AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಲಸಿಕೆ ವಿಚಾರದಲ್ಲಿ ಗೋಲ್​ಮಾಲ್​ ಮಾಡಿದ್ರಾ ನಯನತಾರಾ? ಫೋಟೋ ತೆರೆದಿಟ್ಟ ಅಸಲಿ ಕಥೆ ಇಲ್ಲಿದೆ

Covid Vaccine: ನಟಿ ನಯನತಾರಾ ಅವರು ಕೊವಿಡ್​ ಲಸಿಕೆ ಪಡೆದ ಬಳಿಕ ಆ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆದರೆ ಆ ಫೋಟೋ ಒಂದು ದೊಡ್ಡ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ನಯನತಾರಾಗೆ ಲಸಿಕೆ ಚುಚ್ಚುತ್ತಿರುವ ನರ್ಸ್​ ಕೈಯಲ್ಲಿ ಸಿರೆಂಜ್​ ಇಲ್ಲ ಎಂದು ನೆಟ್ಟಿಗರು ಅನುಮಾನ ಪಟ್ಟಿದ್ದಾರೆ.

ಕೊವಿಡ್​ ಲಸಿಕೆ ವಿಚಾರದಲ್ಲಿ ಗೋಲ್​ಮಾಲ್​ ಮಾಡಿದ್ರಾ ನಯನತಾರಾ? ಫೋಟೋ ತೆರೆದಿಟ್ಟ ಅಸಲಿ ಕಥೆ ಇಲ್ಲಿದೆ
ಕೊವಿಡ್ ಲಸಿಕೆ ಪಡೆದ ನಯನತಾರಾ
ಮದನ್​ ಕುಮಾರ್​
|

Updated on: May 20, 2021 | 8:19 AM

Share

ದೇಶಾದ್ಯಂತ ಕೊರೊನಾ ವೈರಸ್​ ಎರಡನೇ ಅಲೆ ಮಿತಿ ಮೀರಿ ಹಬ್ಬಿದೆ. ಜನಸಾಮಾನ್ಯರು ತುಂಬ ಕಷ್ಟಪಡುತ್ತಿದ್ದಾರೆ. ಸರಿಯಾದ ಸಮಯಕ್ಕೆ ಬೆಡ್​, ಆಕ್ಸಿಜನ್​ ಸಿಲಿಂಡರ್​ ಸಿಗದೇ ಸಾವಿರಾರು ಜನರು ಅಸುನೀಗುತ್ತಿದ್ದಾರೆ. ಸೆಲೆಬ್ರಿಟಿಗಳ ವಲಯದಲ್ಲೂ ಅನೇಕರು ಈ ಮಹಾಮಾರಿಗೆ ಬಲಿ ಆಗಿದ್ದಾರೆ. ಇಂಥ ಸಂದರ್ಭದಲ್ಲಿ ಎಲ್ಲರೂ ವ್ಯಾಕ್ಸಿನ್​ಗಾಗಿ ಮುಗಿಬೀಳುತ್ತಿದ್ದಾರೆ. ಕೊವಿಡ್​ನಿಂದ ರಕ್ಷಿಸಿಕೊಳ್ಳಲು ಲಸಿಕೆ ಪಡೆಯುವುದು ಸೂಕ್ತ ಮಾರ್ಗ ಎಂಬುದು ಎಲ್ಲರಿಗೂ ಅರ್ಥವಾಗಿದೆ. ಸೆಲೆಬ್ರಿಟಿಗಳು ಕೂಡ ಹರಿಬರಿಯಲ್ಲಿ ಲಸಿಕೆ ಪಡೆಯುತ್ತಿದ್ದಾರೆ. ಬಹುಭಾಷಾ ನಟಿ ನಯನತಾರಾ ಕೂಡ ಇತ್ತೀಚೆಗೆ ಲಸಿಕೆ ಪಡೆದುಕೊಂಡರು. ಆದರೆ ಅದು ಸೋಶಿಯಲ್​ ಮೀಡಿಯಾದಲ್ಲಿ ವಿವಾದ ಹುಟ್ಟುಹಾಕಿದೆ.

ಲಸಿಕೆ ಪಡೆದುಕೊಂಡ ಬಹುತೇಕರು ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಫೋಟೋಗಳನ್ನು ಹಾಕಿ ವಿಷಯ ಹಂಚಿಕೊಳ್ಳುತ್ತಿದ್ದಾರೆ. ಇತರರಿಗೂ ಲಸಿಕೆ ಪಡೆಯುವಂತೆ ಮನವೊಲಿಸುತ್ತಿದ್ದಾರೆ. ನಯನತಾರಾ ಕೂಡ ಅದನ್ನೇ ಮಾಡಿದರು. ಆದರೆ ಅವರು ಹಂಚಿಕೊಂಡ ಫೋಟೋ ಒಂದು ದೊಡ್ಡ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ನಯನತಾರಾಗೆ ಲಸಿಕೆ ಚುಚ್ಚುತ್ತಿರುವ ನರ್ಸ್​ ಕೈಯಲ್ಲಿ ಸಿರೆಂಜ್​ ಇಲ್ಲ ಎಂದು ನೆಟ್ಟಿಗರು ಅನುಮಾನ ಪಟ್ಟಿದ್ದಾರೆ.

ಲಸಿಕೆ ಪಡೆದುಕೊಂಡೆ ಎಂದು ನಯನತಾರ ನಟಿಸಿದ್ದಾರೆ. ನರ್ಸ್​ ಕೈಯಲ್ಲಿ ಸಿರೆಂಜ್​ ಇಲ್ಲ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ. ನಯನತಾರಾ ಜೊತೆ ಅವರ ಬಾಯ್​ಫ್ರೆಂಡ್​ ವಿಘ್ನೇಶ್​ ಶಿವನ್​ ಕೂಡ ಲಸಿಕೆ ಪಡೆದುಕೊಂಡಿದ್ದಾರೆ. ಅವರ ಫೋಟೋದಲ್ಲಿ ಸ್ಪಷ್ಟವಾಗಿ ಕಾಣುತ್ತಿರುವ ಸಿರೆಂಜ್​, ನಯನತಾರಾ ಫೋಟೋದಲ್ಲಿ ಕಾಣುತ್ತಿಲ್ಲ. ಹಾಗಾಗಿ ಈ ಬಗ್ಗೆ ಎಲ್ಲರಿಗೂ ಅನುಮಾನ ಮೂಡಿದೆ. ಆದರೆ ನಯನತಾರಾ ಅಭಿಮಾನಿಗಳು ಅವರನ್ನು ಬಿಟ್ಟುಕೊಟ್ಟಿಲ್ಲ.

ಆ ಫೋಟೋವನ್ನು ಜೂಮ್​ ಮಾಡಿ ನೋಡಿದಾಗ ಅದರಲ್ಲಿ ಸೂಜಿ ಕಾಣುತ್ತಿದೆ. ಸಿರೆಂಜ್​ ಚಿಕ್ಕದಾಗಿರುವುದರಿಂದ ಅದು ನರ್ಸ್​ ಕೈಯೊಳಗೆ ಅವಿತುಕೊಂಡಂತಿದೆ. ಹಾಗಾಗಿ ನಯನತಾರಾ ಹಂಚಿಕೊಂಡ ಫೋಟೋದಲ್ಲಿ ಸಿರೆಂಜ್​ ಕಾಣಿಸಿಲ್ಲ. ಅವರ ಬಾಯ್​ಫ್ರೆಂಡ್​ ಫೋಟೋವನ್ನು ಇನ್ನೊಂದು ಬದಿಯಿಂದ ಕ್ಲಿಕ್ಕಿಸಿರುವ ಕಾರಣ ಅದರಲ್ಲಿ ಸಿರೆಂಜ್​ ಸ್ಪಷ್ಟವಾಗಿ ಕಾಣುತ್ತಿದೆ ಎಂಬ ವಾದವನ್ನು ನಯನತಾರ ಅಭಿಮಾನಿಗಳು ಮುಂದಿಟ್ಟಿದ್ದಾರೆ. ಅಲ್ಲಿಗೆ ಎಲ್ಲ ಅನುಮಾನಗಳಿಗೆ ತೆರೆ ಎಳೆದಂತಾಗಿದೆ.

ಇದನ್ನೂ ಓದಿ:

ಅಭಿಮಾನಿಗಳಿಗೆ ಗುಟ್ಟಾಗಿ ಸಿಹಿ ಸುದ್ದಿ ನೀಡಿದ ನಯನತಾರಾ-ವಿಘ್ನೇಶ್​ ಶಿವನ್​!

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಜೋಡಿ.. ವೈವಾಹಿಕ ಜೀವನಕ್ಕೆ ಕಾಲಿಡಲು ರೆಡಿಯಾದ ನಯನತಾರಾ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್