AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೂ ಮೊದಲೇ ಸ್ಟಾರ್​ ನಟಿಯ ತಂದೆ ಆಸ್ಪತ್ರೆಗೆ ದಾಖಲು   

ಕುರಿಯನ್​ ಅವರಿಗೆ ಕಳೆದ ಕೆಲ ತಿಂಗಳಿಂದ ಅನಾರೋಗ್ಯ ಕಾಡುತ್ತಲೇ ಇದೆ. ಈಗ ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಹದಗೆಟ್ಟಿರುವುದರಿಂದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಮದುವೆಗೂ ಮೊದಲೇ ಸ್ಟಾರ್​ ನಟಿಯ ತಂದೆ ಆಸ್ಪತ್ರೆಗೆ ದಾಖಲು   
ಮದುವೆಗೂ ಮೊದಲೇ ಸ್ಟಾರ್​ ನಟಿಯ ತಂದೆ ಆಸ್ಪತ್ರೆಗೆ ದಾಖಲು   
TV9 Web
| Edited By: |

Updated on:Jul 09, 2021 | 10:32 PM

Share

ಲೇಡಿ ಸೂಪರ್​ಸ್ಟಾರ್​ ಖ್ಯಾತಿಯ ನಯನತಾರಾ ಶೀಘ್ರವೇ ಮದುವೆ ಆಗಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಹೀಗಿರುವಾಗಲೇ ಅವರ ತಂದೆ ಕುರಿಯನ್​ ಕೊಡಿಯಾಟ್ಟು ಕೇರಳದ ಕೊಚ್ಚಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಂದೆ ಜತೆ ನಯನತಾರಾ ಕೂಡ ಆಸ್ಪತ್ರೆಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಕುರಿಯನ್​ ಅವರಿಗೆ ಕಳೆದ ಕೆಲ ತಿಂಗಳಿಂದ ಅನಾರೋಗ್ಯ ಕಾಡುತ್ತಲೇ ಇದೆ. ಈಗ ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಹದಗೆಟ್ಟಿರುವುದರಿಂದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಸದ್ಯ, ಅವರನ್ನು ಐಸಿಯುಗೆ ದಾಖಲು ಮಾಡಲಾಗಿದೆ.

ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್​ ಶಿವನ್​ ಹಲವು ವರ್ಷಗಳಿಂದ ಪ್ರೀತಿ ಮಾಡುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಇಬ್ಬರೂ ಇದನ್ನು ಒಪ್ಪಿಕೊಂಡಿದ್ದು ಮಾತ್ರವಲ್ಲ ಬೇರೆ ಬೇರೆ ಕಡೆಗಳಿಗೆ ಸುತ್ತಾಡಲು ತೆರಳಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆದರೆ, ಈವರೆಗೆ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡಿರಲಿಲ್ಲ. ಇತ್ತೀಚೆ ಇಬ್ಬರೂ ಗುಟ್ಟಾಗಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. 2015 ರಲ್ಲಿ ತೆರೆಗೆ ಬಂದ ವಿಘ್ನೇಶ್ ನಿರ್ದೇಶನದ ನಾನಮ್ ರೌಡಿಧಾನ್ ಚಿತ್ರದಲ್ಲಿ ನಯನತಾರಾ ಮುಖ್ಯ ಪಾತ್ರಧಾರಿಯಾಗಿ ಕಾಣಿಸಿಕೊಂಡಿದ್ದರು. ಈ ಸಿನಿಮಾದಲ್ಲಿ ಇವರಿಗೆ ಉಂಟಾದ ಪರಿಚಯ ಪ್ರೀತಿಗೆ ತಿರುಗಿತ್ತು.

ದೇಶಾದ್ಯಂತ ಕೊರೊನಾ ವೈರಸ್​ ಎರಡನೇ ಅಲೆ ಮಿತಿ ಮೀರಿ ಹಬ್ಬುತ್ತಿದೆ. ಸೆಲೆಬ್ರಿಟಿಗಳ ವಲಯದಲ್ಲೂ ಅನೇಕರು ಈ ಮಹಾಮಾರಿಗೆ ಬಲಿ ಆಗಿದ್ದಾರೆ. ಇಂಥ ಸಂದರ್ಭದಲ್ಲಿ ಎಲ್ಲರೂ ವ್ಯಾಕ್ಸಿನ್​ಗಾಗಿ ಮುಗಿಬೀಳುತ್ತಿದ್ದಾರೆ. ಕೊವಿಡ್​ನಿಂದ ರಕ್ಷಿಸಿಕೊಳ್ಳಲು ಲಸಿಕೆ ಪಡೆಯುವುದು ಸೂಕ್ತ ಮಾರ್ಗ ಎಂಬುದು ಎಲ್ಲರಿಗೂ ಅರ್ಥವಾಗಿದೆ. ಸೆಲೆಬ್ರಿಟಿಗಳು ಕೂಡ ಹರಿಬರಿಯಲ್ಲಿ ಲಸಿಕೆ ಪಡೆಯುತ್ತಿದ್ದಾರೆ. ಬಹುಭಾಷಾ ನಟಿ ನಯನತಾರಾ ಕೂಡ ಇತ್ತೀಚೆಗೆ ಲಸಿಕೆ ಪಡೆದುಕೊಂಡರು.

ಇದನ್ನೂ ಓದಿ: ಕೊವಿಡ್​ ಲಸಿಕೆ ವಿಚಾರದಲ್ಲಿ ಗೋಲ್​ಮಾಲ್​ ಮಾಡಿದ್ರಾ ನಯನತಾರಾ? ಫೋಟೋ ತೆರೆದಿಟ್ಟ ಅಸಲಿ ಕಥೆ ಇಲ್ಲಿದೆ

Published On - 10:31 pm, Fri, 9 July 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ