AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಘ್ನೇಶ್ ಶಿವನ್​ನಿಂದ ವಿಚ್ಛೇದನ ಪಡೆಯೋ ವಿಚಾರ: ನಯನತಾರಾ ಕಡೆಯಿಂದಲೇ ಸಿಕ್ತು ಸ್ಪಷ್ಟನೆ

ಸೆಲೆಬ್ರಿಟಿ ದಂಪತಿಗಳ ಮೇಲೆ ಫ್ಯಾನ್ಸ್ ಕಣ್ಣಿಟ್ಟಿರುತ್ತಾರೆ. ಅವರು ಮಾಡುವ ಸಣ್ಣ ಪುಟ್ಟ ವಿಚಾರಗಳ ಮೇಲೆ ಎಲ್ಲರೂ ಗಮನ ಹರಿಸುತ್ತಾರೆ. ಇತ್ತೀಚೆಗೆ ನಯನತಾರಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ವಿಘ್ನೇಶ್ ಅವರನ್ನು ಅನ್​ಪಾಲೋ ಮಾಡಿದ್ದು ಅಭಿಮಾನಿಗಳ ಗಮನಕ್ಕೆ ಬಂದಿತ್ತು. ಈ ಬಗ್ಗೆ ಚರ್ಚೆ ಆಯಿತು.

ವಿಘ್ನೇಶ್ ಶಿವನ್​ನಿಂದ ವಿಚ್ಛೇದನ ಪಡೆಯೋ ವಿಚಾರ: ನಯನತಾರಾ ಕಡೆಯಿಂದಲೇ ಸಿಕ್ತು ಸ್ಪಷ್ಟನೆ
ನಯನಾ-ವಿಗ್ನೇಶ್
ರಾಜೇಶ್ ದುಗ್ಗುಮನೆ
|

Updated on: Mar 06, 2024 | 12:37 PM

Share

ವಿಘ್ನೇಶ್ ಶಿವನ್ ಹಾಗೂ ನಯನತಾರಾ (Nayanthara) ವಿಚ್ಛೇದನ ಪಡೆಯುತ್ತಾರೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಇದಕ್ಕೆ ಕಾರಣ ಆಗಿದ್ದು ನಯನತಾರಾ ಅವರ ನಡೆ. ನಯನತಾರಾ ಅವರು ವಿಘ್ನೇಶ್ ಶಿವನ್ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಅನ್​ಫಾಲೋ ಮಾಡಿದ್ದರು. ಹೀಗೇಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಹುಟ್ಟಿತ್ತು. ಕೆಲವು ಮಾಧ್ಯಮಗಳು ವಿಚ್ಛೇದನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಈಗ ನಯನತಾರಾ ಕಡೆಯಿಂದಲೇ ಈ ಬಗ್ಗೆ ಸ್ಪಷ್ಟನೆ ಸಿಕ್ಕಿದೆ.

ಸೆಲೆಬ್ರಿಟಿ ದಂಪತಿಗಳ ಮೇಲೆ ಫ್ಯಾನ್ಸ್ ಕಣ್ಣಿಟ್ಟಿರುತ್ತಾರೆ. ಅವರು ಮಾಡುವ ಸಣ್ಣ ಪುಟ್ಟ ವಿಚಾರಗಳ ಮೇಲೆ ಎಲ್ಲರೂ ಗಮನ ಹರಿಸುತ್ತಾರೆ. ಇತ್ತೀಚೆಗೆ ನಯನತಾರಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ವಿಘ್ನೇಶ್ ಅವರನ್ನು ಅನ್​ಪಾಲೋ ಮಾಡಿದ್ದು ಅಭಿಮಾನಿಗಳ ಗಮನಕ್ಕೆ ಬಂದಿತ್ತು. ಈ ಬಗ್ಗೆ ಚರ್ಚೆ ಆಯಿತು. ಕೆಲವೇ ಸಮಯದಲ್ಲಿ ಅವರು ಮತ್ತೆ ಫಾಲೋ ಮಾಡೋಕೆ ಆರಂಭಿಸಿದ್ದರು.

ಕೊಳಲು ವಾದಕ ನವೀನ್ ಅವರು ಹಳೆಯ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಅವರು ಕೊಳಲು ನುಡಿಸುತ್ತಿರುವಾಗ ನಯನತಾರಾ ಹಾಗೂ ವಿಘ್ನೇಶ್ ಅವರು ಪ್ರೀತಿಯಿಂದ ಇದನ್ನು ಕೇಳಿದ್ದಾರೆ. ಈ ಘಟನೆ ನಡೆದಿದ್ದು 2023ರ ಜೂನ್ ತಿಂಗಳಲ್ಲಿ. ಈ ವಿಡಿಯೋನ ನವೀನ್ ಈಗ ಹಂಚಿಕೊಂಡಿದ್ದಾರೆ. ಇದನ್ನು ನಯನತಾರಾ ಅವರು ಸ್ಟೇಟಸ್​ಗೆ ಹಂಚಿಕೊಂಡು ಹಾರ್ಟ್ ಮಾರ್ಕ್ ಹಾಕಿದ್ದಾರೆ. ಈ ಮೂಲಕ ಎಲ್ಲವೂ ಸರಿ ಇದೆ ಎಂಬದನ್ನು ಸ್ಪಷ್ಟಪಡಿಸಿದ್ದಾರೆ.

ನಯನತಾರಾ ಅವರಿಗೆ ನಟಿಯಾಗಿ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇದೆ. ‘ಜವಾನ್’ ಚಿತ್ರದಿಂದ ಅವರಿಗೆ ದೊಡ್ಡ ಗೆಲುವು ಸಿಕ್ಕಿದೆ. ಈ ಸಿನಿಮಾ ಸೂಪರ್ ಹಿಟ್ ಆಗಿದೆ. ಮೊದಲ ಸಿನಿಮಾದಲ್ಲೇ ಅವರಿಗೆ ಬಾಲಿವುಡ್​ನಲ್ಲಿ ಗೆಲುವು ಸಿಕ್ಕಂತೆ ಆಗಿದೆ. ಇದರ ಜೊತೆಗೆ ಅವರು ಹೊಸಬರ ಸಿನಿಮಾಗಳನ್ನು ಕೂಡ ಒಪ್ಪಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: ನಯನತಾರಾ ಹಾಗೂ ವಿಘ್ನೇಶ್ ಸಂಸಾರದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು

2022ರ ಜೂನ್ 9ರಂದು ನಯನತಾರಾ ಹಾಗೂ ವಿಘ್ನೇಶ್ ಶಿವನ್ ಸಿಂಪಲ್ ಆಗಿ ಮದುವೆ ಆದರು. ನಾಲ್ಕೇ ತಿಂಗಳಲ್ಲಿ ಅವರಿಗೆ ಮಗು ಜನಿಸಿದ ಬಗ್ಗೆ ಮಾಹಿತಿ ಸಿಕ್ಕಿತ್ತು. ಬಾಡಿಗೆ ತಾಯ್ತನದ ಮೂಲಕ ಈ ದಂಪತಿ ಅವಳಿ ಮಕ್ಕಳನ್ನು ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ