AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಘ್ನೇಶ್ ಶಿವನ್​ನಿಂದ ವಿಚ್ಛೇದನ ಪಡೆಯೋ ವಿಚಾರ: ನಯನತಾರಾ ಕಡೆಯಿಂದಲೇ ಸಿಕ್ತು ಸ್ಪಷ್ಟನೆ

ಸೆಲೆಬ್ರಿಟಿ ದಂಪತಿಗಳ ಮೇಲೆ ಫ್ಯಾನ್ಸ್ ಕಣ್ಣಿಟ್ಟಿರುತ್ತಾರೆ. ಅವರು ಮಾಡುವ ಸಣ್ಣ ಪುಟ್ಟ ವಿಚಾರಗಳ ಮೇಲೆ ಎಲ್ಲರೂ ಗಮನ ಹರಿಸುತ್ತಾರೆ. ಇತ್ತೀಚೆಗೆ ನಯನತಾರಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ವಿಘ್ನೇಶ್ ಅವರನ್ನು ಅನ್​ಪಾಲೋ ಮಾಡಿದ್ದು ಅಭಿಮಾನಿಗಳ ಗಮನಕ್ಕೆ ಬಂದಿತ್ತು. ಈ ಬಗ್ಗೆ ಚರ್ಚೆ ಆಯಿತು.

ವಿಘ್ನೇಶ್ ಶಿವನ್​ನಿಂದ ವಿಚ್ಛೇದನ ಪಡೆಯೋ ವಿಚಾರ: ನಯನತಾರಾ ಕಡೆಯಿಂದಲೇ ಸಿಕ್ತು ಸ್ಪಷ್ಟನೆ
ನಯನಾ-ವಿಗ್ನೇಶ್
ರಾಜೇಶ್ ದುಗ್ಗುಮನೆ
|

Updated on: Mar 06, 2024 | 12:37 PM

Share

ವಿಘ್ನೇಶ್ ಶಿವನ್ ಹಾಗೂ ನಯನತಾರಾ (Nayanthara) ವಿಚ್ಛೇದನ ಪಡೆಯುತ್ತಾರೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಇದಕ್ಕೆ ಕಾರಣ ಆಗಿದ್ದು ನಯನತಾರಾ ಅವರ ನಡೆ. ನಯನತಾರಾ ಅವರು ವಿಘ್ನೇಶ್ ಶಿವನ್ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಅನ್​ಫಾಲೋ ಮಾಡಿದ್ದರು. ಹೀಗೇಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಹುಟ್ಟಿತ್ತು. ಕೆಲವು ಮಾಧ್ಯಮಗಳು ವಿಚ್ಛೇದನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಈಗ ನಯನತಾರಾ ಕಡೆಯಿಂದಲೇ ಈ ಬಗ್ಗೆ ಸ್ಪಷ್ಟನೆ ಸಿಕ್ಕಿದೆ.

ಸೆಲೆಬ್ರಿಟಿ ದಂಪತಿಗಳ ಮೇಲೆ ಫ್ಯಾನ್ಸ್ ಕಣ್ಣಿಟ್ಟಿರುತ್ತಾರೆ. ಅವರು ಮಾಡುವ ಸಣ್ಣ ಪುಟ್ಟ ವಿಚಾರಗಳ ಮೇಲೆ ಎಲ್ಲರೂ ಗಮನ ಹರಿಸುತ್ತಾರೆ. ಇತ್ತೀಚೆಗೆ ನಯನತಾರಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ವಿಘ್ನೇಶ್ ಅವರನ್ನು ಅನ್​ಪಾಲೋ ಮಾಡಿದ್ದು ಅಭಿಮಾನಿಗಳ ಗಮನಕ್ಕೆ ಬಂದಿತ್ತು. ಈ ಬಗ್ಗೆ ಚರ್ಚೆ ಆಯಿತು. ಕೆಲವೇ ಸಮಯದಲ್ಲಿ ಅವರು ಮತ್ತೆ ಫಾಲೋ ಮಾಡೋಕೆ ಆರಂಭಿಸಿದ್ದರು.

ಕೊಳಲು ವಾದಕ ನವೀನ್ ಅವರು ಹಳೆಯ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಅವರು ಕೊಳಲು ನುಡಿಸುತ್ತಿರುವಾಗ ನಯನತಾರಾ ಹಾಗೂ ವಿಘ್ನೇಶ್ ಅವರು ಪ್ರೀತಿಯಿಂದ ಇದನ್ನು ಕೇಳಿದ್ದಾರೆ. ಈ ಘಟನೆ ನಡೆದಿದ್ದು 2023ರ ಜೂನ್ ತಿಂಗಳಲ್ಲಿ. ಈ ವಿಡಿಯೋನ ನವೀನ್ ಈಗ ಹಂಚಿಕೊಂಡಿದ್ದಾರೆ. ಇದನ್ನು ನಯನತಾರಾ ಅವರು ಸ್ಟೇಟಸ್​ಗೆ ಹಂಚಿಕೊಂಡು ಹಾರ್ಟ್ ಮಾರ್ಕ್ ಹಾಕಿದ್ದಾರೆ. ಈ ಮೂಲಕ ಎಲ್ಲವೂ ಸರಿ ಇದೆ ಎಂಬದನ್ನು ಸ್ಪಷ್ಟಪಡಿಸಿದ್ದಾರೆ.

ನಯನತಾರಾ ಅವರಿಗೆ ನಟಿಯಾಗಿ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇದೆ. ‘ಜವಾನ್’ ಚಿತ್ರದಿಂದ ಅವರಿಗೆ ದೊಡ್ಡ ಗೆಲುವು ಸಿಕ್ಕಿದೆ. ಈ ಸಿನಿಮಾ ಸೂಪರ್ ಹಿಟ್ ಆಗಿದೆ. ಮೊದಲ ಸಿನಿಮಾದಲ್ಲೇ ಅವರಿಗೆ ಬಾಲಿವುಡ್​ನಲ್ಲಿ ಗೆಲುವು ಸಿಕ್ಕಂತೆ ಆಗಿದೆ. ಇದರ ಜೊತೆಗೆ ಅವರು ಹೊಸಬರ ಸಿನಿಮಾಗಳನ್ನು ಕೂಡ ಒಪ್ಪಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: ನಯನತಾರಾ ಹಾಗೂ ವಿಘ್ನೇಶ್ ಸಂಸಾರದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು

2022ರ ಜೂನ್ 9ರಂದು ನಯನತಾರಾ ಹಾಗೂ ವಿಘ್ನೇಶ್ ಶಿವನ್ ಸಿಂಪಲ್ ಆಗಿ ಮದುವೆ ಆದರು. ನಾಲ್ಕೇ ತಿಂಗಳಲ್ಲಿ ಅವರಿಗೆ ಮಗು ಜನಿಸಿದ ಬಗ್ಗೆ ಮಾಹಿತಿ ಸಿಕ್ಕಿತ್ತು. ಬಾಡಿಗೆ ತಾಯ್ತನದ ಮೂಲಕ ಈ ದಂಪತಿ ಅವಳಿ ಮಕ್ಕಳನ್ನು ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ