AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈ ಶ್ರೀರಾಮ್’: ರಾಮನ ಬಗ್ಗೆ ವಿವಾದಾತ್ಮಕ ಡೈಲಾಗ್; ತಮ್ಮ ಸಿನಿಮಾ ಬಗ್ಗೆ ಮಾತನಾಡಿದ ನಯನತಾರಾ

‘ಅನ್ನಪೂರ್ಣಿ’ ಚಿತ್ರವನ್ನು ಒಟಿಟಿಯಿಂದ ತೆಗೆದು ಹಾಕಲಾಗಿದೆ. ಈ ಕುರಿತು ನಯನತಾರಾ ಮಾತನಾಡಿದ್ದಾರೆ. ‘ಜೈ ಶ್ರೀರಾಮ್’ ಎಂದು ಪೋಸ್ಟ್ ಆರಂಭಿಸಿರುವ ಅವರು ತಮ್ಮ ಅಭಿಪ್ರಾಯದ ಹೇಳಿದ್ದಾರೆ.

‘ಜೈ ಶ್ರೀರಾಮ್’: ರಾಮನ ಬಗ್ಗೆ ವಿವಾದಾತ್ಮಕ ಡೈಲಾಗ್; ತಮ್ಮ ಸಿನಿಮಾ ಬಗ್ಗೆ ಮಾತನಾಡಿದ ನಯನತಾರಾ
ನಯನತಾರಾ
ರಾಜೇಶ್ ದುಗ್ಗುಮನೆ
|

Updated on:Jan 19, 2024 | 10:09 AM

Share

ಇತ್ತೀಚೆಗೆ ‘ಅನ್ನಪೂರ್ಣಿ’ ಸಿನಿಮಾ (Annapoorni Movie) ರಿಲೀಸ್ ಆಗಿ ಯಶಸ್ಸು ಕಂಡಿದೆ. ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆದ ಬಳಿಕ ಸಿನಿಮಾದ ಒಂದು ದೃಶ್ಯ ಸಾಕಷ್ಟು ಕಾಂಟ್ರವರ್ಸಿ ಉಂಟು ಮಾಡಿತ್ತು. ‘ರಾಮನೂ ಮಾಂಸಾಹಾರ ಸೇವನೆ ಮಾಡಿದ್ದ’ ಎಂಬ ಹೇಳಿಕೆ ಚರ್ಚೆ ಹುಟ್ಟುಹಾಕಿತ್ತು. ಈ ಚಿತ್ರವನ್ನು ಒಟಿಟಿಯಿಂದ ತೆಗೆದು ಹಾಕಲಾಗಿದೆ. ಈ ಕುರಿತು ನಯನತಾರಾ ಅವರು ಮಾತನಾಡಿದ್ದಾರೆ. ‘ಜೈ ಶ್ರೀರಾಮ್’ ಎಂದು ಪೋಸ್ಟ್ ಆರಂಭಿಸಿರುವ ಅವರು ತಮ್ಮ ಅಭಿಪ್ರಾಯದ ಬಗ್ಗೆ ಬರೆದುಕೊಂಡಿದ್ದಾರೆ.

‘ನಾನು ಭಾರವಾದ ಹೃದಯದಿಂದ ಮತ್ತು ಸತ್ಯದ ಆಧಾರದ ಮೇಲೆ ಈ ಬರಹ ಬರೆಯುತ್ತಿದ್ದೇನೆ. ಇತ್ತೀಚಿನ ದಿನಗಳಲ್ಲಿ ನಮ್ಮ ಅನ್ನಪೂರ್ಣಿ ಚಿತ್ರ ಮಾಡಿದ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲರನ್ನು ಉದ್ದೇಶಿಸಿ ನನ್ನ ಅಭಿಪ್ರಾಯ ಹಂಚಿಕೊಳ್ಳಲು ಬಯಸುತ್ತೇನೆ. ಸಿನಿಮಾ ಮಾಡುವುದು ಎಂದರೆ ಕೇವಲ ಆರ್ಥಿಕ ಲಾಭಕ್ಕೆ ಮಾತ್ರವಲ್ಲದೆ ಒಂದು ಸಂದೇಶ ತಿಳಿಸುವ ಉದ್ದೇಶವೂ ಇರುತ್ತದೆ. ಅನ್ನಪೂರ್ಣಿಯ ಬಗ್ಗೆ ನಾನು ಹೇಳುವುದೇನೆಂದರೆ, ಈ ಸಿನಿಮಾನ ಮುಗ್ಧ ಮನಸ್ಸಿನಿಂದ ಮಾಡಲಾಗಿದೆ. ನಮ್ಮ ಜೀವನದಲ್ಲಿ ಏನು ನಡೆಯುತ್ತಿದೆಯೋ ಅದನ್ನೇ ತೋರಿಸುವುದು ಈ ಸಿನಿಮಾ ಉದ್ದೇಶ’ ಎಂದು ಬರಹ ಆರಂಭಿಸಿದ್ದಾರೆ ನಯನತಾರಾ.

‘ಸಕಾರಾತ್ಮಕ ಸಂದೇಶವನ್ನು ರವಾನಿಸುವ ನಮ್ಮ ಪ್ರಾಮಾಣಿಕ ಪ್ರಯತ್ನದಲ್ಲಿ ಗೊತ್ತಿಲ್ಲದೆ ನಾವು ನಿಮ್ಮ ಭಾವನೆಗಳನ್ನು ನೋಯಿಸಿದ್ದೇವೆ. ಸೆನ್ಸಾರ್ ಆದ ನಮ್ಮ ಸಿನಿಮಾ ಥಿಯೇಟರ್​ನಲ್ಲಿ ರಿಲೀಸ್ ಆಗಿ ಒಟಿಟಿಯಲ್ಲಿ ಬಿಡುಗಡೆ ಆಯಿತು. ಅದನ್ನು OTTಯಿಂದ ತೆಗೆದು ಹಾಕುತ್ತಾರೆ ಎಂದು ನಾವು ಅಂದುಕೊಂಡಿರಲಿಲ್ಲ. ಯಾರ ಭಾವನೆ ಅಥವಾ ನಂಬಿಕೆಗೆ ಧಕ್ಕೆ ತರುವುದು ನನ್ನ ತಂಡದ ಉದ್ದೇಶ ಆಗಿರಲಿಲ್ಲ. ನಾನು ದೇವರಲ್ಲಿ ಸಂಪೂರ್ಣ ನಂಬಿಕೆಯನ್ನು ಹೊಂದಿರುವ ಮತ್ತು ದೇಶಾದ್ಯಂತ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ವ್ಯಕ್ತಿ. ನಿಮ್ಮ ಭಾವನೆಗಳಿಗೆ ನೋವುಂಟು ಮಾಡಿದ ಎಲ್ಲ ಜನರಲ್ಲಿ ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಅನ್ನಪೂರ್ಣಿ’ ವಿವಾದ, ನಯನತಾರಾ ಬೆಂಬಲಕ್ಕೆ ವೆಟ್ರಿಮಾರನ್

‘ಅನ್ನಪೂರ್ಣಿ ಸಿನಿಮಾ ಮಾಡಿದ್ದರ ಹಿಂದಿನ ಉದ್ದೇಶವು ಜನರನ್ನು ಮೇಲಕ್ಕೆತ್ತುವುದು ಮತ್ತು ಪ್ರೇರೇಪಿಸುವುದು, ನೋಯಿಸುವುದಲ್ಲ. ಕಳೆದ ಎರಡು ದಶಕಗಳಿಂದ ಚಲನಚಿತ್ರೋದ್ಯಮದಲ್ಲಿ ಇರುವ ನಾನು ಒಂದು ಉದ್ದೇಶ ಇಟ್ಟುಕೊಂಡಿದ್ದೇನೆ. ಪರಸ್ಪರ ಕಲಿಯುವುದು ಮತ್ತು ಸಕಾರಾತ್ಮಕತೆಯನ್ನು ಹೆಚ್ಚಿಸುವುದು’ ಎಂದು ನಯನತಾರಾ ಪತ್ರ ಪೂರ್ಣಗೊಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:33 am, Fri, 19 January 24

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್