AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಫ್ರಾಡ್ ಇರಬಹುದು, ಆದರೆ ನನ್ನದು ಶುದ್ಧ ಪ್ರೀತಿ’: ನವಾಜುದ್ದೀನ್ ಸಿದ್ದಿಕಿ

‘ನಾನು ಫ್ರಾಡ್ ಇರಬಹುದು. ನಾನು ಅನೇಕ ಬಾರಿ ಸುಳ್ಳುಗಳನ್ನು ಹೇಳಿರಬಹುದು. ಆದರೆ, ನನ್ನ ಪ್ರೀತಿ ಯಾವಾಗಲೂ ಶುದ್ಧ. ಕಣ್ಣುಗಳ ಮಧ್ಯೆ ಅರಳೋದು ಪ್ರೀತಿ’ ಎಂದಿದ್ದಾರೆ ನವಾಜುದ್ದೀನ್.

‘ನಾನು ಫ್ರಾಡ್ ಇರಬಹುದು, ಆದರೆ ನನ್ನದು ಶುದ್ಧ ಪ್ರೀತಿ’: ನವಾಜುದ್ದೀನ್ ಸಿದ್ದಿಕಿ
ನವಾಜುದ್ದೀನ್-ಶೆಹನಾಜ್ ಗಿಲ್
ರಾಜೇಶ್ ದುಗ್ಗುಮನೆ
|

Updated on:May 22, 2023 | 8:16 AM

Share

ನವಾಜುದ್ದೀನ್ ಸಿದ್ದಿಕಿ ಅವರು ನಟನೆ ಮೂಲಕ ಜನಮನ ಗೆದ್ದಿದ್ದಾರೆ. ಇದರಜೊತೆ ಅವರು ವಿವಾದಗಳ ಮೂಲಕ ಹೆಚ್ಚು ಸುದ್ದಿ ಆಗುತ್ತಿರುತ್ತಾರೆ. ಈಗ ನವಾಜುದ್ದೀನ್ ಸಿದ್ದಿಕಿ ಅವರು ಶೆಹನಾಜ್ ಗಿಲ್ (Shehnaaz Gill) ಅವರ ‘ದೇಸಿ ವೈಬ್ಸ್​’ ಶೋನಲ್ಲಿ ಭಾಗಿ ಆಗಿದ್ದಾರೆ. ಈ ಶೋನಲ್ಲಿ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಪ್ರೀತಿ ವಿಚಾರದಲ್ಲಿ ಅವರು ಎಂದಿಗೂ ಮೋಸ ಮಾಡಿಲ್ಲವಂತೆ. ನವಾಜುದ್ದೀನ್ ಪತ್ನಿ ಇತ್ತೀಚೆಗೆ ಅವರ ವಿರುದ್ಧ ಕಿರುಕುಳದ ಕೇಸ್ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ ಎನ್ನಲಾಗುತ್ತಿದೆ.

‘ನಾನು ಫ್ರಾಡ್ ಇರಬಹುದು. ನಾನು ಅನೇಕ ಬಾರಿ ಸುಳ್ಳುಗಳನ್ನು ಹೇಳಿರಬಹುದು. ಆದರೆ, ನನ್ನ ಪ್ರೀತಿ ಯಾವಾಗಲೂ ಶುದ್ಧ. ಕಣ್ಣುಗಳ ಮಧ್ಯೆ ಅರಳೋದು ಪ್ರೀತಿ’ ಎಂದಿದ್ದಾರೆ ನವಾಜುದ್ದೀನ್. ಸದ್ಯ ಪ್ರೋಮೋ ಬಿಡುಗಡೆ ಆಗಿದ್ದು, ಅವರು ಆಡಿದ ಮಾತು ಗಮನ ಸೆಳೆಯುತ್ತಿದೆ.

‘ಸಾಕಷ್ಟು ದೂರ ಸಾಗಬೇಕು ಎಂದರೆ ಗಿಮಿಕ್ ಮಾಡಬಾರದು. ಬದಲಿಗೆ ಕಷ್ಟಪಡಬೇಕು. ನಾನು ಸ್ವಲ್ಪ ಗಿಮಿಕ್ ಮಾಡಿದ್ದೇನೆ’ ಎಂದು ನವಾಜುದ್ದೀನ್ ಒಪ್ಪಿಕೊಂಡಿದ್ದಾರೆ. ‘ನೀವು ಜೀವನದಲ್ಲಿ ಏನಾಗಬೇಕು ಎಂದುಕೊಂಡಿದ್ದೀರಿ’ ಎಂದು ನವಾಜುದ್ದೀನ್ ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿರುವ ಶೆಹನಾಜ್​, ‘ಗಾಯನ, ನಟನೆ, ಫ್ಯಾಷನ್. ಇದೆಲ್ಲವನ್ನೂ ಮಿಕ್ಸ್​ ಮಾಡಿದ್ದೇನೆ’ ಎಂದಿದ್ದಾರೆ.

ಇದನ್ನೂ ಓದಿ: ಟಾಲಿವುಡ್​ಗೆ ನವಾಜುದ್ದೀನ್ ಸಿದ್ದಿಕಿ ಎಂಟ್ರಿ: ಲುಕ್ ಬಿಡುಗಡೆ ಮಾಡಿದ ಚಿತ್ರತಂಡ

ಸದ್ಯ ಈ ಪ್ರೋಮೋ ವೈರಲ್ ಆಗಿದೆ. ಶೆಹನಾಜ್ ಅಭಿಮಾನಿಗಳು ಇದಕ್ಕೆ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅನೇಕರು ಪೂರ್ತಿ ಎಪಿಸೋಡ್ ನೋಡಲು ಕಾದಿದ್ದಾರೆ. ಶೆಹನಾಜ್ ಅವರು ‘ಬಿಗ್ ಬಾಸ್’ ಮೂಲಕ ಫೇಮಸ್ ಆದವರು. ಅವರು ಸಿದ್ದಾರ್ಥ್ ಶುಕ್ಲಾ ಜೊತೆ ಪ್ರೀತಿಯಲ್ಲಿದ್ದರು. ಆದರೆ, ಸಿದ್ದಾರ್ಥ್ ಹೃದಯಾಘಾತದಿಂದ ನಿಧನ ಹೊಂದಿದರು. ಆ ಬಳಿಕ ಶೆಹನಾಜ್ ತುಂಬಾನೇ ನೊಂದುಕೊಂಡಿದ್ದರು. ಈಗ ಅವರು ಕೆಲಸಕ್ಕೆ ಮರಳಿದ್ದಾರೆ. ಇತ್ತೀಚೆಗೆ ತೆರೆಗೆ ಬಂದ ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾದಲ್ಲಿ ಅವರು ನಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:47 am, Mon, 22 May 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ