AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ನಟ ನವೀನ್ ಪೋಲಿಶೆಟ್ಟಿಗೆ ಅಪಘಾತ

Naveen Polishetty: ತೆಲುಗು ಚಿತ್ರರಂಗದ ಭರವಸೆಯ ನಟ ಎನಿಸಿಕೊಂಡಿರುವ ನವೀನ್ ಪೋಲಿಶೆಟ್ಟಿ ಅಮೆರಿಕದ ಡಲ್ಲಾಸ್​ನಲ್ಲಿ ಬೈಕ್ ಅಪಘಾತಕ್ಕೆ ಈಡಾಗಿದ್ದಾರೆ.

ಅಮೆರಿಕದಲ್ಲಿ ನಟ ನವೀನ್ ಪೋಲಿಶೆಟ್ಟಿಗೆ ಅಪಘಾತ
ಮಂಜುನಾಥ ಸಿ.
|

Updated on: Mar 29, 2024 | 12:39 PM

Share

ತೆಲುಗು ಚಿತ್ರರಂಗದ (Tollywood) ಭರವಸೆಯ ನಟ ಎನಿಸಿಕೊಂಡಿರುವ ನವೀನ್ ಪೋಲಿಶೆಟ್ಟಿ ಅಮೆರಿಕದಲ್ಲಿ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಇತ್ತೀಚೆಗೆ ಅಮೆರಿಕಕ್ಕೆ ತೆರಳಿದ್ದ ನವೀನ್ ಪೋಲಿಶೆಟ್ಟಿ ಅಲ್ಲಿ ಬೈಕ್ ಚಲಾಯಿಸುವ ಸಮಯದಲ್ಲಿ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ನವೀನ್​ಗೆ ಹಲವು ಗಾಯಗಳಾಗಿವೆ ಎನ್ನಲಾಗುತ್ತಿದ್ದು, ಕೈ ಮೂಳೆ ಸಹ ಮುರಿದಿದೆ. ಅಮೆರಿಕದ ಆಸ್ಪತ್ರೆಯೊಂದರಲ್ಲಿ ನವೀನ್ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಮೆರಿಕದ ಡಲ್ಲಾಸ್​ನಲ್ಲಿ ನವೀನ್ ಪೋಲಿಶೆಟ್ಟಿ ಅಪಘಾತಕ್ಕೆ ಈಡಾಗಿದ್ದಾರೆ. ಅಪಘಾತ ತೀವ್ರವಾಗಿತ್ತು ಎನ್ನಲಾಗುತ್ತಿದೆ. ನವೀನ್​ಗೆ ಕೈ ಮೂಳೆ ಮಾತ್ರವೇ ಅಲ್ಲದೆ ಇನ್ನೂ ಹಲವು ಕಡೆ ಗಂಭೀರ ಪೆಟ್ಟುಗಳಾಗಿವೆ ಆದರೆ ಜೀವಕ್ಕೆ ಯಾವುದೇ ಅಪಾಯವಿಲ್ಲ ಎನ್ನಲಾಗುತ್ತಿದೆ.

ಇದನ್ನೂ ಓದಿ:ಸುಶಾಂತ್ ಸಿಂಗ್ ರಜಪೂತ್ ಜೊತೆಗಿನ ದಿನಗಳ ನೆನೆದ ನಟ ನವೀನ್ ಪೋಲಿಶೆಟ್ಟಿ

2012 ರಿಂದಲೂ ಸಿನಿಮಾಗಳಲ್ಲಿ ನಟಿಸುತ್ತಿರುವ ನವೀನ್ ಪೋಲಿಶೆಟ್ಟಿ ಹಲವು ಸಣ್ಣ-ಪುಟ್ಟ ಪಾತ್ರಗಳಲ್ಲಿ ನಟಿಸಿ 2019ರಲ್ಲಿ ಬಿಡುಗಡೆ ಆದ ಸೂಪರ್ ಹಿಟ್ ಸಿನಿಮಾ ‘ಏಜೆಂಟ್ ಸಾಯಿ ಶ್ರೀನಿವಾಸ ಆತ್ರೆಯಾ’ ಸಿನಿಮಾ ಮೂಲಕ ನಾಯಕ ನಟರಾದರು. ಅದೇ ವರ್ಷ ಸುಶಾಂತ್ ಸಿಂಗ್ ರಜಪೂತ್, ಶ್ರದ್ಧಾ ಕಪೂರ್ ನಟಿಸಿದ ಹಿಂದಿಯ ಬ್ಲಾಕ್ ಬಸ್ಟರ್ ಸಿನಿಮಾ ‘ಚಿಚೋರೆ’ ಸಿನಿಮಾದಲ್ಲಿ ಸಹ ನಟಿಸಿದರು. ಬಳಿಕ ಮತ್ತೆ ತೆಲುಗಿಗೆ ಬಂದ ನವೀನ್ ‘ಜಾತಿ ರತ್ನಾಲು’ ಸಿನಿಮಾ ಸಹ ಸೂಪರ್ ಹಿಟ್ ಆಯ್ತು. ಕಳೆದ ವರ್ಷ ಬಿಡುಗಡೆ ಆದ ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ ಸಿನಿಮಾ ಸಹ ಸೂಪರ್ ಹಿಟ್ ಆಯ್ತು. ಈ ಸಿನಿಮಾನಲ್ಲಿ ನಟಿ ಅನುಷ್ಕಾ ಶೆಟ್ಟಿಗೆ ನಾಯಕನಾಗಿ ನವೀನ್ ನಟಿಸಿದ್ದರು.

ಇದೀಗ ‘ಅನಗನಗಾ ಒಕ ರಾಜು’ ಸಿನಿಮಾನಲ್ಲಿ ನವೀನ್ ಪೋಲಿಶೆಟ್ಟಿ ನಟಿಸುತ್ತಿದ್ದಾರೆ. ನವೀನ್ ಪೋಲಿಶೆಟ್ಟಿ ಸ್ವತಃ ಚಿತ್ರಕತೆ ಬರಹಗಾರ ಸಹ ಆಗಿದ್ದು ಸ್ಟಾಂಡಪ್ ಕಮಿಡಿಯನ್ ಆಗಿ ಸಹ ಹೆಸರು ಗಳಿಸಿದ್ದಾರೆ. ಈ ಹಿಂದೆ ಜನಪ್ರಿಯ ಯೂಟ್ಯೂಬ್ ಚಾನೆಲ್ ‘ಎಐಬಿ’ನ ಹಲವು ಶಾರ್ಟ್ ವಿಡಿಯೋಗಳಲ್ಲಿ ನವೀನ್ ಪೋಲಿಶೆಟ್ಟಿ ನಟಿಸಿ ಜನಪ್ರಿಯರಾಗಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!