AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್​ ಚಿತ್ರೋತ್ಸವದಲ್ಲಿ ಸೌತ್​ ನಟಿಯರಿಗೂ ಮನ್ನಣೆ; ರೆಡ್​ ಕಾರ್ಪೆಟ್​ಗೆ ಪೂಜಾ ಹೆಗ್ಡೆ, ತಮನ್ನಾ, ನಯನತಾರಾ

75th Cannes Film Festival: ನಯನತಾರಾ, ಪೂಜಾ ಹೆಗ್ಡೆ, ತಮನ್ನಾ ಭಾಟಿಯಾ ಮಾತ್ರವಲ್ಲದೇ ಈ ಬಾರಿ ಅಕ್ಷಯ್​ ಕುಮಾರ್​, ಎ.ಆರ್​. ರೆಹಮಾನ್​, ದೀಪಿಕಾ ಪಡುಕೋಣೆ​ ಮುಂತಾದವರು ಕೂಡ ಈ ಬಾರಿ ಕಾನ್​ ಚಿತ್ರೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಾನ್​ ಚಿತ್ರೋತ್ಸವದಲ್ಲಿ ಸೌತ್​ ನಟಿಯರಿಗೂ ಮನ್ನಣೆ; ರೆಡ್​ ಕಾರ್ಪೆಟ್​ಗೆ ಪೂಜಾ ಹೆಗ್ಡೆ, ತಮನ್ನಾ, ನಯನತಾರಾ
ನಯನತಾರಾ, ಪೂಜಾ ಹೆಗ್ಡೆ, ತಮನ್ನಾ ಭಾಟಿಯಾ
TV9 Web
| Edited By: |

Updated on:May 14, 2022 | 12:50 PM

Share

ಕಾನ್​ ಚಿತ್ರೋತ್ಸವಕ್ಕೆ (Cannes film Festival) ಜಗತ್ತಿನಾದ್ಯಂತ ಮನ್ನಣೆ ಇದೆ. ಈ ಸಿನಿಮೋತ್ಸವದಲ್ಲಿ ತಮ್ಮ ಚಿತ್ರ ಪ್ರದರ್ಶನ ಆಗಬೇಕು ಎಂದು ಎಷ್ಟೋ ನಿರ್ದೇಶಕರು, ಕಲಾವಿದರು, ನಿರ್ಮಾಪಕರು, ತಂತ್ರಜ್ಞರು ಕನಸು ಕಾಣುತ್ತಾರೆ. ಈ ಬಾರಿ 21 ಸಿನಿಮಾಗಳು ಸ್ಪರ್ಧಿಸುತ್ತಿವೆ. ಮೇ 17ರಂದು ಕಾನ್​ ಫಿಲ್ಮ್​ ಫೆಸ್ಟಿವಲ್ (Cannes film Festival 2022)​ ಆರಂಭ ಆಗಲಿದೆ. ಮೇ 28ರಂದು ಇದರ ಸಮಾರೋಪ ಸಮಾರಂಭ ನಡೆಯಲಿದೆ. ಜಗತ್ತಿನಾದ್ಯಂತ ಇರುವ ಸಿನಿಪ್ರಿಯರಿಗಾಗಿ ಈ ಚಿತ್ರೋತ್ಸವ ನಡೆಯುತ್ತಿದೆ. ಪ್ರತಿ ಬಾರಿ ಬಾಲಿವುಡ್​ನ ಕೆಲವು ಜನಪ್ರಿಯ ನಟಿಯರು ಕಾನ್ ಚಿತ್ರೋತ್ಸವದ ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕಿ ಗಮನ ಸೆಳೆಯುತ್ತಾರೆ. ಈ ಬಾರಿ ದಕ್ಷಿಣ ಭಾರತದ ನಟಿಯರಿಗೂ ಮನ್ನಣೆ ನೀಡಲಾಗಿದೆ. ಖ್ಯಾತ ನಟಿಯರಾದ ನಯನತಾರಾ (Nayanthara), ಪೂಜಾ ಹೆಗ್ಡೆ ಮತ್ತು ತಮನ್ನಾ ಭಾಟಿಯಾ ಅವರು ಕೂಡ ಕಾನ್​ ಚಿತ್ರೋತ್ಸವದ ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕಲಿದ್ದಾರೆ. ಈ ಸುದ್ದಿ ಕೇಳಿ ಅಭಿಮಾನಿಗಳು ಖುಷಿ ಆಗಿದ್ದಾರೆ. ಈ ಬೆಡಗಿಯರ ಲುಕ್​ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕೌತುಕ ಮೂಡಿದೆ.

ಪೂಜಾ ಹೆಗ್ಡೆ, ನಯನತಾರಾ ಹಾಗೂ ತಮನ್ನಾ ಭಾಟಿಯಾ ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಹೊಂದಿದ್ದಾರೆ. ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಸಕ್ರಿಯರಾಗಿರುವ ಅವರು ಭಾರತೀಯ ಸಿನಿಮಾರಂಗಕ್ಕೆ ಕೊಡುಗೆ ನೀಡಿದ್ದಾರೆ. ಹಾಗಾಗಿ ಅವರಿಗೆ ಈ ಮನ್ನಣೆ ಸಿಗುತ್ತಿದೆ. ಈ ಬಗ್ಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಟ್ವೀಟ್​ ಮಾಡಲಾಗಿದೆ.

ಇದನ್ನೂ ಓದಿ
Image
ಎಷ್ಟೇ ಸಿನಿಮಾ ಸೋತ್ರೂ ಪೂಜಾ ಹೆಗ್ಡೆಗೆ ಸಿಕ್ತಿದೆ ಹೊಸ ಆಫರ್ಸ್​; ಈಗ ವಿಜಯ್​ ಜತೆ ‘ಜನ ಗಣ ಮನ’
Image
ಮತ್ತೆ ಚಿಕ್ಕ ಬಟ್ಟೆ ಧರಿಸಿ ಬಂದ ಸಮಂತಾ; ಆದ್ರೆ ಟ್ರೋಲ್​ ಆಗಿದ್ದು ನಯನತಾರಾ ಪ್ರಿಯಕರ: ಕಾರಣ ಏನು?
Image
ತಮನ್ನಾ ರೀತಿ ಡ್ಯಾನ್ಸ್​ ಮಾಡ್ತಾರಾ ಈ ಸೆಲೆಬ್ರಿಟಿಗಳು? ಹೊಸ ಸವಾಲು ಹಾಕಿದ ‘ಮಿಲ್ಕಿ ಬ್ಯೂಟಿ’
Image
ಕಾನ್​​ ಚಿತ್ರೋತ್ಸವಕ್ಕೆ ಆಯ್ಕೆಯಾದ ಕನ್ನಡದ ‘ದೇವರ ಕನಸು’ ಸಿನಿಮಾ

ಸಲ್ಮಾನ್​ ಖಾನ್​ ಜೊತೆ ‘ಕಭಿ ಈದ್​ ಕಭಿ ದಿವಾಲಿ’ ಸಿನಿಮಾದ ಕೆಲಸಗಳಲ್ಲಿ ಪೂಜಾ ಹೆಗ್ಡೆ ಬ್ಯುಸಿ ಆಗಿದ್ದಾರೆ. ಕಾನ್​ ಚಿತ್ರೋತ್ಸವದಲ್ಲಿ ಭಾಗವಹಿಸುವ ಸಲುವಾಗಿ ಅವರು ಬಿಡುವು ಮಾಡಿಕೊಳ್ಳಬೇಕಿದೆ. ಅದೇ ರೀತಿ ತಮನ್ನಾ ಅವರು ಕೂಡ ಕಾನ್​ ಚಿತ್ರೋತ್ಸವ ಮುಗಿಸಿಕೊಂಡು ಬಂದು ‘ಎಫ್​3’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ. ನಯನತಾರಾ, ಪೂಜಾ ಹೆಗ್ಡೆ, ತಮನ್ನಾ ಭಾಟಿಯಾ ಮಾತ್ರವಲ್ಲದೇ ಈ ಬಾರಿ ಅಕ್ಷಯ್​ ಕುಮಾರ್​, ಎ.ಆರ್​. ರೆಹಮಾನ್​, ದೀಪಿಕಾ ಪಡುಕೋಣೆ, ಕಿರುತೆರೆ ನಟಿ ಹೀನಾ ಖಾನ್​ ಮುಂತಾದವರು ಸಹ ಕಾನ್​ ಚಿತ್ರೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಾನ್​ ಚಿತ್ರೋತ್ಸವಕ್ಕೆ ದೀಪಿಕಾ ಪಡುಕೋಣೆ ಜ್ಯೂರಿ:

2022ರ ಕಾನ್​ ಚಿತ್ರೋತ್ಸವದಲ್ಲಿ ದೀಪಿಕಾ ಪಡುಕೋಣೆ ಭಾಗವಹಿಸುತ್ತಿದ್ದಾರೆ. ಅದು ಕೂಡ ಜ್ಯೂರಿ ಆಗಿ ಎಂಬುದು ವಿಶೇಷ. ಈ ಹಿಂದೆ ಅನೇಕ ಬಾರಿ ಸೌಂದರ್ಯ ವರ್ಧಕ ಕಂಪನಿಗಳ ಪ್ರಚಾರ ರಾಯಭಾರಿಯಾಗಿ ದೀಪಿಕಾ ಪಡುಕೋಣೆ ಅವರು ಕಾನ್​ ಚಿತ್ರೋತ್ಸವದಲ್ಲಿ ಭಾಗಿ ಆಗಿದ್ದುಂಟು. ಆದರೆ ಇದೇ ಮೊದಲ ಬಾರಿಗೆ ಅವರು ಜ್ಯೂರಿ ತಂಡದ ಸದಸ್ಯರಾಗಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಜಾಗತಿಕ ಮಟ್ಟದಲ್ಲಿ ದೀಪಿಕಾ ಪಡುಕೋಣೆ ಖ್ಯಾತಿ ಹೆಚ್ಚಿದೆ. ಈ ಸಾಧನೆಗಾಗಿ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಈ ಹಿಂದೆ ಭಾರತದ ನಟಿಯರಾದ ಐಶ್ವರ್ಯಾ ರೈ ಬಚ್ಚನ್​, ವಿದ್ಯಾ ಬಾಲನ್, ಶರ್ಮಿಳಾ ಟಾಗೋರ್​, ನಂದಿತಾ ದಾಸ್​ ಅವರು ಕಾನ್​ ಚಿತ್ರೋತ್ಸವದ ಜ್ಯೂರಿಗಳಾಗಿ ಕೆಲಸ ಮಾಡಿದ್ದರು. ಈಗ ಆ ನಟಿಯರ ಸಾಲಿಗೆ ದೀಪಿಕಾ ಪಡುಕೋಣೆ ಕೂಡ ಸೇರ್ಪಡೆ ಆಗಿದ್ದಾರೆ. ಕಾನ್​ ಚಿತ್ರೋತ್ಸವದ ವೆಬ್​ಸೈಟ್​ನಲ್ಲಿ ಜ್ಯೂರಿ ದೀಪಿಕಾ ಪಡುಕೋಣೆ ಅವರ ಪರಿಚಯ ಮಾಡಿಕೊಡಲಾಗಿದೆ. ಭಾರತದ ನಟಿ, ನಿರ್ಮಾಪಕಿ, ಸಮಾಜ ಸೇವಕಿ ಮತ್ತು ಉದ್ಯಮಿ ಎಂದು ಅವರ ಬಗ್ಗೆ ವಿವರ ನೀಡಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:50 pm, Sat, 14 May 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ