AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಪತಿ ಅತ್ಯಾಚಾರ ಮಾಡಿದ್ದಾರೆ’; ಸ್ಟಾರ್ ನಟನ ವಿರುದ್ಧ ಗುಡುಗಿದ ಪತ್ನಿ

 ನವಾಜುದ್ದೀನ್ ಹಾಗೂ ಆಲಿಯಾ ಮಧ್ಯೆ ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ, ಇತ್ತೀಚೆಗೆ ಇವರ ಸಂಬಂಧದಲ್ಲಿ ಬಿರುಕು ಕಾಣಿಸಿದೆ. ಇಬ್ಬರೂ ಬೇರೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ.

‘ನನ್ನ ಪತಿ ಅತ್ಯಾಚಾರ ಮಾಡಿದ್ದಾರೆ’; ಸ್ಟಾರ್ ನಟನ ವಿರುದ್ಧ ಗುಡುಗಿದ ಪತ್ನಿ
ಆಲಿಯಾ
ರಾಜೇಶ್ ದುಗ್ಗುಮನೆ
|

Updated on: Feb 25, 2023 | 3:13 PM

Share

ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ (Nawazuddin Siddiqui) ಮನೆ ಜಗಳ ಬೀದಿಗೆ ಬಂದು ಸಾಕಷ್ಟು ಸಮಯ ಕಳೆದಿದೆ. ಅವರ ಪತ್ನಿ ಆಲಿಯಾ ಸಿದ್ದಿಕಿ ಅವರು ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲು ಏರಿದ್ದಾರೆ. ಪತಿಯಿಂದ, ಪತಿಯ ಕುಟುಂಬದಿಂದ ಸಾಕಷ್ಟು ಕಿರುಕುಳ ಆಗುತ್ತಿದೆ ಎಂದು ಅವರು ಆರೋಪ ಮಾಡುತ್ತಿದ್ದಾರೆ. ಹೀಗಿರುವಾಗಲೇ ಪತಿಯ ವಿರುದ್ಧ ಆಲಿಯಾ (Aaliya Siddiqui) ಅವರು ಅತ್ಯಾಚಾರ ದೂರು ದಾಖಲು ಮಾಡಿದ್ದಾರೆ. 2009ರಲ್ಲಿ ನಡೆದ ಇವರ ವಿವಾಹ ಈಗ ವಿವಾದದ ಗೂಡಾಗಿದೆ.

ನವಾಜುದ್ದೀನ್ ಹಾಗೂ ಆಲಿಯಾ ಮಧ್ಯೆ ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ, ಇತ್ತೀಚೆಗೆ ಇವರ ಸಂಬಂಧದಲ್ಲಿ ಬಿರುಕು ಕಾಣಿಸಿದೆ. ಇಬ್ಬರೂ ಬೇರೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಮಧ್ಯೆ ನವಾಜುದ್ದೀನ್ ವಿರುದ್ಧ ಆಲಿಯಾ ಅವರು ಅತ್ಯಾಚಾರ ಕೇಸ್ ದಾಖಲು ಮಾಡಿದ್ದಾರೆ. ವರ್ಸೋವಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹಲವು ಬಗೆಯಲ್ಲಿ ಚರ್ಚೆಗಳು ನಡೆಯುತ್ತಿವೆ. ‘ಮಹಾನ್ ವ್ಯಕ್ತಿಯಾಗಲು ಪ್ರಯತ್ನಿಸಿದ ಮಹಾನ್ ನಟ. ಈಗ ಆ ನಟನ ವಿರುದ್ಧ ವರ್ಸೋವಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರು (ಪುರಾವೆಯೊಂದಿಗೆ) ದಾಖಲಾಗಿದೆ’ ಎಂದು ಆಲಿಯಾ ಹೇಳಿದ್ದಾರೆ.

ಮಕ್ಕಳನ್ನು ತಮ್ಮ ಹಸ್ತಾಂತರಕ್ಕೆ ನೀಡಬೇಕು ಎನ್ನುವ ವಿಚಾರದಲ್ಲಿ ಆಲಿಯಾ ಪರ ವಕೀಲರು ವಾದ ಮಂಡನೆ ಮಾಡುತ್ತಿದ್ದಾರೆ. ‘ಅವರು (ನವಾಜುದ್ದೀನ್​) ಮಕ್ಕಳನ್ನು ತಮಗೆ ನೀಡಬೇಕು ಎಂದು ಕೋರಿದ್ದಾರೆ. ಅವರಿಗೆ ಡೈಪರ್ ಅನ್ನು ಹೇಗೆ ಬದಲಿಸಬೇಕು ಎಂಬುದು ತಿಳಿದಿಲ್ಲ. ಇಂದು ನನ್ನಿಂದ ಮಕ್ಕಳನ್ನು ಕದ್ದು ಅವರು ಒಳ್ಳೆಯ ತಂದೆ ಎಂದು ತೋರಿಸಲು ಬಯಸುತ್ತಿದ್ದಾರೆ. ಹೇಡಿ ತಂದೆ. ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ತಾಯಿಯಿಂದ ಮಕ್ಕಳನ್ನು ಕದಿಯುತ್ತಿದ್ದಾರೆ. ಆದರೆ ಸರ್ವಶಕ್ತನಿಗೆ ದೊಡ್ಡ ಶಕ್ತಿ ಇದೆ ಎಂದು ಅವರಿಗೆ ತಿಳಿದಿಲ್ಲ’ ಎಂದು ಆಲಿಯಾ ಹೇಳಿದ್ದಾರೆ.

ಇದನ್ನೂ ಓದಿ
Image
Nawazuddin Siddiqui Birthday: ನವಾಜುದ್ದೀನ್ ಸಿದ್ದಿಕಿ ನಟನೆಯ ಈ ಕಿರುಚಿತ್ರಗಳನ್ನು ವೀಕ್ಷಿಸಿದ್ದೀರಾ? ಮಿಸ್ ಮಾಡಲೇಬೇಡಿ
Image
‘ಗೆದ್ದ ಸಿನಿಮಾವನ್ನು ಅತಿಯಾಗಿ ಹೊಗಳ್ತಾರೆ’: ಕೆಜಿಎಫ್​ 2, ಆರ್​ಆರ್​ಆರ್​ ಬಗ್ಗೆ ನವಾಜುದ್ದೀನ್​ ಸಿದ್ದಿಕಿ ಹೇಳಿಕೆ
Image
ಕನ್ನಡ ಚಿತ್ರರಂಗ ಉದಾಹರಿಸಿ ಬಾಲಿವುಡ್​ ಕಿವಿಹಿಂಡಿದ ನವಾಜುದ್ದೀನ್ ಸಿದ್ದಿಕಿ; ‘ಸೇಕ್ರೆಡ್ ಗೇಮ್ಸ್’ ನಟ ಹೇಳಿದ್ದೇನು?
Image
47ರ ಪ್ರಾಯದ ನಟನಿಗೆ 20ರ ಹರೆಯದ ನಟಿ ಜೋಡಿ; ಇದು ಸರಿ ಎಂದು ಸಮರ್ಥಿಸಿಕೊಂಡ ಕಂಗನಾ ರಣಾವತ್​

ಇದನ್ನೂ ಓದಿ: ನಟ ನವಾಜುದ್ದೀನ್ ಸಿದ್ದಿಕಿಯಿಂದ ಪತ್ನಿಗೆ ಚಿತ್ರಹಿಂಸೆ; ನ್ಯಾಯಾಲಯದಲ್ಲಿ ಕೇಸ್ ಮತ್ತಷ್ಟು ಸ್ಟ್ರಾಂಗ್  

ಈ ವಿಚಾರದಲ್ಲಿ ನವಾಜುದ್ದೀನ್ ಅವರು ನೇರವಾಗಿ ಪ್ರತಿಕ್ರಿಯೆ ನೀಡಿಲ್ಲ. ಬದಲಿಗೆ ‘ನನಗೆ ನನ್ನ ಮಕ್ಕಳು ಬೇಕು ಅಷ್ಟೇ. ಯಾರು ಏನೇ ಹೇಳಿದರೂ ತೊಂದರೆ ಇಲ್ಲ’ ಎಂದಷ್ಟೇ ನವಾಜುದ್ದೀನ್ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!