AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಘ್ನೇಶ್ ಶಿವನ್​ನಿಂದ ವಿಚ್ಛೇದನ ಪಡೆಯೋ ವಿಚಾರ: ನಯನತಾರಾ ಕಡೆಯಿಂದಲೇ ಸಿಕ್ತು ಸ್ಪಷ್ಟನೆ

ಸೆಲೆಬ್ರಿಟಿ ದಂಪತಿಗಳ ಮೇಲೆ ಫ್ಯಾನ್ಸ್ ಕಣ್ಣಿಟ್ಟಿರುತ್ತಾರೆ. ಅವರು ಮಾಡುವ ಸಣ್ಣ ಪುಟ್ಟ ವಿಚಾರಗಳ ಮೇಲೆ ಎಲ್ಲರೂ ಗಮನ ಹರಿಸುತ್ತಾರೆ. ಇತ್ತೀಚೆಗೆ ನಯನತಾರಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ವಿಘ್ನೇಶ್ ಅವರನ್ನು ಅನ್​ಪಾಲೋ ಮಾಡಿದ್ದು ಅಭಿಮಾನಿಗಳ ಗಮನಕ್ಕೆ ಬಂದಿತ್ತು. ಈ ಬಗ್ಗೆ ಚರ್ಚೆ ಆಯಿತು.

ವಿಘ್ನೇಶ್ ಶಿವನ್​ನಿಂದ ವಿಚ್ಛೇದನ ಪಡೆಯೋ ವಿಚಾರ: ನಯನತಾರಾ ಕಡೆಯಿಂದಲೇ ಸಿಕ್ತು ಸ್ಪಷ್ಟನೆ
ನಯನಾ-ವಿಗ್ನೇಶ್
ರಾಜೇಶ್ ದುಗ್ಗುಮನೆ
|

Updated on: Mar 06, 2024 | 12:37 PM

Share

ವಿಘ್ನೇಶ್ ಶಿವನ್ ಹಾಗೂ ನಯನತಾರಾ (Nayanthara) ವಿಚ್ಛೇದನ ಪಡೆಯುತ್ತಾರೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಇದಕ್ಕೆ ಕಾರಣ ಆಗಿದ್ದು ನಯನತಾರಾ ಅವರ ನಡೆ. ನಯನತಾರಾ ಅವರು ವಿಘ್ನೇಶ್ ಶಿವನ್ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಅನ್​ಫಾಲೋ ಮಾಡಿದ್ದರು. ಹೀಗೇಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಹುಟ್ಟಿತ್ತು. ಕೆಲವು ಮಾಧ್ಯಮಗಳು ವಿಚ್ಛೇದನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಈಗ ನಯನತಾರಾ ಕಡೆಯಿಂದಲೇ ಈ ಬಗ್ಗೆ ಸ್ಪಷ್ಟನೆ ಸಿಕ್ಕಿದೆ.

ಸೆಲೆಬ್ರಿಟಿ ದಂಪತಿಗಳ ಮೇಲೆ ಫ್ಯಾನ್ಸ್ ಕಣ್ಣಿಟ್ಟಿರುತ್ತಾರೆ. ಅವರು ಮಾಡುವ ಸಣ್ಣ ಪುಟ್ಟ ವಿಚಾರಗಳ ಮೇಲೆ ಎಲ್ಲರೂ ಗಮನ ಹರಿಸುತ್ತಾರೆ. ಇತ್ತೀಚೆಗೆ ನಯನತಾರಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ವಿಘ್ನೇಶ್ ಅವರನ್ನು ಅನ್​ಪಾಲೋ ಮಾಡಿದ್ದು ಅಭಿಮಾನಿಗಳ ಗಮನಕ್ಕೆ ಬಂದಿತ್ತು. ಈ ಬಗ್ಗೆ ಚರ್ಚೆ ಆಯಿತು. ಕೆಲವೇ ಸಮಯದಲ್ಲಿ ಅವರು ಮತ್ತೆ ಫಾಲೋ ಮಾಡೋಕೆ ಆರಂಭಿಸಿದ್ದರು.

ಕೊಳಲು ವಾದಕ ನವೀನ್ ಅವರು ಹಳೆಯ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಅವರು ಕೊಳಲು ನುಡಿಸುತ್ತಿರುವಾಗ ನಯನತಾರಾ ಹಾಗೂ ವಿಘ್ನೇಶ್ ಅವರು ಪ್ರೀತಿಯಿಂದ ಇದನ್ನು ಕೇಳಿದ್ದಾರೆ. ಈ ಘಟನೆ ನಡೆದಿದ್ದು 2023ರ ಜೂನ್ ತಿಂಗಳಲ್ಲಿ. ಈ ವಿಡಿಯೋನ ನವೀನ್ ಈಗ ಹಂಚಿಕೊಂಡಿದ್ದಾರೆ. ಇದನ್ನು ನಯನತಾರಾ ಅವರು ಸ್ಟೇಟಸ್​ಗೆ ಹಂಚಿಕೊಂಡು ಹಾರ್ಟ್ ಮಾರ್ಕ್ ಹಾಕಿದ್ದಾರೆ. ಈ ಮೂಲಕ ಎಲ್ಲವೂ ಸರಿ ಇದೆ ಎಂಬದನ್ನು ಸ್ಪಷ್ಟಪಡಿಸಿದ್ದಾರೆ.

ನಯನತಾರಾ ಅವರಿಗೆ ನಟಿಯಾಗಿ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇದೆ. ‘ಜವಾನ್’ ಚಿತ್ರದಿಂದ ಅವರಿಗೆ ದೊಡ್ಡ ಗೆಲುವು ಸಿಕ್ಕಿದೆ. ಈ ಸಿನಿಮಾ ಸೂಪರ್ ಹಿಟ್ ಆಗಿದೆ. ಮೊದಲ ಸಿನಿಮಾದಲ್ಲೇ ಅವರಿಗೆ ಬಾಲಿವುಡ್​ನಲ್ಲಿ ಗೆಲುವು ಸಿಕ್ಕಂತೆ ಆಗಿದೆ. ಇದರ ಜೊತೆಗೆ ಅವರು ಹೊಸಬರ ಸಿನಿಮಾಗಳನ್ನು ಕೂಡ ಒಪ್ಪಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: ನಯನತಾರಾ ಹಾಗೂ ವಿಘ್ನೇಶ್ ಸಂಸಾರದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು

2022ರ ಜೂನ್ 9ರಂದು ನಯನತಾರಾ ಹಾಗೂ ವಿಘ್ನೇಶ್ ಶಿವನ್ ಸಿಂಪಲ್ ಆಗಿ ಮದುವೆ ಆದರು. ನಾಲ್ಕೇ ತಿಂಗಳಲ್ಲಿ ಅವರಿಗೆ ಮಗು ಜನಿಸಿದ ಬಗ್ಗೆ ಮಾಹಿತಿ ಸಿಕ್ಕಿತ್ತು. ಬಾಡಿಗೆ ತಾಯ್ತನದ ಮೂಲಕ ಈ ದಂಪತಿ ಅವಳಿ ಮಕ್ಕಳನ್ನು ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ