AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನ​ ಬದಲು ಮರದ ಜತೆ ನಯನತಾರಾ ಮದುವೆ; ಏನಿದು ಸಮಾಚಾರ?

ವಿಘ್ನೇಶ್​ ಶಿವನ್​ ಮತ್ತು ನಯನತಾರಾ ನಡುವಿನ ಪ್ರೇಮ್​ ಕಹಾನಿ ಗುಟ್ಟಾಗಿ ಉಳಿದಿಲ್ಲ. ಪರಸ್ಪರ ಜೊತೆಯಾಗಿ ಕಾಲ ಕಳೆಯುತ್ತಿರುವ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಎಲ್ಲವನ್ನೂ ಬಹಿರಂಗ ಪಡಿಸಿದ್ದಾರೆ.

ಪ್ರಿಯಕರನ​ ಬದಲು ಮರದ ಜತೆ ನಯನತಾರಾ ಮದುವೆ; ಏನಿದು ಸಮಾಚಾರ?
ವಿಘ್ನೇಶ್​-ನಯನತಾರಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 20, 2021 | 8:51 PM

Share

ಕನ್ನಡದ ‘ಸೂಪರ್​’ ಸಿನಿಮಾದಲ್ಲಿ ಉಪೇಂದ್ರ ಜೊತೆ ತೆರೆ ಹಂಚಿಕೊಳ್ಳುವ ಮೂಲಕ ಕನ್ನಡಿಗರಿಗೆ ಮನರಂಜನೆ ನೀಡಿದ್ದರು ನಟಿ ನಯನತಾರಾ. ಆ ಬಳಿಕ ಅವರು ಕನ್ನಡದ ಯಾವುದೇ ಸಿನಿಮಾದಲ್ಲೂ ನಟಿಸಲಿಲ್ಲ. ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಬ್ಯುಸಿ ಆಗಿರುವ ಅವರು ‘ಲೇಡಿ ಸೂಪರ್​ ಸ್ಟಾರ್’ ಎಂದೇ ಫೇಮಸ್​. ಸಿನಿಮಾ ಜೊತೆಜೊತೆಗೆ ಅವರು ಖಾಸಗಿ ಜೀವನದ ಕಾರಣದಿಂದ ಆಗಾಗ ಸುದ್ದಿ ಆಗುತ್ತಾರೆ. ನಿರ್ದೇಶಕ ವಿಘ್ನೇಶ್​ ಶಿವನ್​ ಜೊತೆ ಅವರು ಬಹುಕಾಲದಿಂದ ಡೇಟಿಂಗ್​ ಮಾಡುತ್ತಿದ್ದಾರೆ. ಶೀಘ್ರವೇ ಇವರ ಮದುವೆ ನಡೆಯಲಿದೆ. ಅಚ್ಚರಿ ಎಂದರೆ, ವಿಘ್ನೇಶ್​ ಜತೆ ಮದುವೆ ಆಗುವುದಕ್ಕೂ ಮೊದಲು ಅವರು ಮರವನ್ನು ಮದುವೆ ಆಗಲಿದ್ದಾರಂತೆ.

ವಿಘ್ನೇಶ್​ ಶಿವನ್​ ಮತ್ತು ನಯನತಾರಾ ನಡುವಿನ ಪ್ರೇಮ್​ ಕಹಾನಿ ಗುಟ್ಟಾಗಿ ಉಳಿದಿಲ್ಲ. ಪರಸ್ಪರ ಜೊತೆಯಾಗಿ ಕಾಲ ಕಳೆಯುತ್ತಿರುವ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಎಲ್ಲವನ್ನೂ ಬಹಿರಂಗ ಪಡಿಸಿದ್ದಾರೆ. ಅವರಿಬ್ಬರ ಮದುವೆ ಪ್ಲ್ಯಾನ್​ ಬಗ್ಗೆ ಪದೇಪದೇ ಸುದ್ದಿ ಕೇಳಿಬರುತ್ತಲೇ ಇರುತ್ತದೆ. ಈಗ ಮದುವೆ ಬಗ್ಗೆ ಅಚ್ಚರಿಯ ಸುದ್ದಿ ಕೇಳಿ ಬಂದಿದೆ.

ನಯನತಾರಾ ಹಾಗೂ ವಿಘ್ನೇಶ್​ ಜ್ಯೋತಿಷ್ಯವನ್ನು ಹೆಚ್ಚು ನಂಬುತ್ತಾರೆ. ಈ ಕಾರಣಕ್ಕೆ ಮದುವೆಗೂ ಮೊದಲು ತಮ್ಮ ಜಾತಕವನ್ನು ಅವರು ತೋರಿಸಿದ್ದಾರೆ. ಇದರಲ್ಲಿ ಕೆಲ ದೋಷಗಳು ಕಂಡಿವೆ. ಈ ಕಾರಣಕ್ಕೆ, ಮೊದಲು ಮರವನ್ನು ಮದುವೆ ಆಗಿ, ನಂತರ ವಿಘ್ನೇಶ್​ ಅವರನ್ನು ಮದುವೆ ಆಗುವಂತೆ ಜ್ಯೋತಿಷಿಗಳು ಸೂಚಿಸಿದ್ದಾರೆ.

ಹಿಂದೂ ಧರ್ಮದ ಪ್ರಕಾರ ಮರ ಅಥವಾ ಪ್ರಾಣಿಯನ್ನು ಮದುವೆ ಆದರೆ ದೋಷ ನಿವಾರಣೆ ಆಗುತ್ತದೆ. ಈ ಕೆಲವರು ಇದನ್ನು ನಂಬುತ್ತಾರೆ. ಅದೇ ರೀತಿ ನಯತಾರಾ ಮತ್ತು ಅವರ ಭಾವಿ ಪತಿ ಕೂಡ ಈ ಶಾಸ್ತ್ರದ ಮೇಲೆ ನಂಬಿಕೆ ಇಟ್ಟಿದ್ದಾರೆ. ಹೀಗಾಗಿ ಅದನ್ನು ಆಚರಿಸೋಕೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ, ಅವರ ಕಡೆಯಿಂದ ಈ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ: Nayanthara: ಗುಟ್ಟಾಗಿ ಎಂಗೇಜ್​ಮೆಂಟ್ ಆದ ನಯನತಾರಾ ಮದುವೆಗೆ ಎಲ್ಲರನ್ನೂ ಕರೀತಾರಂತೆ

ಸೆಟ್ಟೇರಿತು ಶಾರುಖ್- ನಯನತಾರಾ ನಟನೆಯ ನೂತನ ಚಿತ್ರ; ಬಣ್ಣಹಚ್ಚಲಿದ್ದಾರಾ ಪ್ರಿಯಾಮಣಿ, ರಾಣಾ ದಗ್ಗುಬಾಟಿ?

ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!