AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜವಾನ್’ ಸಿನಿಮಾ ಒಪ್ಪಿಕೊಳ್ಳೋಕೆ ಅಸಲಿ ಕಾರಣ ಕೊಟ್ಟ ನಯನತಾರಾ

‘ನಾನು ಜವಾನ್ ರೀತಿಯ ಸಿನಮಾಗಾಗಿ ಹುಡುಕಾಟ ನಡೆಸುತ್ತಿದ್ದೆ. ದೊಡ್ಡ ಪಾತ್ರವರ್ಗ ಇರಬೇಕು, ಜೊತೆಗೆ ಸಿನಿಮಾ ಕೂಡ ದೊಡ್ಡ ಸ್ಕೇಲ್​ನಲ್ಲಿ ಇರಬೇಕು. ನನ್ನ ಪಾತ್ರಕ್ಕೂ ತೂಕ ಇರಬೇಕು ಎಂದು ಅಂದುಕೊಂಡಿದ್ದೆ ಎಂದಿದ್ದಾರೆ ನಯನತಾರಾ. ಅದೇ ರೀತಿಯಲ್ಲಿ ಸಿನಿಮಾ ಇತ್ತು

‘ಜವಾನ್’ ಸಿನಿಮಾ ಒಪ್ಪಿಕೊಳ್ಳೋಕೆ ಅಸಲಿ ಕಾರಣ ಕೊಟ್ಟ ನಯನತಾರಾ
ನಯನತಾರಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Apr 09, 2024 | 12:03 PM

Share

‘ಜವಾನ್’ ಸಿನಿಮಾ (Jawan Movie) ಸೂಪರ್ ಹಿಟ್ ಆಯಿತು. ಸಿನಿಮಾ ರಿಲೀಸ್ ಆಗಿ ವರ್ಷ ಕಳೆಯುತ್ತಾ ಬಂದರೂ ಚಿತ್ರದ ಬಗ್ಗೆ ಇನ್ನೂ ಮಾತು ನಿಂತಿಲ್ಲ. ಈ ಚಿತ್ರದಲ್ಲಿ ನಯನತಾರಾ ಅವರು ನಾಯಕಿ ಆಗಿ ಮಿಂಚಿದ್ದರು. ಕೆಲವರು ಈ ಪಾತ್ರವನ್ನು ಟೀಕೆ ಮಾಡಿದ್ದರು. ಅವರ ಪಾತ್ರಕ್ಕಿಂತ ದೀಪಿಕಾ ಪಡುಕೋಣೆ ಪಾತ್ರವೇ ಹೆಚ್ಚು ಹೈಲೈಟ್ ಆಗಿದೆ ಎಂದು ಹೇಳಲಾಗಿತ್ತು. ಇದಕ್ಕೆ ನಯನತಾರಾ ಅವರು ಅಪ್ಸೆಟ್ ಆಗಿದ್ದಾರೆ ಎಂದು ಕೂಡ ವರದಿ ಆಗಿತ್ತು. ಆದರೆ, ಇದೆಲ್ಲ ಸುಳ್ಳು ಅನ್ನೋದು ಸ್ಪಷ್ಟವಾಗಿದೆ. ನಯನತಾರಾ ಅವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ.

‘ಜವಾನ್’ ಸಿನಿಮಾ ವಿಶೇಷವಾಗಿತ್ತು. ಇದಕ್ಕೆ ಕಾರಣ ಆಗಿದ್ದು ಅಟ್ಲಿ ನಿರ್ದೇಶನ. ಶಾರುಖ್ ಖಾನ್ ಅವರು ಹಲವು ಶೇಡ್​ಗಳಲ್ಲಿ ಗಮನ ಸೆಳೆದಿದ್ದರು. ಶಾರುಖ್ ಖಾನ್, ನಯನತಾರಾ ಜೊತೆ ದೀಪಿಕಾ ಪಡುಕೋಣೆ, ಸಾನ್ಯಾ ಮಲ್ಹೋತ್ರಾ, ಪ್ರಿಯಾಮಣಿ, ಸುನಿಲ್ ಗ್ರೋವರ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದರು. ನಯನತಾರಾ ಪಾತ್ರದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಈ ಸಿನಿಮಾ ಬಗ್ಗೆ ನಯನತಾರಾ ಮಾತನಾಡಿದ್ದಾರೆ.

‘ನಾನು ಜವಾನ್ ರೀತಿಯ ಸಿನಮಾಗಾಗಿ ಹುಡುಕಾಟ ನಡೆಸುತ್ತಿದ್ದೆ. ದೊಡ್ಡ ಪಾತ್ರವರ್ಗ ಇರಬೇಕು, ಜೊತೆಗೆ ಸಿನಿಮಾ ಕೂಡ ದೊಡ್ಡ ಸ್ಕೇಲ್​ನಲ್ಲಿ ಇರಬೇಕು. ನನ್ನ ಪಾತ್ರಕ್ಕೂ ತೂಕ ಇರಬೇಕು ಎಂದು ಅಂದುಕೊಂಡಿದ್ದೆ ಎಂದಿದ್ದಾರೆ ನಯನತಾರಾ. ಅದೇ ರೀತಿಯಲ್ಲಿ ಸಿನಿಮಾ ಇತ್ತು. ಶಾರುಖ್ ಖಾನ್ ಅವರು ‘ಜವಾನ್’ ಮಾಡಲು ಮುಖ್ಯ ಕಾರಣ ಎಂದಿದ್ದಾರೆ ನಯನತಾರಾ. ಶಾರುಖ್ ಜೊತೆ ನಟಿಸಬೇಕು ಎನ್ನುವ ಆಸೆ ಅನೇಕರಿಗೆ ಇರುತ್ತದೆ. ನಯನತಾರಾಗೂ ಅಂಥದ್ದೊಂದು ಆಸೆ ಇತ್ತು.

‘ಯಾರು ಶಾರುಖ್ ಖಾನ್ ಅವರ ಅಭಿಮಾನಿ ಅಲ್ಲ ಎಂದು ಹೇಳಿ. ಅವರ ಸಿನಿಮಾಗಳನ್ನು ನೋಡಿ ಬೆಳೆದವರು ನಾವು. ಅವರು ಮಹಿಳೆಯರನ್ನು ಸಾಕಷ್ಟು ಗೌರವಿಸುತ್ತಾರೆ. ಜವಾನ್ ಸಿನಿಮಾ ದೊಡ್ಡ ಬದಲಾವಣೆ ತರುತ್ತದೆ ಎಂದು ನನಗೆ ಗೊತ್ತಿತ್ತು. ಇಷ್ಟು ವರ್ಷ ಸಿನಿಮಾಗಳಲ್ಲಿ ಕೆಲಸ ಮಾಡಿದ ನನಗೆ ಯಾವ ಸಿನಿಮಾ ಗೆಲುವು ಕಾಣುತ್ತದೆ, ಯಾವುದು ಕಾಣುವುದಿಲ್ಲ ಅನ್ನೋದು ಗೊತ್ತಾಗುತ್ತದೆ ಎಂದಿದ್ದಾರೆ ಅವರು.

ಇದನ್ನೂ ಓದಿ: ಶಾಕಿಂಗ್ ಆಗಿತ್ತು ಪ್ರಭುದೇವ-ನಯನತಾರಾ ಲವ್ ಅಫೇರ್ ವಿಚಾರ; ಏನಿದು ಪ್ರಕರಣ?

ನಯನತಾರಾ ಅವರು ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ‘ಜವಾನ್’ ಸಿನಿಮಾ ಗೆದ್ದ ಬಳಿಕ ಅವರು ಕೇವಲ ದೊಡ್ಡ ಸ್ಟಾರ್ ಸಿನಿಮಾನೇ ಬೇಕು ಎಂದು ಕುಳಿತಿಲ್ಲ. ಸಣ್ಣ ಸಿನಿಮಾ, ಯುವ ನಿರ್ದೇಶಕ ಸಿನಿಮಾಗಳನ್ನೂ ಒಪ್ಪಿ ಬಣ್ಣ ಹಚ್ಚುತ್ತಿದ್ದಾರೆ. ಅವರು ‘ಮಣ್ಣಂಗಟ್ಟಿ: ಸಿನ್ಸ್ 1960’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಡ್ಯೂಡ್ ವಿಕ್ಕಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಸಿದ್ದಾರ್ಥ್, ತ್ರಿಶಾ, ಆರ್​ ಮಾಧವನ್ ಮೊದಲಾದವರು ನಟಿಸುತ್ತಿದ್ದಾರೆ. ನಿರ್ಮಾಪಕ ಶಶಿಕಾಂತ್ ಅವರ ಮೊದಲ ನಿರ್ದೇಶನದ ಸಿನಿಮಾದಲ್ಲೂ ನಯನತಾರಾ ಅವರು ಬಣ್ಣ ಹಚ್ಚುತ್ತಿದ್ದಾರೆ. ಈ ಚಿತ್ರ ಈ ವರ್ಷ ರಿಲೀಸ್ ಆಗೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ
ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ