AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಮಕ್ಕಳಿಗೆ 10 ನಿಮಿಷದ ಡ್ಯಾನ್ಸ್ ಹೇಳಿಕೊಡಲು 5 ಲಕ್ಷ ಕೇಳಿದ್ರು; ‘ಗಜ’ ಸಿನಿಮಾ ನಟಿ ಬಗ್ಗೆ ಸಚಿವನ ಆರೋಪ

ಕೇರಳ ರಾಜ್ಯ ಶಿಕ್ಷಣ ಸಚಿವ ವಿ. ಶಿವನ್​ಕುಟ್ಟಿ ಅವರು ಈ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಮುಂಬರುವ ರಾಜ್ಯ ಶಾಲಾ ಉತ್ಸವಕ್ಕೆ ಸ್ವಾಗತಕೋರುವ ಡ್ಯಾನ್ಸ್ ಮಾಡಲು ನಿರ್ಧರಿಸಲಾಗಿತ್ತು. 10 ನಿಮಿಷಗಳ ಡ್ಯಾನ್ಸ್ ಇದಾಗಿದ್ದು, ಇದನ್ನು ಹೇಳಿಕೊಡಲು ಅವರು ದೊಡ್ಡ ಮೊತ್ತದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಶಾಲಾ ಮಕ್ಕಳಿಗೆ 10 ನಿಮಿಷದ ಡ್ಯಾನ್ಸ್ ಹೇಳಿಕೊಡಲು 5 ಲಕ್ಷ ಕೇಳಿದ್ರು; ‘ಗಜ’ ಸಿನಿಮಾ ನಟಿ ಬಗ್ಗೆ ಸಚಿವನ ಆರೋಪ
ನವ್ಯಾ ನಾಯರ್
ರಾಜೇಶ್ ದುಗ್ಗುಮನೆ
|

Updated on: Dec 09, 2024 | 2:32 PM

Share

‘ಗಜ’ ಸಿನಿಮಾದಲ್ಲಿ ನಟಿಸಿ ಕನ್ನಡ ಮಂದಿಗೆ ಪರಿಚಯ ಆಗೀರೋ ನವ್ಯಾ ನಾಯರ್​ಗೆ ಸಾಕಷ್ಟು ಬೇಡಿಕೆ ಇದೆ. ಅವರು ಕನ್ನಡದಲ್ಲಿ ‘ದೃಶ್ಯ’ ಹಾಗೂ ‘ದೃಶ್ಯ 2’ ಸಿನಿಮಾಗಳಲ್ಲಿಯೂ ನಟಿಸಿದ್ದರು. ಈಗ ಅವರ ವಿರುದ್ಧ ಗಂಭೀರ ಆರೋಪ ಒಂದು ಕೇಳಿ ಬಂದಿದೆ. ಅವರು, ಸರ್ಕಾರಿ ಶಾಲಾ ಮಕ್ಕಳಿಗೆ ಡ್ಯಾನ್ಸ್ ಹೇಳಿಕೊಡಲು 5 ಲಕ್ಷ ರೂಪಾಯಿ ಕೇಳಿದ್ದರು ಎನ್ನಲಾಗಿದೆ. ಈ ಬಗ್ಗೆ ಸಚಿರೊಬ್ಬರು ಮಾತನಾಡಿದ್ದಾರೆ. ಅವರು ನೇರವಾಗಿ ಹೆಸರು ಉಲ್ಲೇಖಿಸದೇ ಇದ್ದರೂ ಹಾಗೊಂದು ಚರ್ಚೆ ನಡೆಯುತ್ತಿದೆ.

ಕೇರಳ ರಾಜ್ಯ ಶಿಕ್ಷಣ ಸಚಿವ ವಿ. ಶಿವನ್​ಕುಟ್ಟಿ ಅವರು ಈ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಮುಂಬರುವ ರಾಜ್ಯ ಶಾಲಾ ಉತ್ಸವಕ್ಕೆ ಸ್ವಾಗತಕೋರುವ ಡ್ಯಾನ್ಸ್ ಮಾಡಲು ನಿರ್ಧರಿಸಲಾಗಿತ್ತು. 10 ನಿಮಿಷಗಳ ಡ್ಯಾನ್ಸ್ ಇದಾಗಿದ್ದು, ಇದನ್ನು ಹೇಳಿಕೊಡಲು ಅವರು ದೊಡ್ಡ ಮೊತ್ತದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಅಲ್ಲದೆ, ದುರಹಂಕಾರ ತೋರಿಸಿದ್ದರು ಎನ್ನಲಾಗಿದೆ.

‘ನನಗೆ ಆ ಘಟನೆಯ ಬಗ್ಗೆ ಬೇಸರ ಇದೆ. ನಾನು ನಟಿಯೊಬ್ಬರ ಬಳಿ ಶಾಲಾ ಮಕ್ಕಳಿಗೆ 10 ನಿಮಿಷಗಳ ಡ್ಯಾನ್ಸ್ ಕಲಿಸಬಹುದೇ ಎಂದು ಕೇಳಿದೆ. ಇದಕ್ಕೆ ಅವರು ಒಪ್ಪಿದರು. ಆ ಬಳಿಕ 5 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟರು. ಇದು ನಿಜಕ್ಕೂ ಬೇಸರ ಮೂಡಿಸುವಂಥದ್ದು’ ಎಂದು ಶಿವನ್ ಕುಟ್ಟಿ ಹೇಳಿದ್ದಾರೆ. ಅವರು ನಟಿಯ ಹೆಸರನ್ನು ರಿವೀಲ್ ಮಾಡಿಲ್ಲ. ಆದರೆ, ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಇರುವ ಚರ್ಚೆ ಏನು ಎಂದರೆ ಈ ರೀತಿ ಬೇಡಿಕೆ ಇಟ್ಟಿದ್ದು ನವ್ಯಾ ನಾಯರ್ ಎನ್ನಲಾಗಿದೆ.

‘ಹಣದ ದುರಾಸೆಗೆ ಬೀಳದೇ ಇರುವ ಅನೇಕ ನೃತ್ಯ ಶಿಕ್ಷಕರಿದ್ದಾರೆ. ಈಗ ನಾವು ವಿದ್ಯಾರ್ಥಿಗಳಿಗೆ ಅವರಿಂದ ಡ್ಯಾನ್ಸ್ ಕಲಿಸೋ ನಿರ್ಧಾರಕ್ಕೆ ಬಂದಿದ್ದೇವೆ’ ಎಂದು ಶಿವನ್​ಕುಟ್ಟಿ ಹೇಳಿದ್ದಾರೆ. ‘ಈ ರೀತಿಯ ಯೂತ್ ಫೆಸ್ಟಿವಲ್​ನಿಂದ ಸಾಕಷ್ಟು ಸಿನಿಮಾ ಸ್ಟಾರ್​ಗಳು ಬೆಳೆದಿದ್ದಾರೆ. ಈಗ ಅದಕ್ಕೆ ಅಗೌರವ ಸೂಚಿಸುತ್ತಿದ್ದಾರೆ’ ಎಂದು ಸಚಿವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟಿ ನವ್ಯಾ ನಾಯರ್ ವಿರುದ್ಧ ಎಫ್​ಐಆರ್

ನವ್ಯಾ ನಾಯರ್ ಅವರು ಇತ್ತೀಚೆಗೆ ಮಲಯಾಳಂ ಚಿತ್ರರಂಗದಲ್ಲಿ ಬ್ಯುಸಿ ಇದ್ದಾರೆ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರು ನೃತ್ಯದ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು