AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್​ ಚಿತ್ರೋತ್ಸವದಲ್ಲಿ ಸೌತ್​ ನಟಿಯರಿಗೂ ಮನ್ನಣೆ; ರೆಡ್​ ಕಾರ್ಪೆಟ್​ಗೆ ಪೂಜಾ ಹೆಗ್ಡೆ, ತಮನ್ನಾ, ನಯನತಾರಾ

75th Cannes Film Festival: ನಯನತಾರಾ, ಪೂಜಾ ಹೆಗ್ಡೆ, ತಮನ್ನಾ ಭಾಟಿಯಾ ಮಾತ್ರವಲ್ಲದೇ ಈ ಬಾರಿ ಅಕ್ಷಯ್​ ಕುಮಾರ್​, ಎ.ಆರ್​. ರೆಹಮಾನ್​, ದೀಪಿಕಾ ಪಡುಕೋಣೆ​ ಮುಂತಾದವರು ಕೂಡ ಈ ಬಾರಿ ಕಾನ್​ ಚಿತ್ರೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಾನ್​ ಚಿತ್ರೋತ್ಸವದಲ್ಲಿ ಸೌತ್​ ನಟಿಯರಿಗೂ ಮನ್ನಣೆ; ರೆಡ್​ ಕಾರ್ಪೆಟ್​ಗೆ ಪೂಜಾ ಹೆಗ್ಡೆ, ತಮನ್ನಾ, ನಯನತಾರಾ
ನಯನತಾರಾ, ಪೂಜಾ ಹೆಗ್ಡೆ, ತಮನ್ನಾ ಭಾಟಿಯಾ
TV9 Web
| Edited By: |

Updated on:May 14, 2022 | 12:50 PM

Share

ಕಾನ್​ ಚಿತ್ರೋತ್ಸವಕ್ಕೆ (Cannes film Festival) ಜಗತ್ತಿನಾದ್ಯಂತ ಮನ್ನಣೆ ಇದೆ. ಈ ಸಿನಿಮೋತ್ಸವದಲ್ಲಿ ತಮ್ಮ ಚಿತ್ರ ಪ್ರದರ್ಶನ ಆಗಬೇಕು ಎಂದು ಎಷ್ಟೋ ನಿರ್ದೇಶಕರು, ಕಲಾವಿದರು, ನಿರ್ಮಾಪಕರು, ತಂತ್ರಜ್ಞರು ಕನಸು ಕಾಣುತ್ತಾರೆ. ಈ ಬಾರಿ 21 ಸಿನಿಮಾಗಳು ಸ್ಪರ್ಧಿಸುತ್ತಿವೆ. ಮೇ 17ರಂದು ಕಾನ್​ ಫಿಲ್ಮ್​ ಫೆಸ್ಟಿವಲ್ (Cannes film Festival 2022)​ ಆರಂಭ ಆಗಲಿದೆ. ಮೇ 28ರಂದು ಇದರ ಸಮಾರೋಪ ಸಮಾರಂಭ ನಡೆಯಲಿದೆ. ಜಗತ್ತಿನಾದ್ಯಂತ ಇರುವ ಸಿನಿಪ್ರಿಯರಿಗಾಗಿ ಈ ಚಿತ್ರೋತ್ಸವ ನಡೆಯುತ್ತಿದೆ. ಪ್ರತಿ ಬಾರಿ ಬಾಲಿವುಡ್​ನ ಕೆಲವು ಜನಪ್ರಿಯ ನಟಿಯರು ಕಾನ್ ಚಿತ್ರೋತ್ಸವದ ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕಿ ಗಮನ ಸೆಳೆಯುತ್ತಾರೆ. ಈ ಬಾರಿ ದಕ್ಷಿಣ ಭಾರತದ ನಟಿಯರಿಗೂ ಮನ್ನಣೆ ನೀಡಲಾಗಿದೆ. ಖ್ಯಾತ ನಟಿಯರಾದ ನಯನತಾರಾ (Nayanthara), ಪೂಜಾ ಹೆಗ್ಡೆ ಮತ್ತು ತಮನ್ನಾ ಭಾಟಿಯಾ ಅವರು ಕೂಡ ಕಾನ್​ ಚಿತ್ರೋತ್ಸವದ ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕಲಿದ್ದಾರೆ. ಈ ಸುದ್ದಿ ಕೇಳಿ ಅಭಿಮಾನಿಗಳು ಖುಷಿ ಆಗಿದ್ದಾರೆ. ಈ ಬೆಡಗಿಯರ ಲುಕ್​ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕೌತುಕ ಮೂಡಿದೆ.

ಪೂಜಾ ಹೆಗ್ಡೆ, ನಯನತಾರಾ ಹಾಗೂ ತಮನ್ನಾ ಭಾಟಿಯಾ ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಹೊಂದಿದ್ದಾರೆ. ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಸಕ್ರಿಯರಾಗಿರುವ ಅವರು ಭಾರತೀಯ ಸಿನಿಮಾರಂಗಕ್ಕೆ ಕೊಡುಗೆ ನೀಡಿದ್ದಾರೆ. ಹಾಗಾಗಿ ಅವರಿಗೆ ಈ ಮನ್ನಣೆ ಸಿಗುತ್ತಿದೆ. ಈ ಬಗ್ಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಟ್ವೀಟ್​ ಮಾಡಲಾಗಿದೆ.

ಇದನ್ನೂ ಓದಿ
Image
ಎಷ್ಟೇ ಸಿನಿಮಾ ಸೋತ್ರೂ ಪೂಜಾ ಹೆಗ್ಡೆಗೆ ಸಿಕ್ತಿದೆ ಹೊಸ ಆಫರ್ಸ್​; ಈಗ ವಿಜಯ್​ ಜತೆ ‘ಜನ ಗಣ ಮನ’
Image
ಮತ್ತೆ ಚಿಕ್ಕ ಬಟ್ಟೆ ಧರಿಸಿ ಬಂದ ಸಮಂತಾ; ಆದ್ರೆ ಟ್ರೋಲ್​ ಆಗಿದ್ದು ನಯನತಾರಾ ಪ್ರಿಯಕರ: ಕಾರಣ ಏನು?
Image
ತಮನ್ನಾ ರೀತಿ ಡ್ಯಾನ್ಸ್​ ಮಾಡ್ತಾರಾ ಈ ಸೆಲೆಬ್ರಿಟಿಗಳು? ಹೊಸ ಸವಾಲು ಹಾಕಿದ ‘ಮಿಲ್ಕಿ ಬ್ಯೂಟಿ’
Image
ಕಾನ್​​ ಚಿತ್ರೋತ್ಸವಕ್ಕೆ ಆಯ್ಕೆಯಾದ ಕನ್ನಡದ ‘ದೇವರ ಕನಸು’ ಸಿನಿಮಾ

ಸಲ್ಮಾನ್​ ಖಾನ್​ ಜೊತೆ ‘ಕಭಿ ಈದ್​ ಕಭಿ ದಿವಾಲಿ’ ಸಿನಿಮಾದ ಕೆಲಸಗಳಲ್ಲಿ ಪೂಜಾ ಹೆಗ್ಡೆ ಬ್ಯುಸಿ ಆಗಿದ್ದಾರೆ. ಕಾನ್​ ಚಿತ್ರೋತ್ಸವದಲ್ಲಿ ಭಾಗವಹಿಸುವ ಸಲುವಾಗಿ ಅವರು ಬಿಡುವು ಮಾಡಿಕೊಳ್ಳಬೇಕಿದೆ. ಅದೇ ರೀತಿ ತಮನ್ನಾ ಅವರು ಕೂಡ ಕಾನ್​ ಚಿತ್ರೋತ್ಸವ ಮುಗಿಸಿಕೊಂಡು ಬಂದು ‘ಎಫ್​3’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ. ನಯನತಾರಾ, ಪೂಜಾ ಹೆಗ್ಡೆ, ತಮನ್ನಾ ಭಾಟಿಯಾ ಮಾತ್ರವಲ್ಲದೇ ಈ ಬಾರಿ ಅಕ್ಷಯ್​ ಕುಮಾರ್​, ಎ.ಆರ್​. ರೆಹಮಾನ್​, ದೀಪಿಕಾ ಪಡುಕೋಣೆ, ಕಿರುತೆರೆ ನಟಿ ಹೀನಾ ಖಾನ್​ ಮುಂತಾದವರು ಸಹ ಕಾನ್​ ಚಿತ್ರೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಾನ್​ ಚಿತ್ರೋತ್ಸವಕ್ಕೆ ದೀಪಿಕಾ ಪಡುಕೋಣೆ ಜ್ಯೂರಿ:

2022ರ ಕಾನ್​ ಚಿತ್ರೋತ್ಸವದಲ್ಲಿ ದೀಪಿಕಾ ಪಡುಕೋಣೆ ಭಾಗವಹಿಸುತ್ತಿದ್ದಾರೆ. ಅದು ಕೂಡ ಜ್ಯೂರಿ ಆಗಿ ಎಂಬುದು ವಿಶೇಷ. ಈ ಹಿಂದೆ ಅನೇಕ ಬಾರಿ ಸೌಂದರ್ಯ ವರ್ಧಕ ಕಂಪನಿಗಳ ಪ್ರಚಾರ ರಾಯಭಾರಿಯಾಗಿ ದೀಪಿಕಾ ಪಡುಕೋಣೆ ಅವರು ಕಾನ್​ ಚಿತ್ರೋತ್ಸವದಲ್ಲಿ ಭಾಗಿ ಆಗಿದ್ದುಂಟು. ಆದರೆ ಇದೇ ಮೊದಲ ಬಾರಿಗೆ ಅವರು ಜ್ಯೂರಿ ತಂಡದ ಸದಸ್ಯರಾಗಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಜಾಗತಿಕ ಮಟ್ಟದಲ್ಲಿ ದೀಪಿಕಾ ಪಡುಕೋಣೆ ಖ್ಯಾತಿ ಹೆಚ್ಚಿದೆ. ಈ ಸಾಧನೆಗಾಗಿ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಈ ಹಿಂದೆ ಭಾರತದ ನಟಿಯರಾದ ಐಶ್ವರ್ಯಾ ರೈ ಬಚ್ಚನ್​, ವಿದ್ಯಾ ಬಾಲನ್, ಶರ್ಮಿಳಾ ಟಾಗೋರ್​, ನಂದಿತಾ ದಾಸ್​ ಅವರು ಕಾನ್​ ಚಿತ್ರೋತ್ಸವದ ಜ್ಯೂರಿಗಳಾಗಿ ಕೆಲಸ ಮಾಡಿದ್ದರು. ಈಗ ಆ ನಟಿಯರ ಸಾಲಿಗೆ ದೀಪಿಕಾ ಪಡುಕೋಣೆ ಕೂಡ ಸೇರ್ಪಡೆ ಆಗಿದ್ದಾರೆ. ಕಾನ್​ ಚಿತ್ರೋತ್ಸವದ ವೆಬ್​ಸೈಟ್​ನಲ್ಲಿ ಜ್ಯೂರಿ ದೀಪಿಕಾ ಪಡುಕೋಣೆ ಅವರ ಪರಿಚಯ ಮಾಡಿಕೊಡಲಾಗಿದೆ. ಭಾರತದ ನಟಿ, ನಿರ್ಮಾಪಕಿ, ಸಮಾಜ ಸೇವಕಿ ಮತ್ತು ಉದ್ಯಮಿ ಎಂದು ಅವರ ಬಗ್ಗೆ ವಿವರ ನೀಡಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:50 pm, Sat, 14 May 22

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ