಂಡ ತೇಲುತ್ತಿದೆ. ಎಂಎಂ ಕೀರವಾಣಿ ಹಾಗೂ ‘ಆರ್​ಆರ್​ಆರ್​’ ಟೀಮ್​ಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: MM Keeravani: ಕನ್ನಡದ ಚಿತ್ರಗಳಿಗೂ ಸಂಗೀತ ನೀಡಿರುವ ಗೋಲ್ಡನ್​ ಗ್ಲೋಬ್​ ವಿನ್ನರ್​ ಎಂಎಂ ಕೀರವಾಣಿ ಸಂಭಾವನೆ ಬಹುಕೋಟಿ

ಇದನ್ನೂ ಓದಿ
Image
MM Keeravani: ಕನ್ನಡದ ಚಿತ್ರಗಳಿಗೂ ಸಂಗೀತ ನೀಡಿರುವ ಗೋಲ್ಡನ್​ ಗ್ಲೋಬ್​ ವಿನ್ನರ್​ ಎಂಎಂ ಕೀರವಾಣಿ ಸಂಭಾವನೆ ಬಹುಕೋಟಿ
Image
Golden Globe Awards: ‘RRR​’ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಜತೆ ‘ಗೋಲ್ಡನ್​ ಗ್ಲೋಬ್​’ ಪಡೆದವರ ಪೂರ್ತಿ ಲಿಸ್ಟ್​ ಇಲ್ಲಿದೆ
Image
MM Keeravani: ಗೋಲ್ಡನ್​ ಗ್ಲೋಬ್ ಪ್ರಶಸ್ತಿ ಪಡೆದ ‘ಆ​ರ್​ಆರ್​ಆರ್​’ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
Image
Golden Globes 2023: ಅತ್ಯುತ್ತಮ ಒರಿಜಿನಲ್ ಸಾಂಗ್ ಪ್ರಶಸ್ತಿ ಬಾಚಿಕೊಂಡ ಆರ್​ಆರ್​ಆರ್​ನ ನಾಟು ನಾಟು ಹಾಡು

‘ಆರ್​ಆರ್​ಆರ್​’ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ:

‘ಇದೊಂದು ವಿಶೇಷವಾದ ಸಾಧನೆ. ಎಂಎಂ ಕೀರವಾಣಿ, ಪ್ರೇಮ್​ ರಕ್ಷಿತ್​, ಕಾಲ ಭೈರವ, ಚಂದ್ರಬೋಸ್​, ರಾಹುಲ್​ ಸಿಪ್ಲಿಗಂಜ್​, ಎಸ್​ಎಸ್​ ರಾಜಮೌಳಿ, ಜೂನಿಯರ್​ ಎನ್​ಟಿಆರ್​, ರಾಮ್​ ಚರಣ್​ ಮತ್ತು ಇಡೀ ಆರ್​ಆರ್​ಆರ್​ ಸಿನಿಮಾ ತಂಡಕ್ಕೆ ಅಭಿನಂದನೆಗಳು. ಈ ಪ್ರತಿಷ್ಠಿತ ಪ್ರಶಸ್ತಿಯಿಂದಾಗಿ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಭಾವ ಮೂಡಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: Golden Globes 2023: ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆದ ಸಂಭ್ರಮದಲ್ಲಿ ‘ಆರ್​ಆರ್​ಆರ್​’ ತಂಡ; ಇಲ್ಲಿದೆ ಫೋಟೋ ಗ್ಯಾಲರಿ

ಆಸ್ಕರ್​ ಪ್ರಶಸ್ತಿ ಮೇಲೆ ‘ಆರ್​ಆರ್​ಆರ್​’ ಕಣ್ಣು:

ಪ್ರತಿಷ್ಠಿತ ಆಸ್ಕರ್​ ಪ್ರಶಸ್ತಿ ಪಡೆಯಬೇಕು ಎಂದು ‘ಆರ್​ಆರ್​ಆರ್​’ ಚಿತ್ರತಂಡ ಪ್ರಯತ್ನಿಸುತ್ತಿದೆ. ‘ಫಾರ್​ ಯುವರ್​ ಕನ್ಸಿಡರೇಷನ್​’ ಕ್ಯಾಂಪೇನ್​ ಮೂಲಕ ನಾಮನಿರ್ದೇಶನಗೊಳ್ಳಲು ಪ್ರಯತ್ನಗಳು ನಡೆದಿವೆ. ಅಂತಿಮವಾಗಿ ಏನಾಗಲಿದೆ ಎಂಬುದನ್ನು ತಿಳಿಯುವ ಕೌತುಕ ಅಭಿಮಾನಿಗಳಲ್ಲಿ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ