AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಘ್ನೇಶ್ ಶಿವನ್​ನಿಂದ ವಿಚ್ಛೇದನ ಪಡೆಯೋ ವಿಚಾರ: ನಯನತಾರಾ ಕಡೆಯಿಂದಲೇ ಸಿಕ್ತು ಸ್ಪಷ್ಟನೆ

ಸೆಲೆಬ್ರಿಟಿ ದಂಪತಿಗಳ ಮೇಲೆ ಫ್ಯಾನ್ಸ್ ಕಣ್ಣಿಟ್ಟಿರುತ್ತಾರೆ. ಅವರು ಮಾಡುವ ಸಣ್ಣ ಪುಟ್ಟ ವಿಚಾರಗಳ ಮೇಲೆ ಎಲ್ಲರೂ ಗಮನ ಹರಿಸುತ್ತಾರೆ. ಇತ್ತೀಚೆಗೆ ನಯನತಾರಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ವಿಘ್ನೇಶ್ ಅವರನ್ನು ಅನ್​ಪಾಲೋ ಮಾಡಿದ್ದು ಅಭಿಮಾನಿಗಳ ಗಮನಕ್ಕೆ ಬಂದಿತ್ತು. ಈ ಬಗ್ಗೆ ಚರ್ಚೆ ಆಯಿತು.

ವಿಘ್ನೇಶ್ ಶಿವನ್​ನಿಂದ ವಿಚ್ಛೇದನ ಪಡೆಯೋ ವಿಚಾರ: ನಯನತಾರಾ ಕಡೆಯಿಂದಲೇ ಸಿಕ್ತು ಸ್ಪಷ್ಟನೆ
ನಯನಾ-ವಿಗ್ನೇಶ್
ರಾಜೇಶ್ ದುಗ್ಗುಮನೆ
|

Updated on: Mar 06, 2024 | 12:37 PM

Share

ವಿಘ್ನೇಶ್ ಶಿವನ್ ಹಾಗೂ ನಯನತಾರಾ (Nayanthara) ವಿಚ್ಛೇದನ ಪಡೆಯುತ್ತಾರೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಇದಕ್ಕೆ ಕಾರಣ ಆಗಿದ್ದು ನಯನತಾರಾ ಅವರ ನಡೆ. ನಯನತಾರಾ ಅವರು ವಿಘ್ನೇಶ್ ಶಿವನ್ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಅನ್​ಫಾಲೋ ಮಾಡಿದ್ದರು. ಹೀಗೇಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಹುಟ್ಟಿತ್ತು. ಕೆಲವು ಮಾಧ್ಯಮಗಳು ವಿಚ್ಛೇದನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಈಗ ನಯನತಾರಾ ಕಡೆಯಿಂದಲೇ ಈ ಬಗ್ಗೆ ಸ್ಪಷ್ಟನೆ ಸಿಕ್ಕಿದೆ.

ಸೆಲೆಬ್ರಿಟಿ ದಂಪತಿಗಳ ಮೇಲೆ ಫ್ಯಾನ್ಸ್ ಕಣ್ಣಿಟ್ಟಿರುತ್ತಾರೆ. ಅವರು ಮಾಡುವ ಸಣ್ಣ ಪುಟ್ಟ ವಿಚಾರಗಳ ಮೇಲೆ ಎಲ್ಲರೂ ಗಮನ ಹರಿಸುತ್ತಾರೆ. ಇತ್ತೀಚೆಗೆ ನಯನತಾರಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ವಿಘ್ನೇಶ್ ಅವರನ್ನು ಅನ್​ಪಾಲೋ ಮಾಡಿದ್ದು ಅಭಿಮಾನಿಗಳ ಗಮನಕ್ಕೆ ಬಂದಿತ್ತು. ಈ ಬಗ್ಗೆ ಚರ್ಚೆ ಆಯಿತು. ಕೆಲವೇ ಸಮಯದಲ್ಲಿ ಅವರು ಮತ್ತೆ ಫಾಲೋ ಮಾಡೋಕೆ ಆರಂಭಿಸಿದ್ದರು.

ಕೊಳಲು ವಾದಕ ನವೀನ್ ಅವರು ಹಳೆಯ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಅವರು ಕೊಳಲು ನುಡಿಸುತ್ತಿರುವಾಗ ನಯನತಾರಾ ಹಾಗೂ ವಿಘ್ನೇಶ್ ಅವರು ಪ್ರೀತಿಯಿಂದ ಇದನ್ನು ಕೇಳಿದ್ದಾರೆ. ಈ ಘಟನೆ ನಡೆದಿದ್ದು 2023ರ ಜೂನ್ ತಿಂಗಳಲ್ಲಿ. ಈ ವಿಡಿಯೋನ ನವೀನ್ ಈಗ ಹಂಚಿಕೊಂಡಿದ್ದಾರೆ. ಇದನ್ನು ನಯನತಾರಾ ಅವರು ಸ್ಟೇಟಸ್​ಗೆ ಹಂಚಿಕೊಂಡು ಹಾರ್ಟ್ ಮಾರ್ಕ್ ಹಾಕಿದ್ದಾರೆ. ಈ ಮೂಲಕ ಎಲ್ಲವೂ ಸರಿ ಇದೆ ಎಂಬದನ್ನು ಸ್ಪಷ್ಟಪಡಿಸಿದ್ದಾರೆ.

ನಯನತಾರಾ ಅವರಿಗೆ ನಟಿಯಾಗಿ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇದೆ. ‘ಜವಾನ್’ ಚಿತ್ರದಿಂದ ಅವರಿಗೆ ದೊಡ್ಡ ಗೆಲುವು ಸಿಕ್ಕಿದೆ. ಈ ಸಿನಿಮಾ ಸೂಪರ್ ಹಿಟ್ ಆಗಿದೆ. ಮೊದಲ ಸಿನಿಮಾದಲ್ಲೇ ಅವರಿಗೆ ಬಾಲಿವುಡ್​ನಲ್ಲಿ ಗೆಲುವು ಸಿಕ್ಕಂತೆ ಆಗಿದೆ. ಇದರ ಜೊತೆಗೆ ಅವರು ಹೊಸಬರ ಸಿನಿಮಾಗಳನ್ನು ಕೂಡ ಒಪ್ಪಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: ನಯನತಾರಾ ಹಾಗೂ ವಿಘ್ನೇಶ್ ಸಂಸಾರದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು

2022ರ ಜೂನ್ 9ರಂದು ನಯನತಾರಾ ಹಾಗೂ ವಿಘ್ನೇಶ್ ಶಿವನ್ ಸಿಂಪಲ್ ಆಗಿ ಮದುವೆ ಆದರು. ನಾಲ್ಕೇ ತಿಂಗಳಲ್ಲಿ ಅವರಿಗೆ ಮಗು ಜನಿಸಿದ ಬಗ್ಗೆ ಮಾಹಿತಿ ಸಿಕ್ಕಿತ್ತು. ಬಾಡಿಗೆ ತಾಯ್ತನದ ಮೂಲಕ ಈ ದಂಪತಿ ಅವಳಿ ಮಕ್ಕಳನ್ನು ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ