AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​ನ ಮೆಟ್ಟಿಲ ಮೇಲೆ ನಿಂತು ಪ್ರಯಾಣ ಮಾಡಿದ ನಯನತಾರಾ-ಸಮಂತಾ; ವಿಡಿಯೋ ವೈರಲ್​

ತಮಿಳಿನ ವಿಘ್ನೇಶ್​ ಶಿವನ್​ ನಿರ್ದೇಶನದ ‘ಕಾದು ವಾಕುಲಾ ರೆಂಡು ಕಾದು’ ಸಿನಿಮಾದಲ್ಲಿ ನಯನತಾರಾ, ವಿಜಯ್​ ಸೇತುಪತಿ ಹಾಗೂ ಸಮಂತಾ ನಟಿಸುತ್ತಿದ್ದಾರೆ.

ಬಸ್​ನ ಮೆಟ್ಟಿಲ ಮೇಲೆ ನಿಂತು ಪ್ರಯಾಣ ಮಾಡಿದ ನಯನತಾರಾ-ಸಮಂತಾ; ವಿಡಿಯೋ ವೈರಲ್​
ಬಸ್​ನ ಮೆಟ್ಟಿಲ ಮೇಲೆ ನಿಂತು ಪ್ರಯಾಣ ಮಾಡಿದ ನಯನತಾರಾ-ಸಮಂತಾ; ವಿಡಿಯೋ ವೈರಲ್​
TV9 Web
| Edited By: |

Updated on: Aug 24, 2021 | 3:26 PM

Share

ಸೆಲೆಬ್ರಿಟಿ ಪಟ್ಟ ಸಿಕ್ಕ ನಂತರದಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಕಾಣಿಸಿಕೊಳ್ಳುವುದು ಅಷ್ಟು ಸುಲಭದ ಮಾತಲ್ಲ. ಕಾರಣ, ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿರುತ್ತದೆ. ಪಬ್ಲಿಕ್​ನಲ್ಲಿ ಕಾಣಿಸಿಕೊಂಡರೆ ಅಭಿಮಾನಿಗಳು ಆಟೋಗ್ರಾಫ್​, ಸೆಲ್ಫಿ ಎಂದು ಮುಗಿ ಬೀಳುತ್ತಾರೆ. ಈ ಕಾರಣಕ್ಕೆ ಸೆಲೆಬ್ರಿಟಿಗಳು ಇಂಥ ಸಾಹಸಕ್ಕೆ ಮುಂದಾಗುವುದಿಲ್ಲ. ಆದರೆ, ಟಾಲಿವುಡ್​ ನಟಿ ಸಮಂತಾ ಅಕ್ಕಿನೇನಿ, ತಮಿಳು ಲೇಡಿ ಸೂಪರ್​ಸ್ಟಾರ್​ ನಯನತಾರಾ ಹಾಗೂ ನಟ ವಿಜಯ್​ ಸೇತುಪತಿ ಈಗ ಬಸ್​ನ ಮೆಟ್ಟಿಲ ಮೇಲೆ ನಿಂತು ಪ್ರಯಾಣ ಮಾಡಿದ್ದಾರೆ. ಸದ್ಯ, ಈ ವಿಡಿಯೋ ಸಖತ್​​ ವೈರಲ್​ ಆಗುತ್ತಿದೆ. ಹಾಗಂತ ಈ ಮೂವರು ಎಲ್ಲಿಯೋ ಪ್ರಯಾಣಕ್ಕೆ ಹೊರಟಿಲ್ಲ. ಬದಲಿಗೆ, ಸಿನಿಮಾಗಾಗಿ ಈ ರೀತಿ ಮಾಡಿದ್ದಾರೆ.

ತಮಿಳಿನ ವಿಘ್ನೇಶ್​ ಶಿವನ್​ ನಿರ್ದೇಶನದ ‘ಕಾದು ವಾಕುಲಾ ರೆಂಡು ಕಾದು’ ಸಿನಿಮಾದಲ್ಲಿ ನಯನತಾರಾ, ವಿಜಯ್​ ಸೇತುಪತಿ ಹಾಗೂ ಸಮಂತಾ ನಟಿಸುತ್ತಿದ್ದಾರೆ. ಈ ಮೂವರನ್ನು ಇದೇ ಮೊದಲ ಬಾರಿಗೆ ಒಂದೇ ಫ್ರೆಮ್​ನಲ್ಲಿ ತರಲಾಗಿದೆ. ಗೋವಾದಲ್ಲಿ ಸಿನಿಮಾ ಶೂಟಿಂಗ್ ಪ್ರಗತಿಯಲ್ಲಿದೆ. ಸದ್ಯ, ಸೆಟ್​ನ ವಿಡಿಯೋ ಲೀಕ್​ ಆಗಿದೆ. ಇದರಲ್ಲಿ, ಬಸ್​ ಫುಟ್​ಬೋರ್ಡ್​ ಮೇಲೆ ನಿಂತು ಈ ಮೂವರು ಸಾಗುತ್ತಿದ್ದಾರೆ.

ನಯನತಾರಾ ಹಾಗೂ ಸಮಂತಾ ಒಂದೇ ತೆರನಾದ ಸೀರೆ ಉಟ್ಟಿದ್ದಾರೆ. ವಿಜಯ್​ ಸೇತುಪತಿ ಬಿಳಿ ಬಣ್ಣದ ಶರ್ಟ್​ ತೊಟ್ಟು ಅದಕ್ಕೆ ಫಾರ್ಮಲ್​ ಪ್ಯಾಂಟ್​ ಧರಿಸಿದ್ದಾರೆ. ಈ ಸಿನಿಮಾ ರೆಟ್ರೋ ಲುಕ್​ನಲ್ಲಿ ಮೂಡಿ ಬರಲಿದೆ ಎನ್ನಲಾಗಿದೆ. ಸದ್ಯ, ಈ ವಿಡಿಯೋ ಸಾಕಷ್ಟು ವೈರಲ್​ ಆಗಿದೆ. ಸಿನಿಮಾ ದೃಶ್ಯಗಳು ಲೀಕ್​ ಆದ ಬಗ್ಗೆ ಚಿತ್ರತಂಡಕ್ಕೆ ಚಿಂತೆ ಕಾಡಿದೆ.

ವಿಘ್ನೇಶ್​ ಶಿವನ್​ ಮತ್ತು ನಯನತಾರಾ ನಡುವಿನ ಪ್ರೇಮ್​ ಕಹಾನಿ ಗುಟ್ಟಾಗಿ ಉಳಿದಿಲ್ಲ. ಪರಸ್ಪರ ಜೊತೆಯಾಗಿ ಕಾಲ ಕಳೆಯುತ್ತಿರುವ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಎಲ್ಲವನ್ನೂ ಬಹಿರಂಗ ಪಡಿಸಿದ್ದಾರೆ. ಅವರು ಗುಟ್ಟಾಗಿ ಎಂಗೇಜ್​ಮೆಂಟ್​ ಕೂಡ ಮಾಡಿಕೊಂಡಿದ್ದಾರೆ. ಈಗ ಇಬ್ಬರೂ ಮತ್ತೆ ಒಂದೇ ಸಿನಿಮಾದಲ್ಲಿ ಕೆಲಸ ಮಾಡುತ್ತಿರುವುದು ವಿಶೇಷ.

ಇದನ್ನೂ ಓದಿ:Nayanthara: ಗುಟ್ಟಾಗಿ ಎಂಗೇಜ್​ಮೆಂಟ್ ಆದ ನಯನತಾರಾ ಮದುವೆಗೆ ಎಲ್ಲರನ್ನೂ ಕರೀತಾರಂತೆ

ಸುದೀಪ್ ಸರ್ ಈ ಕೂಲಿಂಗ್ ಗ್ಲಾಸ್ ಗಿಫ್ಟ್ ಕೇಳಿದ್ರು, ಕೊಡಲ್ಲ ಅಂದೆ: ಸತೀಶ್
ಸುದೀಪ್ ಸರ್ ಈ ಕೂಲಿಂಗ್ ಗ್ಲಾಸ್ ಗಿಫ್ಟ್ ಕೇಳಿದ್ರು, ಕೊಡಲ್ಲ ಅಂದೆ: ಸತೀಶ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ?
ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ?