AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nani: ‘ಪುಷ್ಪ’ ಸಿನಿಮಾ ಕಾಪಿ ಮಾಡಿದ್ರಾ ನಾನಿ? ಟ್ರೇಲರ್​ ರಿಲೀಸ್​ ಆದ ಬಳಿಕ ಎದುರಾಯ್ತು ಅನುಮಾನ

Natural Star Nani | Dasara Movie: ‘ದಸರಾ’ ಸಿನಿಮಾದಲ್ಲಿ ನಾನಿ ನಿಭಾಯಿಸಿರುವ ಪಾತ್ರದ ಲುಕ್​ ರಗಡ್​ ಆಗಿದೆ. ಅದನ್ನು ನೋಡಿದ ಎಲ್ಲರಿಗೂ ಪುಷ್ಪ ಸಿನಿಮಾದ ಹೀರೋ ಪಾತ್ರವೇ ಕಣ್ಮುಂದೆ ಬಂದಂತೆ ಆಗಿದೆ.

Nani: ‘ಪುಷ್ಪ’ ಸಿನಿಮಾ ಕಾಪಿ ಮಾಡಿದ್ರಾ ನಾನಿ? ಟ್ರೇಲರ್​ ರಿಲೀಸ್​ ಆದ ಬಳಿಕ ಎದುರಾಯ್ತು ಅನುಮಾನ
ಅಲ್ಲು ಅರ್ಜುನ್, ನಾನಿ
ಮದನ್​ ಕುಮಾರ್​
|

Updated on:Mar 15, 2023 | 10:44 AM

Share

‘ನ್ಯಾಚುರಲ್​ ಸ್ಟಾರ್​’ ನಾನಿ (Nani) ಅವರು ಮಾಸ್​ ಲುಕ್​ನಲ್ಲಿ ಅಭಿಮಾನಿಗಳ ಎದುರು ಬರಲು ಸಜ್ಜಾಗಿದ್ದಾರೆ. ಅವರ ನಟನೆಯ ‘ದಸರಾ’ ಸಿನಿಮಾದ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಮಾರ್ಚ್​ 30ರಂದು ಈ ಚಿತ್ರ ಅದ್ದೂರಿಯಾಗಿ ತೆರೆ ಕಾಣಲಿದೆ. ಮಂಗಳವಾರ (ಮಾ.14) ‘ದಸರಾ’ ಸಿನಿಮಾದ ಟ್ರೇಲರ್​ (Dasara Movie Trailer) ಬಿಡುಗಡೆ ಆಗಿದೆ. ಇದನ್ನು ನೋಡಿದ ಎಲ್ಲರಿಗೂ ‘ಪುಷ್ಪ’ ಸಿನಿಮಾ (Pushpa Movie) ನೆನಪಾಗಿದೆ. ಅದಕ್ಕೆ ಕಾರಣ ನಾನಿ ಅವರ ಲುಕ್​. ಸಖತ್ ಮಾಸ್​ ಆಗಿ ಅವರು ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಾಗಾಗಿ ಪುಷ್ಪರಾಜ್​ ಪಾತ್ರಕ್ಕೆ ಹೋಲಿಕೆ ಮಾಡಲಾಗುತ್ತಿದೆ. ಆ ಬಗ್ಗೆ ಬಾಲಿವುಡ್​ ಮೀಡಿಯಾಗಳು ಪ್ರಶ್ನೆ ಎತ್ತಿವೆ. ಅದಕ್ಕೆ ನಾನಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ದಸರಾ’ ಸಿನಿಮಾದಲ್ಲಿ ನಾನಿ ಅವರು ನಿಭಾಯಿಸಿರುವ ಪಾತ್ರದ ಲುಕ್​ ರಗಡ್​ ಆಗಿದೆ. ಕಪ್ಪು ಮೈಬಣ್ಣ, ಗಡ್ಡ, ಲುಂಗಿ, ಬನಿಯನ್ ನೋಡಿದ ಎಲ್ಲರಿಗೂ ಪುಷ್ಪ ಸಿನಿಮಾದ ಹೀರೋ ಪಾತ್ರವೇ ಕಣ್ಮುಂದೆ ಬಂದಂತೆ ಆಗಿದೆ. ಆದರೆ ಈ ‘ಪುಷ್ಪ’ ಚಿತ್ರಕ್ಕೂ ‘ದಸರಾ’ ಸಿನಿಮಾಗೂ ಯಾವುದೇ ಸಂಬಂಧ ಇಲ್ಲ ಎಂದು ನಾನಿ ಹೇಳಿದ್ದಾರೆ.

ಇದನ್ನೂ ಓದಿ: Dasara Movie: ‘ದಸರಾ’ ಟ್ರೇಲರ್​ನಲ್ಲಿ ರಕ್ತಸಿಕ್ತ ಕಹಾನಿಯ ಝಲಕ್​; ಮಾಸ್​ ಆಗಿ ಅಬ್ಬರಿಸಿದ ನಾನಿ

ಇದನ್ನೂ ಓದಿ
Image
Dasara Movie Teaser: ರಾಜಮೌಳಿ ಮೆಚ್ಚಿದ ‘ದಸರಾ’ ಟೀಸರ್​; ನಾನಿ ರಗಡ್​ ಅವತಾರಕ್ಕೆ ಅಭಿಮಾನಿಗಳ ಚಪ್ಪಾಳೆ
Image
Dasara Movie Teaser: ‘ದಸರಾ’ ಟೀಸರ್​ ಝಲಕ್​ ತೋರಿಸ್ತಾರೆ ರಕ್ಷಿತ್​ ಶೆಟ್ಟಿ; ನಾನಿ ಚಿತ್ರಕ್ಕೆ ಸ್ಟಾರ್​ ನಟರ ಸಾಥ್​
Image
‘ಕನ್ನಡಕ್ಕೆ ಡಬ್​ ಮಾಡಲ್ಲ, ಕನ್ನಡಿಗರು ತೆಲುಗಿನಲ್ಲೇ ನೋಡ್ತಾರೆ’; ಟಾಲಿವುಡ್​​ ನಟ ನಾನಿ ಹೇಳಿಕೆಗೆ ಕರುನಾಡು ಗರಂ
Image
ಯಾವ ಚಿತ್ರವೂ ಗೆಲ್ಲುತ್ತಿಲ್ಲ, ಆದ್ರೂ ಈ ನಟಿಗೆ ಸಿಕ್ತಿದೆ ಒಳ್ಳೆಯ ಆಫರ್​; ಇಲ್ಲಿದೆ ಕೀರ್ತಿ ಸುರೇಶ್​ ಸೀಕ್ರೇಟ್​

‘ಹೇರ್​ ಸ್ಟೈಲ್​, ಲುಂಗಿ, ಬನಿಯನ್​ ಹೊರತುಪಡಿಸಿ ಬೇರೆ ಯಾವುದೇ ಅಂಶಗಳೂ ಪುಷ್ಪ ಚಿತ್ರಕ್ಕೆ ಹೋಲಿಕೆ ಆಗುವುದಿಲ್ಲ. ದಸರಾ ರಿಲೀಸ್​ ಆದ ಬಳಿಕ ಯಾರಾದರೂ ಇಂಥ ಹೇರ್​ ಸ್ಟೈಲ್​ ಮಾಡಿಕೊಂಡು ಲುಂಗಿ, ಬನಿಯನ್​ ಧರಿಸಿ ಕಾಣಿಸಿಕೊಂಡರೆ ನೀವು ಅದನ್ನು ದಸರಾ ಗೆಟಪ್​ ಎನ್ನುತ್ತೀರಿ’ ಎಂದು ನಾನಿ ಹೇಳಿದ್ದಾರೆ. ಈ ಸಿನಿಮಾ ಮೇಲೆ ಅವರಿಗೆ ಸಖತ್​ ಭರವಸೆ ಇದೆ.

ಇದನ್ನೂ ಓದಿ: ರಾಜಮೌಳಿ ಮೆಚ್ಚಿದ ‘ದಸರಾ’ ಟೀಸರ್​; ನಾನಿ ರಗಡ್​ ಅವತಾರಕ್ಕೆ ಅಭಿಮಾನಿಗಳ ಚಪ್ಪಾಳೆ

‘ದಸರಾ’ ಸಿನಿಮಾದಲ್ಲಿ ದೊಡ್ಡ ತಾರಾಗಣ ಇದೆ. ಕನ್ನಡದ ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ, ಸಮುದ್ರಕನಿ, ಸಾಯಿಕುಮಾರ್, ಜರೀನಾ ವಹಾಬ್ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸಂತೋಷ್ ನಾರಾಯಣನ್ ಸಂಗೀತ ನಿರ್ದೇಶನ, ಸತ್ಯನ್ ಸೂರ್ಯನ್ ಛಾಯಾಗ್ರಹಣ, ನವೀನ್ ನೂಲಿ ಸಂಕಲನ, ಅನ್ಬರಿವ್ ಸಾಹಸ ನಿರ್ದೇಶನ ಮಾಡಿದ್ದಾರೆ. ವಿಜಯ್ ಚಗಂಟಿ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಇದು ಪ್ಯಾನ್​ ಇಂಡಿಯಾ ಸಿನಿಮಾ. ತೆಲುಗು, ತಮಿಳು, ಕನ್ನಡ ಮುಂತಾದ ಭಾಷೆಯಲ್ಲಿ ‘ದಸರಾ’ ರಿಲೀಸ್​ ಆಗಲಿದೆ. ಎಲ್ಲ ಭಾಷೆಯಲ್ಲಿಯೂ ಟ್ರೇಲರ್​ಗೆ ಭರ್ಜರಿ ರೆಸ್ಪಾನ್ಸ್​ ಸಿಗುತ್ತಿದೆ. ತೆಲಂಗಾಣದಲ್ಲಿನ ಕಲ್ಲಿದ್ದಲು ಗಣಿಗೆ ಸಂಬಂಧಿಸಿದ ಕಥೆ ‘ದಸರಾ’ ಸಿನಿಮಾದಲ್ಲಿ ಇದೆ. ಕಲಿದ್ದಲು ಸಾಗಿಸುತ್ತಿರುವ ರೈಲಿನ ಮೇಲೆ ನಾನಿ ಹೊಡೆದಾಡುತ್ತಿರುವ ದೃಶ್ಯ ಈ ಟ್ರೇಲರ್​ನಲ್ಲಿ ಹೈಲೈಟ್​ ಆಗಿದೆ. ಆ್ಯಕ್ಷನ್ ದೃಶ್ಯಗಳ ಝಲಕ್​ ನೋಡಿ ನಾನಿ ಫ್ಯಾನ್ಸ್​ ಫಿದಾ ಆಗಿದ್ದಾರೆ. ಈ ಚಿತ್ರಕ್ಕೆ ಕೀರ್ತಿ ಸುರೇಶ್​ ನಾಯಕಿ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:44 am, Wed, 15 March 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ