AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಖಾನ್​​ ಮುಂದಿನ ಚಿತ್ರಕ್ಕೆ ‘ಸೂಪರ್​’ ಸಿನಿಮಾ ಹೀರೋಯಿನ್​

ವಿಜಯ್​ ನಟನೆಯ ‘ಬಿಗಿಲ್’​, ‘ಮೆರ್ಸಲ್’​ ಹಾಗೂ ‘ತೇರಿ’ ಸಿನಿಮಾಗಳನ್ನು ನಿರ್ದೇಶನ ಮಾಡಿದ ಖ್ಯಾತಿ ಅಟ್ಲೀ ಅವರಿಗಿದೆ. ಈಗ ಶಾರುಖ್​ ಮುಂದಿನ ಸಿನಿಮಾಗೆ ಅಟ್ಲೀ ನಿರ್ದೇಶನ ಮಾಡಲಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.

ಶಾರುಖ್​ ಖಾನ್​​ ಮುಂದಿನ ಚಿತ್ರಕ್ಕೆ ‘ಸೂಪರ್​’ ಸಿನಿಮಾ ಹೀರೋಯಿನ್​
ನಯನತಾರಾ, ಶಾರುಖ್ ಖಾನ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jun 26, 2021 | 4:06 PM

Share

‘ಜೀರೋ’ ಚಿತ್ರ ಸೋತ ನಂತರದಲ್ಲಿ ಶಾರುಖ್​ ಒಂದು ಗ್ಯಾಪ್​ ತೆಗೆದುಕೊಂಡಿದ್ದರು. ಈಗ ಅವರ ಮುಂದಿನ ಸಿನಿಮಾ ‘ಪಠಾಣ್​’ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ​ ಸಿನಿಮಾದ ಶೂಟಿಂಗ್​ ಸದ್ಯ ಪ್ರಗತಿಯಲ್ಲಿದೆ. ಇದಲ್ಲದೆ, ಖ್ಯಾತ ನಿರ್ದೇಶಕ ಅಟ್ಲೀ ಜತೆ ಶಾರುಖ್​ ಕೈ ಜೋಡಿಸುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾಗೆ ನಯನತಾರಾ ನಾಯಕಿಯಾಗಲಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.

ವಿಜಯ್​ ನಟನೆಯ ‘ಬಿಗಿಲ್’​, ‘ಮೆರ್ಸಲ್’​ ಹಾಗೂ ‘ತೇರಿ’ ಸಿನಿಮಾಗಳನ್ನು ನಿರ್ದೇಶನ ಮಾಡಿದ ಖ್ಯಾತಿ ಅಟ್ಲೀ ಅವರಿಗಿದೆ. ಈ ಮೂರು ಚಿತ್ರಗಳು ಹಿಟ್​ ಚಿತ್ರಗಳು. ಈಗ ಶಾರುಖ್​ ಮುಂದಿನ ಸಿನಿಮಾಗೆ ಅಟ್ಲೀ ನಿರ್ದೇಶನ ಮಾಡಲಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ. ಈಗ ಈ ಚಿತ್ರಕ್ಕೆ ನಾಯಕಿಯ ಆಯ್ಕೆ ಪ್ರಗತಿಯಲ್ಲಿದೆ. ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ ಅವರನ್ನು ಈ ಸಿನಿಮಾಗೆ ಹೀರೋಯಿನ್​ ಆಗಿ ಫೈನಲ್​ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಟ್ಲೀ-ಶಾರುಖ್​ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸಿದ್ಧಗೊಳ್ಳಲಿದೆ. ಈ ಕಾರಣಕ್ಕೆ ದಕ್ಷಿಣ ಭಾರತದ ನಟಿಯನ್ನು ಆಯ್ಕೆ ಮಾಡಿಕೊಳ್ಳಬೇಕು ಎನ್ನುವುದು ಚಿತ್ರತಂಡದ ಆಲೋಚನೆ. ಇನ್ನು, ನಯನತಾರಾ ನಟನೆ ಮೂಲಕ ಈಗಾಗಲೇ ಎಲ್ಲರ ಗಮನ ಸೆಳೆದಿದ್ದಾರೆ. ಈ ಕಾರಣಕ್ಕೆ ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ‘ಬಿಗಿಲ್’​ ಚಿತ್ರದಲ್ಲಿ ನಯನತಾರಾ ಹಾಗೂ ಅಟ್ಲೀ ಒಟ್ಟಾಗಿ ಕೆಲಸ ಮಾಡಿದ್ದರು. ನಯನತಾರಾ ಕಾರ್ಯವೈಖರಿ ಅಟ್ಲೀ ಅವರಿಗೆ ಇಷ್ಟವಾಗಿದೆ.

ಸದ್ಯ, ಶಾರುಖ್​ ಖಾನ್​ ‘ಪಠಾಣ್​’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇದಕ್ಕಿಂತ ಮೊದಲೇ ಅಟ್ಲೀ-ಶಾರುಖ್​ ಸಿನಿಮಾ ಸೆಟ್ಟೇರಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ಕೆಲಸಗಳು ಆರಂಭವಾಗೋದು ತಡವಾಗಿದೆ. ಹೀಗಾಗಿ, ಶಾರುಖ್​ ‘ಪಠಾಣ್​’ ನಂತರ ಈ ಚಿತ್ರ ಕೈಗೆತ್ತಿಕೊಳ್ಳುತ್ತಿದ್ದಾರೆ.

2010ರಲ್ಲಿ ತೆರೆಗೆ ಬಂದ ಉಪೇಂದ್ರ ನಟನೆಯ ‘ಸೂಪರ್’​ ಸಿನಿಮಾದಲ್ಲಿ ನಯನತಾರಾ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಅವರು ನಟಿಸಿದ ಏಕೈಕ ಕನ್ನಡ ಸಿನಿಮಾ ಇದು. ಈ ಚಿತ್ರ ತೆರೆಕಂಡ ನಂತರದಲ್ಲಿ ತಮಿಳು ಚಿತ್ರರಂಗದಲ್ಲಿ ನಯನತಾರಾ ಬ್ಯುಸಿ ಆದರು. ಅಲ್ಲಿ ಹಿಟ್​ ಚಿತ್ರಗಳನ್ನು ನೀಡಿದರು. ಸದ್ಯ, ರಜನಿಕಾಂತ್​ ನಟನೆಯ ಅಣ್ಣಾಥೆ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಇದನ್ನೂ ಓದಿ:

ಶಾರುಖ್​ ನಟನೆಯ ಪಠಾಣ್​ ಸಿನಿಮಾ ರಿಲೀಸ್​ಗೆ ಫಿಕ್ಸ್​ ಆಯ್ತು ದಿನಾಂಕ 

Thalapathy Vijay: ಒಂದೇ ಮಾತಿನಲ್ಲಿ ದಳಪತಿ ವಿಜಯ್​ಗೆ ಶಾರುಖ್ ಖಾನ್​ ಹೊಗಳಿಕೆ; ಯಾವುದು ಆ ಮಾತು?

Published On - 4:04 pm, Sat, 26 June 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ