AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜವಾನ್’ ಚಿತ್ರಕ್ಕೆ ನಯನತಾರಾ ಪಡೆದ ಸಂಭಾವನೆ ಇಷ್ಟೊಂದಾ? ಕೇಳಿದ್ರೆ ಅಚ್ಚರಿಪಡ್ತೀರಿ

‘ಜವಾನ್’ ಸಿನಿಮಾ ಸೆಪ್ಟೆಂಬರ್ 7ರಂದು ರಿಲೀಸ್ ಆಗುತ್ತಿದೆ. ಶಾರುಖ್ ಖಾನ್, ನಯನತಾರಾ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ವಿಜಯ್ ಸೇತುಪತಿ ಅವರು ವಿಲನ್ ಪಾತ್ರ ಮಾಡಿದ್ದಾರೆ. ನಯನತಾರಾ ಸಂಭಾವನೆ ಬಗ್ಗೆ ಇಲ್ಲಿದೆ ಮಾಹಿತಿ..

‘ಜವಾನ್’ ಚಿತ್ರಕ್ಕೆ ನಯನತಾರಾ ಪಡೆದ ಸಂಭಾವನೆ ಇಷ್ಟೊಂದಾ? ಕೇಳಿದ್ರೆ ಅಚ್ಚರಿಪಡ್ತೀರಿ
ನಯನತಾರಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 01, 2023 | 6:54 PM

Share

ನಟಿ ನಯನತಾರಾ (Nayanthara) ಅವರು ಕಳೆದ 20 ವರ್ಷಗಳಿಂದ ಚಿತ್ರರಂಗದಲ್ಲಿ ಬ್ಯುಸಿ ಇದ್ದಾರೆ. ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ. ಅವರು ಪಾತ್ರಗಳ ಆಯ್ಕೆಯಲ್ಲಿ ಸಖತ್ ಸ್ಟ್ರಿಕ್ಟ್ ಆಗಿದ್ದಾರೆ. ತಮಗೆ ಪಾತ್ರ ಹೊಂದುತ್ತದೆ ಎಂದಾದರೆ ಮಾತ್ರ ಸಿನಿಮಾ ಒಪ್ಪಿಕೊಳ್ಳುತ್ತಾರೆ. ಈಗ ‘ಜವಾನ್’ (Jawan) ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರ ಪಾತ್ರ ಸಾಕಷ್ಟು ಪ್ರಾಮುಖ್ಯತೆ ಪಡೆದುಕೊಳ್ಳಲಿದೆ ಎಂಬುದು ಪ್ರಿವ್ಯೂ ವಿಡಿಯೋ ಹಾಗೂ ಟ್ರೇಲರ್ ನೋಡಿದ ಅಭಿಮಾನಿಗಳ ಊಹೆ. ಈಗ ನಯನತಾರಾ ಸಂಭಾವನೆ ವಿಚಾರ ಚರ್ಚೆ ಆಗುತ್ತಿದೆ. ನಯನತಾರಾ ಅವರು ‘ಜವಾನ್’ ಚಿತ್ರಕ್ಕಾಗಿ ಬರೋಬ್ಬರಿ 11 ಕೋಟಿ ರೂಪಾಯಿ ಸಂಭಾವನೆ (Nayanthara Remuneration) ಪಡೆದಿದ್ದಾರಂತೆ. ಈ ಮೂಲಕ ಅನೇಕರಿಗೆ ಅಚ್ಚರಿ ಮೂಡಿಸಿದ್ದಾರೆ. ಈ ಚಿತ್ರದಲ್ಲಿ ಅವರು ಭರ್ಜರಿ ಆ್ಯಕ್ಷನ್ ಮೆರೆದಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾ ನೋಡಿದ ಬಳಿಕವೇ ಅವರ ಪಾತ್ರದ ಬಗ್ಗೆ ಸ್ಪಷ್ಟತೆ ಸಿಗಲಿದೆ. ಈ ಚಿತ್ರಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

2003ರಲ್ಲಿ ನಯನತಾರಾ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ಮೊದಲು ನಟಿಸಿದ್ದು ಮಲಯಾಳಂ ಚಿತ್ರದಲ್ಲಿ. ನಂತರ ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿ ಅಭಿನಯಿಸಿದರು. ದಕ್ಷಿಣ ಭಾರತದಲ್ಲಿ ಅವರಿಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಯಿತು. 2010ರಲ್ಲಿ ರಿಲೀಸ್ ಆದ ‘ಸೂಪರ್’ ಚಿತ್ರದ ಮೂಲಕ ಅವರು ಕನ್ನಡಕ್ಕೂ ಕಾಲಿಟ್ಟರು. ಅವರು ನಟಿಸಿದ ಏಕೈಕ ಕನ್ನಡ ಚಿತ್ರ ಇದು. ಈಗ ಅವರು ಹಿಂದಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಮೊದಲ ಹಿಂದಿ ಚಿತ್ರಕ್ಕೆ ಭರ್ಜರಿ ಸಂಭಾವನೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಮಧ್ಯರಾತ್ರಿ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡಿದ ಶಾರುಖ್ ಖಾನ್; ನಟನ ನಂಬಿಕೆಗೆ ಕಾರಣವೇನು?

‘ಜವಾನ್’ ಸಿನಿಮಾ ಸೆಪ್ಟೆಂಬರ್ 7ರಂದು ರಿಲೀಸ್ ಆಗುತ್ತಿದೆ. ಶಾರುಖ್ ಖಾನ್ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ವಿಜಯ್ ಸೇತುಪತಿ ಅವರು ವಿಲನ್ ಪಾತ್ರ ಮಾಡಿದ್ದಾರೆ. ಸಾನ್ಯಾ ಮಲ್ಹೋತ್ರಾ, ದೀಪಿಕಾ ಪಡುಕೋಣೆ ಮೊದಲಾದವರು ನಟಿಸಿದ್ದಾರೆ. ಅನಿರುದ್ಧ್ ರವಿಚಂದರ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಟ್ಲಿ ಅವರು ಸಿನಿಮಾ ನಿರ್ದೇಶನ ಮಾಡಿದ್ದಾರೆ. ಬೆಂಗಳೂರಿನಲ್ಲಿ ‘ಜವಾನ್’ ಸಿನಿಮಾದ ಟಿಕೆಟ್ ದರ 250 ರೂಪಾಯಿಯಿಂದ ಆರಂಭವಾಗಿ 2400 ರೂಪಾಯಿವರೆಗೂ ಮಾರಾಟ ಆಗುತ್ತಿದೆ.

ಇದನ್ನೂ ಓದಿ: ಜವಾನ್; ಆಡಿಯೋ ಲಾಂಚ್: ಅದ್ಧೂರಿ ವೇದಿಕೆಯಲ್ಲಿ ಮಿಂಚು ಹರಿಸಿದ ಶಾರುಖ್ ಖಾನ್

ಯಾವುದೇ ಸಿನಿಮಾ ಒಪ್ಪಿಕೊಂಡರೂ ನಯನತಾರಾ ಅವರು ಪ್ರಚಾರದಲ್ಲಿ ಭಾಗಿ ಆಗುವುದಿಲ್ಲ. ‘ಜವಾನ್’ ಚಿತ್ರದಲ್ಲೂ ಅದು ಮುಂದುವರಿದಿದೆ. ‘ಜವಾನ್’ ಸಿನಿಮಾದ ಆಡಿಯೋ ಲಾಂಚ್ ಇತ್ತೀಚೆಗೆ ನಡೆಯಿತು. ಆದರೆ, ನಯನತಾರಾ ಇದರಲ್ಲಿ ಭಾಗಿ ಆಗಿರಲಿಲ್ಲ. ಈ ಮೂಲಕ ಅವರು ಪ್ರಚಾರದಿಂದ ದೂರವೇ ಉಳಿದುಕೊಂಡರು. ಈಗ ಅವರು ಇನ್​ಸ್ಟಾಗ್ರಾಮ್​ಗೆ ಕಾಲಿಟ್ಟಿದ್ದು, ಅಲ್ಲಿ ಸಿನಿಮಾ ಪ್ರಮೋಷನ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಲಕ್ಷಾಂತರ ಹಿಂಬಾಲಕರು ಸಿಕ್ಕಿದ್ದಾರೆ. ಬಾಡಿಗೆ ತಾಯ್ತನದ ಮೂಲಕ ಅವರು ಅವಳಿ ಮಕ್ಕಳನ್ನು ಪಡೆದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್