AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nayanthara: ಒಂದೇ ಒಂದು ಫೋಟೋದಿಂದ ಎಲ್ಲಾ ವದಂತಿಗೆ ಬ್ರೇಕ್ ಎಳೆದ ನಯನತಾರಾ

ನಯಾನತಾರಾ ಅವರು ವಿಘ್ನೇಶ್ ಶಿವನ್ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಅನ್​ಫಾಲೋ ಮಾಡಿದ್ದರು. ಇದರಿಂದ ಇವರ ವಿಚ್ಛೇದನ ವದಂತಿ ಹುಟ್ಟಿತ್ತು. ಇದಾದ ಬಳಿಕ ಅವರು ಮತ್ತೆ ಪತಿಯನ್ನು ಫಾಲೋ ಮಾಡೋಕೆ ಆರಂಭಿಸಿದ್ದರು. ನಂತರ ಅವರು ಹಾಕಿದ್ದ ಸ್ಟೇಟಸ್ ವಿಚ್ಛೇದನ ವದಂತಿಯನ್ನು ಹೆಚ್ಚಿಸಿತ್ತು.

Nayanthara: ಒಂದೇ ಒಂದು ಫೋಟೋದಿಂದ ಎಲ್ಲಾ ವದಂತಿಗೆ ಬ್ರೇಕ್ ಎಳೆದ ನಯನತಾರಾ
ವಿಘ್ನೇಶ್-ನಯನತಾರಾ
ರಾಜೇಶ್ ದುಗ್ಗುಮನೆ
|

Updated on: Mar 08, 2024 | 11:18 AM

Share

ನಟಿ ನಯನತಾರಾ (Nayanthara) ಅವರು ಇತ್ತೀಚೆಗೆ ಸಖತ್ ಸುದ್ದಿಯಲ್ಲಿ ಇದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಹಾಗೂ ವಿಘ್ನೇಶ್ ಶಿವನ್ ಮಧ್ಯೆ ಹುಟ್ಟಿರೋ ವಿಚ್ಛೇದನದ ವದಂತಿ. ಕಳೆದ ಕೆಲವು ದಿನಗಳಿಂದ ಈ ಬಗ್ಗೆ ಚರ್ಚೆ ಆಗುತ್ತಲೇ ಇತ್ತು. ಈಗ ಈ ಎಲ್ಲಾ ವದಂತಿಗಳಿಗೆ ನಯನತಾರಾ ಬ್ರೇಕ್ ಎಳೆದಿದ್ದಾರೆ. ಕುಟುಂಬದ ಜೊತೆ ವಿದೇಶ ಪ್ರಯಾಣ ಬೆಳೆಸಿದ್ದಾರೆ ನಯನತಾರಾ. ಈ ಫೋಟೋ ವೈರಲ್ ಆಗಿ ಗಮನ ಸೆಳೆದಿದೆ. ನಯನತಾರಾ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.

ವದಂತಿ ಹುಟ್ಟಿದ್ದು ಹೇಗೆ?

ನಯಾನತಾರಾ ಅವರು ವಿಘ್ನೇಶ್ ಶಿವನ್ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಅನ್​ಫಾಲೋ ಮಾಡಿದ್ದರು. ಇದರಿಂದ ಇವರ ವಿಚ್ಛೇದನ ವದಂತಿ ಹುಟ್ಟಿತ್ತು. ಇದಾದ ಬಳಿಕ ಅವರು ಮತ್ತೆ ಪತಿಯನ್ನು ಫಾಲೋ ಮಾಡೋಕೆ ಆರಂಭಿಸಿದ್ದರು. ನಂತರ ಅವರು ಹಾಕಿದ್ದ ಸ್ಟೇಟಸ್ ವಿಚ್ಛೇದನ ವದಂತಿಯನ್ನು ಹೆಚ್ಚಿಸಿತ್ತು. ‘ಹೌದು ನಾನು ಕಳೆದು ಹೋಗಿದ್ದೇನೆ’ ಎಂದು ಬರೆದುಕೊಂಡಿದ್ದರು. ಈ ವಿಚಾರದಿಂದ ಫ್ಯಾನ್ಸ್ ಆತಂಕಗೊಂಡಿದ್ದರು.

ಕುಟುಂಬದ ಜೊತೆ ಟ್ರಿಪ್

ನಯನತಾರಾ ನಟನೆಯಿಂದ ಒಂದು ಬ್ರೇಕ್ ಪಡೆದಿದ್ದಾರೆ. ಅವರು ವಿದೇಶಕ್ಕೆ ಹಾರಿದ್ದಾರೆ. ಅವರು ತೆರಳಿದ್ದು ಜೆಡ್ಡಾಗೆ ಎನ್ನಲಾಗಿದೆ. ಈ ಫೋಟೋದಲ್ಲಿ ನಯನತಾರಾ ಒಂದು ಮಗುವನ್ನು ಹಿಡಿದುಕೊಂಡರೆ ವಿಘ್ನೇಶ್ ಅವರನ್ನು ಒಂದು ಮಗುವನ್ನು ಹಿಡಿದಿದ್ದಾರೆ. ‘ನನ್ನ ಬಾಯ್ಸ್ ಜೊತೆ ಹಲವು ಸಮಯದ ಬಳಿಕ ಪ್ರಯಾಣಿಸುತ್ತಿದ್ದೇನೆ’ ಎಂದಿದ್ದಾರೆ ನಯನಾತಾರಾ.

ಇದನ್ನೂ ಓದಿ: ‘ಕಳೆದು ಹೋಗಿದ್ದೇನೆ’: ವಿಚ್ಛೇದನ ವದಂತಿ ಮಧ್ಯೆ ನಿಗೂಢಾರ್ಥದಲ್ಲಿ ಪೋಸ್ಟ್ ಮಾಡಿದ ನಯನತಾರಾ

ನಯನತಾರಾ ಹಾಗೂ ವಿಘ್ನೇಶ್ ಶಿವನ್ ಇತ್ತೀಚೆಗೆ ತಮ್ಮದೇ ಕೆಲಸದಲ್ಲಿ ಬ್ಯುಸಿ ಆಗಿದ್ದರು. ಈ ಕಾರಣಕ್ಕೆ ಎಲ್ಲಿಯೂ ಸುತ್ತಾಟ ನಡೆಸಲು ಸಾಧ್ಯವಾಗಿರಲಿಲ್ಲ. ಈಗ ‘ಎಫ್​ 1’ ರೇಸ್​ ನೋಡಲು ಅವರು ಜೆಡ್ಡಾಗೆ ತೆರಳಲಿದ್ದಾರೆ ಎಂದು ಹೇಳಲಾಗಿದೆ ಎನ್ನಲಾಗುತ್ತಿದೆ.

ನಯನತಾರಾ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರ ನಟನೆಯ ‘ಜವಾನ್’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಿದೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು