Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯಿ ಧರಮ್​ ತೇಜ್​ ಅಪಘಾತ ನೋಡಿ ಎಲ್ಲಾ ಬೈಕ್​ಗಳನ್ನು ಮಾರಿದ್ದ ನರೇಶ್ ಮಗ

‘ರಸ್ತೆ ಅಪಘಾತದಲ್ಲಿ ಸಾಯಿ ತೇಜ್ ಗಂಭೀರವಾಗಿ ಗಾಯಗೊಂಡಿದ್ದನ್ನು ನೋಡಿ ನನಗೆ ಸಹಿಸಲಾಗಲಿಲ್ಲ. ಕೆಲ ದಿನ ಯಾರನ್ನೂ ಭೇಟಿಯಾಗಲಿಲ್ಲ. ಫೋನ್ ಕೂಡ ಸ್ವಿಚ್ ಆಫ್​ ಮಾಡಿದ್ದೆ. ನನ್ನ ಎಲ್ಲ ಬೈಕ್​​ಗಳನ್ನೂ ಮಾರಿದ್ದೇನೆ’ ಎಂದು ನವೀನ್ ವಿಜಯ್ ಕೃಷ್ಣ ಭಾವುಕರಾಗಿ ಮಾತನಾಡಿದ್ದಾರೆ.

ಸಾಯಿ ಧರಮ್​ ತೇಜ್​ ಅಪಘಾತ ನೋಡಿ ಎಲ್ಲಾ ಬೈಕ್​ಗಳನ್ನು ಮಾರಿದ್ದ ನರೇಶ್ ಮಗ
ನವೀನ್​ ವಿಜಯ್​ ಕೃಷ್ಣ, ಸಾಯಿ ಧರಮ್​ ತೇಜ್​
Follow us
 ಶ್ರೀಲಕ್ಷ್ಮೀ ಎಚ್
| Updated By: ಮದನ್​ ಕುಮಾರ್​

Updated on: Aug 25, 2023 | 5:21 PM

ನಟ ಸಾಯಿ ಧರಮ್ ತೇಜ್ (Sai Dharam Tej) ಅವರು 2021ರ ಸೆಪ್ಟೆಂಬರ್ ತಿಂಗಳಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಒಳಗಾದರು. ಅವರು ಕೆಲವು ವಾರ ಕೋಮಾದಲ್ಲಿದ್ದರು. ಸಾವು-ಬದುಕಿನ ನಡುವೆ ಹೋರಾಡಿ ಅವರು ಕೊನೆಗೂ ಚೇತರಿಸಿಕೊಂಡರು. ಈಗ ಅವರು ಮತ್ತೆ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈಗ ಅವರ ಗೆಳೆಯ ಹಾಗೂ ನಟ ನವೀನ್ ವಿಜಯ್ ಕೃಷ್ಣ (Naveen Vijay krishna) ಅವರು ಒಂದು ಅಚ್ಚರಿಯ ಮಾಹಿತಿ ಬಿಚ್ಚಿಟ್ಟಿದ್ದಾರೆ. ಸಾಯಿ ಧರಮ್ ತೇಜ್ ಅಪಘಾತಕ್ಕೆ (Sai Dharam Tej Accident) ಒಳಗಾದ ಬಳಿಕ ನವೀನ್ ತಮ್ಮ ಬಳಿ ಇರುವ ಎಲ್ಲಾ ಬೈಕ್​ಗಳನ್ನು ಮಾರಿದ್ದಾರೆ.

ಟಾಲಿವುಡ್ ನಟ ನರೇಶ್ ಅವರ ಮಗ ನವೀನ್. ಅವರು ಸಾಯಿ ಧರಮ್ ತೇಜ್ ಜೊತೆ ಒಳ್ಳೆಯ ಫ್ರೆಂಡ್​ಶಿಪ್ ಇಟ್ಟುಕೊಂಡಿದ್ದಾರೆ. 2016ರಲ್ಲಿ ನವೀನ್ ಚಿತ್ರರಂಗಕ್ಕೆ ಕಾಲಿಟ್ಟರು. ಅವರಿಗೆ ಹೇಳಿಕೊಳ್ಳುವಂಥ ಯಶಸ್ಸು ಸಿಕ್ಕಿಲ್ಲ. ಈಗ ಅವರು ಕಿರುಚಿತ್ರವನ್ನು ಕೂಡ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಅವರು ಭಾಗವಹಿಸಿದ್ದಾರೆ. ಈ ವೇಳೆ ತಮ್ಮ ವೈಯಕ್ತಿಕ ಮತ್ತು ವೃತ್ತಿ ಜೀವನದ ಬಗ್ಗೆ ಅನೇಕ ವಿಷಯಗಳನ್ನು ಹಂಚಿಕೊಂಡಿದ್ದಾರೆ.

ಸಾಯಿ ಧರಮ್ ತೇಜ್ ಬೈಕ್ ಅಪಘಾತದ ನಂತರದ ಪರಿಸ್ಥಿತಿಯನ್ನು ವಿವರಿಸುವಾಗ ನವೀನ್ ಭಾವುಕರಾದರು. ‘ಸಾಯಿ ಧರಮ್ ತೇಜ್ ಅವರ ಬೈಕ್ ಅಪಘಾತ ನನ್ನ ಜೀವನದಲ್ಲಿ ಅನೇಕ ಬದಲಾವಣೆಗಳನ್ನು ತಂದಿತು. ಜೀವನದಲ್ಲಿ ಜವಾಬ್ದಾರಿಯುತವಾಗಿ ಇರುವುದು ಹೇಗೆ ಎಂಬುದನ್ನು ಕಲಿಸಿದೆ’ ಎಂದಿದ್ದಾರೆ ನವೀನ್.

ಇದನ್ನೂ ಓದಿ: ಸಿನಿಮಾ ಬಿಡುಗಡೆ ಮುನ್ನ ಅಭಿಮಾನಿಗಳಿಗೆ ಎಚ್ಚರಿಕೆ ಪತ್ರ ಬರೆದ ಸಾಯಿ ಧರಮ್ ತೇಜ್

‘ಸಾಯಿ ಧರಮ್ ತೇಜ್ ಅಪಘಾತಕ್ಕೆ ಒಳಗಾಗುವ ಮೊದಲು ನಾವಿಬ್ಬರೂ ಒಟ್ಟಾಗಿ ಸುತ್ತಾಡಲು ಹೊಗಿದ್ದೆವು. ಅವರು ನನ್ನನ್ನು ಮನೆಯ ಹತ್ತಿರ ಡ್ರಾಪ್ ಮಾಡಿ ತಮ್ಮ ಮನೆಗೆ ಹೊರಟರು. ಆಗ ಅಪಘಾತ ಸಂಭವಿಸಿತು. ಸಾಯಿ ಅವರಿಗೆ ಆ್ಯಕ್ಸಿಡೆಂಟ್ ಆಗಿದೆ ಎಂದು ಕರೆ ಬಂದಾಗ, ಅದೇನೋ ಸಣ್ಣ ಅಪಘಾತ ಎಂದುಕೊಂಡೆ. ಆದರೆ ಆಸ್ಪತ್ರೆಗೆ ತೆರಳಿದ ನಂತರ ಅವರ ಸ್ಥಿತಿ ಕಂಡು ಬೆಚ್ಚಿಬಿದ್ದೆ. ಈ ಅಪಘಾತ ನನಗೆ ದೊಡ್ಡ ಪಾಠ ಕಲಿಸಿದೆ. ಜೀವನದಲ್ಲಿ ಎಷ್ಟು ಜವಾಬ್ದಾರಿಯುತವಾಗಿ ಇರಬೇಕು ಎಂಬುದನ್ನು ಹೇಳಿಕೊಟ್ಟಿದೆ’ ಎಂದಿದ್ದಾರೆ ಅವರು.

‘ರಸ್ತೆ ಅಪಘಾತದಲ್ಲಿ ಸಾಯಿ ತೇಜ್ ಗಂಭೀರವಾಗಿ ಗಾಯಗೊಂಡಿದ್ದನ್ನು ನೋಡಿ ನನಗೆ ಸಹಿಸಲಾಗಲಿಲ್ಲ. ಕೆಲ ದಿನ ಯಾರನ್ನೂ ಭೇಟಿಯಾಗಲಿಲ್ಲ. ಫೋನ್ ಕೂಡ ಸ್ವಿಚ್ ಆಫ್​ ಮಾಡಿದ್ದೆ. ನನ್ನ ಎಲ್ಲ ಬೈಕ್​​ಗಳನ್ನೂ ಮಾರಿದ್ದೇನೆ’ ಎಂದು ನವೀನ್ ಭಾವುಕರಾದರು.

ಇದನ್ನೂ ಓದಿ: ಚಿರಂಜೀವಿ ಕುಟುಂಬದಿಂದ ನೆರವು ಸಿಕ್ಕಿಲ್ಲ, ಸಹಾಯ ಮಾಡಿ ಹಿಂಸೆ ಅನುಭವಿಸುತ್ತಿದ್ದೇನೆ: ಸಾಯಿ ಧರಮ್ ಜೀವ ಉಳಿಸಿದ ಅಬ್ದುಲ್

ಸಾಯಿ ಧರಮ್ ತೇಜ್ ಅವರು ‘ವಿರೂಪಾಕ್ಷ’ ಸಿನಿಮಾ ಮೂಲಕ ಭರ್ಜರಿ ಕಂಬ್ಯಾಕ್ ಮಾಡಿದರು. ಈ ಚಿತ್ರ ಸೂಪರ್ ಹಿಟ್ ಆಯಿತು. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಈ ಚಿತ್ರ ಮೂಡಿಬಂತು. ಇತ್ತೀಚೆಗೆ ಅವರ ನಟನೆಯ ‘ಬ್ರೋ’ ಸಿನಿಮಾ ಕೂಡ ರಿಲೀಸ್ ಆಯಿತು. ಪವನ್ ಕಲ್ಯಾಣ್ ಕೂಡ ಈ ಚಿತ್ರದಲ್ಲಿ ನಟಿಸಿದರು. ಅವರ ಹೊಸ ಸಿನಿಮಾಗಳ ಬಗ್ಗೆ ನಿರೀಕ್ಷೆ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು