AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​ನ ಮೆಟ್ಟಿಲ ಮೇಲೆ ನಿಂತು ಪ್ರಯಾಣ ಮಾಡಿದ ನಯನತಾರಾ-ಸಮಂತಾ; ವಿಡಿಯೋ ವೈರಲ್​

ತಮಿಳಿನ ವಿಘ್ನೇಶ್​ ಶಿವನ್​ ನಿರ್ದೇಶನದ ‘ಕಾದು ವಾಕುಲಾ ರೆಂಡು ಕಾದು’ ಸಿನಿಮಾದಲ್ಲಿ ನಯನತಾರಾ, ವಿಜಯ್​ ಸೇತುಪತಿ ಹಾಗೂ ಸಮಂತಾ ನಟಿಸುತ್ತಿದ್ದಾರೆ.

ಬಸ್​ನ ಮೆಟ್ಟಿಲ ಮೇಲೆ ನಿಂತು ಪ್ರಯಾಣ ಮಾಡಿದ ನಯನತಾರಾ-ಸಮಂತಾ; ವಿಡಿಯೋ ವೈರಲ್​
ಬಸ್​ನ ಮೆಟ್ಟಿಲ ಮೇಲೆ ನಿಂತು ಪ್ರಯಾಣ ಮಾಡಿದ ನಯನತಾರಾ-ಸಮಂತಾ; ವಿಡಿಯೋ ವೈರಲ್​
TV9 Web
| Edited By: |

Updated on: Aug 24, 2021 | 3:26 PM

Share

ಸೆಲೆಬ್ರಿಟಿ ಪಟ್ಟ ಸಿಕ್ಕ ನಂತರದಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಕಾಣಿಸಿಕೊಳ್ಳುವುದು ಅಷ್ಟು ಸುಲಭದ ಮಾತಲ್ಲ. ಕಾರಣ, ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿರುತ್ತದೆ. ಪಬ್ಲಿಕ್​ನಲ್ಲಿ ಕಾಣಿಸಿಕೊಂಡರೆ ಅಭಿಮಾನಿಗಳು ಆಟೋಗ್ರಾಫ್​, ಸೆಲ್ಫಿ ಎಂದು ಮುಗಿ ಬೀಳುತ್ತಾರೆ. ಈ ಕಾರಣಕ್ಕೆ ಸೆಲೆಬ್ರಿಟಿಗಳು ಇಂಥ ಸಾಹಸಕ್ಕೆ ಮುಂದಾಗುವುದಿಲ್ಲ. ಆದರೆ, ಟಾಲಿವುಡ್​ ನಟಿ ಸಮಂತಾ ಅಕ್ಕಿನೇನಿ, ತಮಿಳು ಲೇಡಿ ಸೂಪರ್​ಸ್ಟಾರ್​ ನಯನತಾರಾ ಹಾಗೂ ನಟ ವಿಜಯ್​ ಸೇತುಪತಿ ಈಗ ಬಸ್​ನ ಮೆಟ್ಟಿಲ ಮೇಲೆ ನಿಂತು ಪ್ರಯಾಣ ಮಾಡಿದ್ದಾರೆ. ಸದ್ಯ, ಈ ವಿಡಿಯೋ ಸಖತ್​​ ವೈರಲ್​ ಆಗುತ್ತಿದೆ. ಹಾಗಂತ ಈ ಮೂವರು ಎಲ್ಲಿಯೋ ಪ್ರಯಾಣಕ್ಕೆ ಹೊರಟಿಲ್ಲ. ಬದಲಿಗೆ, ಸಿನಿಮಾಗಾಗಿ ಈ ರೀತಿ ಮಾಡಿದ್ದಾರೆ.

ತಮಿಳಿನ ವಿಘ್ನೇಶ್​ ಶಿವನ್​ ನಿರ್ದೇಶನದ ‘ಕಾದು ವಾಕುಲಾ ರೆಂಡು ಕಾದು’ ಸಿನಿಮಾದಲ್ಲಿ ನಯನತಾರಾ, ವಿಜಯ್​ ಸೇತುಪತಿ ಹಾಗೂ ಸಮಂತಾ ನಟಿಸುತ್ತಿದ್ದಾರೆ. ಈ ಮೂವರನ್ನು ಇದೇ ಮೊದಲ ಬಾರಿಗೆ ಒಂದೇ ಫ್ರೆಮ್​ನಲ್ಲಿ ತರಲಾಗಿದೆ. ಗೋವಾದಲ್ಲಿ ಸಿನಿಮಾ ಶೂಟಿಂಗ್ ಪ್ರಗತಿಯಲ್ಲಿದೆ. ಸದ್ಯ, ಸೆಟ್​ನ ವಿಡಿಯೋ ಲೀಕ್​ ಆಗಿದೆ. ಇದರಲ್ಲಿ, ಬಸ್​ ಫುಟ್​ಬೋರ್ಡ್​ ಮೇಲೆ ನಿಂತು ಈ ಮೂವರು ಸಾಗುತ್ತಿದ್ದಾರೆ.

ನಯನತಾರಾ ಹಾಗೂ ಸಮಂತಾ ಒಂದೇ ತೆರನಾದ ಸೀರೆ ಉಟ್ಟಿದ್ದಾರೆ. ವಿಜಯ್​ ಸೇತುಪತಿ ಬಿಳಿ ಬಣ್ಣದ ಶರ್ಟ್​ ತೊಟ್ಟು ಅದಕ್ಕೆ ಫಾರ್ಮಲ್​ ಪ್ಯಾಂಟ್​ ಧರಿಸಿದ್ದಾರೆ. ಈ ಸಿನಿಮಾ ರೆಟ್ರೋ ಲುಕ್​ನಲ್ಲಿ ಮೂಡಿ ಬರಲಿದೆ ಎನ್ನಲಾಗಿದೆ. ಸದ್ಯ, ಈ ವಿಡಿಯೋ ಸಾಕಷ್ಟು ವೈರಲ್​ ಆಗಿದೆ. ಸಿನಿಮಾ ದೃಶ್ಯಗಳು ಲೀಕ್​ ಆದ ಬಗ್ಗೆ ಚಿತ್ರತಂಡಕ್ಕೆ ಚಿಂತೆ ಕಾಡಿದೆ.

ವಿಘ್ನೇಶ್​ ಶಿವನ್​ ಮತ್ತು ನಯನತಾರಾ ನಡುವಿನ ಪ್ರೇಮ್​ ಕಹಾನಿ ಗುಟ್ಟಾಗಿ ಉಳಿದಿಲ್ಲ. ಪರಸ್ಪರ ಜೊತೆಯಾಗಿ ಕಾಲ ಕಳೆಯುತ್ತಿರುವ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಎಲ್ಲವನ್ನೂ ಬಹಿರಂಗ ಪಡಿಸಿದ್ದಾರೆ. ಅವರು ಗುಟ್ಟಾಗಿ ಎಂಗೇಜ್​ಮೆಂಟ್​ ಕೂಡ ಮಾಡಿಕೊಂಡಿದ್ದಾರೆ. ಈಗ ಇಬ್ಬರೂ ಮತ್ತೆ ಒಂದೇ ಸಿನಿಮಾದಲ್ಲಿ ಕೆಲಸ ಮಾಡುತ್ತಿರುವುದು ವಿಶೇಷ.

ಇದನ್ನೂ ಓದಿ:Nayanthara: ಗುಟ್ಟಾಗಿ ಎಂಗೇಜ್​ಮೆಂಟ್ ಆದ ನಯನತಾರಾ ಮದುವೆಗೆ ಎಲ್ಲರನ್ನೂ ಕರೀತಾರಂತೆ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ