AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಚ್​ಮ್ಯಾನ್​ ಆಗಿ ಕೆಲಸ ಮಾಡಿದ್ದ ಈ ಖ್ಯಾತ ನಟ ಈಗ ಕೋಟಿ ಒಡೆಯ

ನವಾಜುದ್ದೀನಿ ಸಿದ್ದಿಕಿ ಓರ್ವ ಖ್ಯಾತ ನಟ ಎಂಬುದಷ್ಟೇ ಅನೇಕರಿಗೆ ತಿಳಿದಿದೆ. ಆದರೆ ನವಾಜುದ್ದೀನ್ ಸಿದ್ದಿಕಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡುವ ಮೊದಲು ವಾಚ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಇದನ್ನು ಅಭಿಮಾನಿಗಳು ಆಗಾಗ ನೆನಪಿಸಿಕೊಳ್ಳುತ್ತಾರೆ.

ವಾಚ್​ಮ್ಯಾನ್​ ಆಗಿ ಕೆಲಸ ಮಾಡಿದ್ದ ಈ ಖ್ಯಾತ ನಟ ಈಗ ಕೋಟಿ ಒಡೆಯ
ನವಾಜುದ್ದೀನ್ ಸಿದ್ದಿಕಿ
ರಾಜೇಶ್ ದುಗ್ಗುಮನೆ
|

Updated on: Nov 18, 2023 | 10:43 AM

Share

ಚಿತ್ರರಂಗ ಎಲ್ಲರನ್ನೂ ಸ್ವಾಗತಿಸುತ್ತದೆ. ಇಲ್ಲಿ ಬಂದು ಹೇಗೆ ನೆಲೆ ಕಂಡುಕೊಳ್ಳಬೇಕು ಎನ್ನುವ ತಂತ್ರಗಾರಿಕೆ ತಿಳಿದಿದ್ದರೆ ಗೆಲುವು ಸುಲಭ ಆಗುತ್ತದೆ. ಬಾಲಿವುಡ್​ನಲ್ಲಿ ಓರ್ವ ನಟನಿದ್ದಾನೆ. ಅವರ ಕುಟುಂಬಕ್ಕೂ ಬಾಲಿವುಡ್​ಗೂ ಯಾವುದೇ ಸಂಬಂಧ ಇರಲಿಲ್ಲ. ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಈ ವ್ಯಕ್ತಿಯ ಕನಸು ಬಹಳ ದೊಡ್ಡದಾಗಿತ್ತು. ರಂಗಭೂಮಿಯಲ್ಲಿ ತೊಡಗಿಕೊಂಡಿದ್ದಾಗ ಈ ನಟ ಒಂದು ತುತ್ತಿನ ಊಟಕ್ಕಾಗಿ, ಕುಟುಂಬವನ್ನು ಪೋಷಿಸುವುದಕ್ಕಾಗಿ ಅವರು ಕೆಲಸಗಳನ್ನು ಮಾಡಿದ್ದರು. ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಈ ನಟನ ಆತ್ಮ ವಿಶ್ವಾಸ ಅವರನ್ನು ಯಶಸ್ಸಿನ ಶಿಖರಕ್ಕೇರಿಸಿದೆ. ಸಾಮಾನ್ಯ ಕುಟುಂಬದಿಂದ ಬಂದ ಈ ವ್ಯಕ್ತಿ ಈಗ ಬಾಲಿವುಡ್‌ನ ಅತ್ಯುತ್ತಮ ನಟರ ಪಟ್ಟಿಯಲ್ಲಿ ಇವರಿಗೂ ಸ್ಥಾನ ಇದೆ. ಅವರು ಬೇರಾರು ಅಲ್ಲ ನವಾಜುದ್ದೀನ್ ಸಿದ್ದಿಕಿ (Nawazuddin Siddiqui).

ನವಾಜುದ್ದೀನಿ ಸಿದ್ದಿಕಿ ಓರ್ವ ಖ್ಯಾತ ನಟ ಎಂಬುದಷ್ಟೇ ಅನೇಕರಿಗೆ ತಿಳಿದಿದೆ. ಆದರೆ ನವಾಜುದ್ದೀನ್ ಸಿದ್ದಿಕಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡುವ ಮೊದಲು ವಾಚ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಇದನ್ನು ಅಭಿಮಾನಿಗಳು ಆಗಾಗ ನೆನಪಿಸಿಕೊಳ್ಳುತ್ತಾರೆ. ಅವರು ಕೂಡ ಕೆಲವು ಕಡೆಗಳಲ್ಲಿ ಇದನ್ನು ಹೇಳಿಕೊಂಡಿದ್ದಿದೆ.

ನವಾಜುದ್ದೀನ್ ಸಿದ್ದಿಕಿ ಇಲ್ಲಿಯವರೆಗೆ ಹಲವು ಸಿನಿಮಾಗಳಲ್ಲಿ ನಟಿಸಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ಪ್ರತಿ ಸಿನಿಮಾದಲ್ಲೂ ನವಾಜುದ್ದೀನ್ ಸಿದ್ದಿಕಿ ಅವರ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಅವರು ಒಂದೇ ರೀತಿಯ ಪಾತ್ರಕ್ಕೆ ಕಟ್ಟುಬಿದ್ದವರಲ್ಲ. ‘ಸೆಕ್ರೇಡ್ ಗೇಮ್ಸ್’ ವೆಬ್ ಸೀರಿಸ್​ನಲ್ಲಿ ಗಣೇಶ್ ಗಾಯ್ತೊಂಡೆ ಪಾತ್ರ ಮಾಡಿ ಅವರು ಭೇಷ್ ಎನಿಸಿಕೊಂಡಿದ್ದಾರೆ. ನವಾಜುದ್ದೀನ್ ಸಿದ್ದಿಕಿ ಯಾವುದೇ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಬಂದರು. ಅವರು ತಮ್ಮ ಕಲೆಯ ಮೂಲಕ ನೆಲೆ ಕಂಡುಕೊಂಡಿದ್ದಾರೆ.

1999ರಲ್ಲಿ ನವಾಜುದ್ದೀನ್ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ‘ಸರ್ಫರೋಷ್’ ಅವರು ನಟಿಸಿದ ಮೊದಲ ಸಿನಿಮಾ. ಅವರು ಬಣ್ಣದ ಬದುಕಿಗೆ ಕಾಲಿಟ್ಟು 24 ವರ್ಷಗಳು ಕಳೆದಿವೆ. ಸಂಭಾಷಣೆಗೆ, ಒಂದು ಪಾತ್ರಕ್ಕೆ ಜೀವ ತುಂಬುವುದು ಹೇಗೆ ಎಂಬುದಕ್ಕೆ ಉತ್ತಮ ಉದಾಹರಣೆ ನವಾಜುದ್ದೀನ್ ಸಿದ್ದಿಕಿ. ನಾಲ್ಕೈದು ಸಿನಿಮಾಗಳು ಅವರ ಕೈಯಲ್ಲಿವೆ. ನವಾಜುದ್ದೀನ್ ತಮ್ಮ ವೈಯಕ್ತಿಕ ಜೀವನದ ಕಾರಣದಿಂದ ಇತ್ತೀಚೆಗೆ ಸುದ್ದಿಯಲ್ಲಿದ್ದರು. ತಮಗೆ ಕಿರುಕುಳ ನೀಡುತ್ತಿರುವುದಾಗಿ ಅವರ ಪತ್ನಿ ಕೇಸ್ ಹಾಕಿದ್ದರು.

ಇದನ್ನೂ ಓದಿ: ‘ನಾನು ಫ್ರಾಡ್ ಇರಬಹುದು, ಆದರೆ ನನ್ನದು ಶುದ್ಧ ಪ್ರೀತಿ’: ನವಾಜುದ್ದೀನ್ ಸಿದ್ದಿಕಿ

ನವಾಜುದ್ದೀನ್ ಸಿದ್ದಿಕಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಕೋಟ್ಯಾಂತರ ರೂಪಾಯಿ ಆಸ್ತಿ ಮಾಡಿದ್ದಾರೆ. ನವಾಜುದ್ದೀನ್ ಸಿದ್ದಿಕಿ ಇಂದು ಹಲವಾರು ಏಳುಬೀಳುಗಳನ್ನು ಕಂಡು ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!